Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನೀನು ಅವರನ್ನು ಕರೆದುಕೊಂಡು ಹೋಗಿ, ಅವರೊಡನೆ ನಿನ್ನನ್ನು ಶುದ್ಧಿಮಾಡಿಕೊಂಡು ಅವರು ತಮ್ಮ ಕ್ಷೌರದ ಶಪಥವನ್ನು ತೀರಿಸಿಕೊಳ್ಳುವುದಕ್ಕಾಗಿ, ಆಗುವ ವೆಚ್ಚವನ್ನು ನೀನು ಕೊಡು. ಹೀಗೆ ಮಾಡಿದರೆ ಎಲ್ಲರೂ ನಿನ್ನ ವಿಷಯವಾಗಿ ತಾವು ಕೇಳಿದ ಸುದ್ದಿ ನಿಜವಲ್ಲವೆಂತಲೂ, ನೀನು ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತೀ, ಎಂತಲೂ ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನೀನು ಅವರನ್ನು ಕರೆದುಕೊಂಡು ಹೋಗಿ ಅವರ ಜೊತೆಯಲ್ಲಿ ನೀನೂ ಶುದ್ಧಾಚಾರವಿಧಿಯನ್ನು ಮಾಡಿಸಿಕೊ. ಅವರ ಖರ್ಚುವೆಚ್ಚವನ್ನೆಲ್ಲಾ ನೀನೇ ವಹಿಸಿಕೋ. ಅವರು ಮುಂಡನ ಮಾಡಿಸಿಕೊಳ್ಳಲಿ. ಹೀಗೆ ಮಾಡಿದರೆ, ನಿನ್ನ ಬಗ್ಗೆ ಅವರು ಕೇಳಿಸಿಕೊಂಡಿರುವ ವಿಷಯ ನಿಜವಲ್ಲವೆಂದೂ ನೀನು ಕೂಡ ಮೋಶೆಯ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯುತ್ತಿರುವೆ ಎಂದೂ ಅವರೆಲ್ಲರಿಗೂ ಮನವರಿಕೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನೀನು ಅವರನ್ನು ಕರೆದುಕೊಂಡು ಹೋಗಿ ಅವರೊಡನೆ ನಿನ್ನನ್ನು ಶುದ್ಧಿಮಾಡಿಕೊಂಡು ಅವರು ತಮ್ಮ ವ್ರತವನ್ನು ತೀರಿಸಿಕೊಳ್ಳುವದಕ್ಕಾಗಿ ಅವರಿಗೋಸ್ಕರ ಹಣ ವೆಚ್ಚಮಾಡು. ಹೀಗೆ ಮಾಡಿದರೆ ಎಲ್ಲರೂ ನಿನ್ನ ವಿಷಯವಾಗಿ ತಾವು ಕೇಳಿದ ಸುದ್ದಿ ನಿಜವಲ್ಲವೆಂತಲೂ ನೀನಾದರೂ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತೀ ಎಂತಲೂ ತಿಳುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನೀನು ಅವರನ್ನು ನಿನ್ನೊಂದಿಗೆ ಕರೆದುಕೊಂಡು ಹೋಗಿ ಅವರ ಶುದ್ಧಾಚಾರದ ಸಂಪ್ರದಾಯದಲ್ಲಿ ಭಾಗವಹಿಸು. ಅವರ ಖರ್ಚುವೆಚ್ಚನ್ನೆಲ್ಲ ಕೊಡು. ಬಳಿಕ ಅವರು ತಮ್ಮ ತಲೆಬೋಳಿಸಿಕೊಳ್ಳಲಿ. ನೀನು ಹೀಗೆ ಮಾಡಿದರೆ, ನಿನ್ನ ಬಗ್ಗೆ ಅವರು ಕೇಳಿದ ಸಂಗತಿಗಳು ಸತ್ಯವಲ್ಲವೆಂದು ಅವರೆಲ್ಲರಿಗೂ ಮನದಟ್ಟಾಗುವುದು. ಸ್ವತಃ ನೀನೇ ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯನಾಗುತ್ತಿರುವುದನ್ನು ಅವರೆಲ್ಲರೂ ಕಣ್ಣಾರೆ ಕಾಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನೀನು ಇವರನ್ನು ಕರೆದುಕೊಂಡು ಹೋಗಿ, ಅವರೊಂದಿಗೆ ನಿನ್ನನ್ನು ಶುದ್ಧಿಮಾಡಿಕೊಂಡು, ಅವರು ತಮ್ಮ ಕ್ಷೌರ ಮಾಡಿಸಿಕೊಳ್ಳುವ ಖರ್ಚನ್ನು ನೀನೇ ಪೂರೈಸು. ಆಗ ನಿನ್ನ ವಿಷಯದಲ್ಲಿ ಕೇಳಿರುವ ಸಂಗತಿಗಳು ನಿಜವಲ್ಲ ಮತ್ತು ನೀನು ಮೋಶೆಯ ನಿಯಮಕ್ಕನುಸಾರವಾಗಿ ನಡೆದುಕೊಳ್ಳುತ್ತೀ ಎಂದು ಎಲ್ಲರಿಗೂ ತಿಳಿದುಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತಿಯಾ ತೆಂಕಾ ಬಲ್ವುನ್ ಘೆವ್ನ್ ಜಾವ್ನ್ ತೆಂಚ್ಯಾ ವಾಂಗ್ಡಾ ತುಕಾಬಿ ನಿತಳ್ ಕರುನ್ಗೆತ್ ತೆಂಚೆ ಹರಕೆ ಪಾವ್ಸು, ಅಶೆ ಕರ್‍ತಾನಾ ತುಜ್ಯಾ ವಿಶಯಾತ್ ತೆನಿ ಆಯ್ಕಲಿ ಖಬ್ರಿಯಾ ಖರೆ ನ್ಹಯ್ ಮನುನ್, ಅನಿ ತಿಯಾ ಮೊಯ್ಜೆಚ್ಯಾ ಖಾಯ್ದ್ಯಾಚ್ಯಾ ಸಾರ್ಕೆ ಚಲ್ತೈಯ್ ಮನುನ್ ಕಳ್ವುನ್ ಘೆತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:24
20 ತಿಳಿವುಗಳ ಹೋಲಿಕೆ  

ಆಗ ಪೌಲನು ಮರುದಿನ ಆ ನಾಲ್ವರೊಡನೆ ಹೋಗಿ ಶುದ್ಧಾಚಾರದ ವಿಧಿಯನ್ನು ನೆರವೇರಿಸಿದನು. ಅನಂತರ ಶುದ್ಧಾಚಾರ ಮುಗಿಯುವ ದಿನವನ್ನು ತಿಳಿಸುವುದಕ್ಕಾಗಿ ದೇವಾಲಯದೊಳಗೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಬಲಿಯರ್ಪಣೆಯಾಗುವುದೆಂದು ಅಲ್ಲಿ ಸೂಚಿಸಿದನು.


ನಾನು ಶುದ್ಧಮಾಡಿಕೊಂಡವನಾಗಿ, ಅವುಗಳನ್ನು ಒಪ್ಪಿಸುತ್ತಿರುವಲ್ಲಿ, ಇವರು ನನ್ನನ್ನು ದೇವಾಲಯದಲ್ಲಿ ಕಂಡರು; ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಗದ್ದಲವೂ ಇರಲಿಲ್ಲ. ನನ್ನನ್ನು ಕಂಡವರು ಆಸ್ಯಸೀಮೆಯಿಂದ ಬಂದ ಕೆಲವು ಯೆಹೂದ್ಯರೇ.


ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು.


ಯೆಹೂದ್ಯರನ್ನು ಸಂಪಾದಿಸಿಕೊಳ್ಳುವುದಕ್ಕೆ ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಲ್ಲದವನಾದರೂ, ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೋಸ್ಕರ ಧರ್ಮಶಾಸ್ತ್ರಕ್ಕೆ ಅಧೀನನಂತಾದೆನು.


ಮೋಶೆ ಬೆಟ್ಟದಿಂದಿಳಿದು ಜನರ ಬಳಿಗೆ ಬಂದು, ಅವರನ್ನು ಶುದ್ಧಗೊಳಿಸಿದನು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧರಾದರು.


ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮೊದಲು ಅವನು ಅನ್ಯಜನರೊಂದಿಗೆ ಊಟ ಮಾಡುತ್ತಿದ್ದನು. ಅವರು ಬಂದ ಮೇಲೆ ಸುನ್ನತಿಯವರಾದ ಅವರಿಗೆ ಅವನು ಭಯಪಟ್ಟು, ಅನ್ಯಜನರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿಕೊಂಡನು.


ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ, ಬಹು ಜನರು ತಮ್ಮನ್ನು ಶುದ್ಧ ಮಾಡಿಕೊಳ್ಳುವುದಕ್ಕಾಗಿ ಹಬ್ಬಕ್ಕಿಂತ ಮೊದಲೇ ಹಳ್ಳಿಗಳಿಂದ ಯೆರೂಸಲೇಮಿಗೆ ಬಂದರು.


ಹೀಗಿರಲಾಗಿ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಾದ ಉಂಟಾಯಿತು.


ಅದು ಎದ್ದರೆ ಶೂರರು ಕೂಡ ಅಂಜಿ ಹೊಡೆತಗಳಿಂದ ಭಯಭ್ರಾಂತರಾಗುವರು.


ಔತಣದ ಸರದಿ ತೀರಿದ ನಂತರ ಯೋಬನು, “ನನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು” ಎಂದು ಅವರನ್ನು ಕರೆಯಿಸಿ ಶುದ್ಧಿಪಡಿಸಿ, ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುವುದು ದೈನಂದಿನ ಕ್ರಮವಾಗಿತ್ತು.


ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು; ಅವನು ಹುಟ್ಟಿದಂದಿನಿಂದ ದೇವರಿಗೆ ಪ್ರತಿಷ್ಠಿತನಾಗಿರುವನು; ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಲು ಪ್ರಾರಂಭಿಸುವನು” ಅಂದನು.


ಆಗ ನಾಜೀರನು ತನ್ನ ಸಮರ್ಪಣೆಯ ದೀಕ್ಷೆಯನ್ನು ಸೂಚಿಸುವ ತಲೆಯ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.


ನಾಜೀರನು ತನ್ನ ವ್ರತದಿನಗಳು ಮುಗಿದಾಗ ತನ್ನನ್ನು ಸಮರ್ಪಿಸಬೇಕಾದ ಕ್ರಮವನ್ನು ಅನುಸರಿಸಬೇಕು. ಅವನು ದೇವದರ್ಶನದ ಗುಡಾರದ ಬಾಗಿಲಿಗೆ ಬರಬೇಕು.


ಯಾರಾದರೂ ಆಕಸ್ಮಾತ್ತಾಗಿ ಅವನ ಬಳಿಯಲ್ಲೇ ಸತ್ತರೆ, ತಾನು ಪ್ರತಿಷ್ಠಿಸಿಕೊಂಡ ತಲೆಯ ಕೂದಲು ಅಪವಿತ್ರವಾದರೆ ಏಳನೆಯ ದಿನದಲ್ಲಿ ಅಂದರೆ ಶುದ್ಧನಾಗುವ ದಿನದಲ್ಲಿ ತಲೆಯನ್ನು ಕ್ಷೌರಮಾಡಿಸಿಕೊಳ್ಳಬೇಕು.


“ಅವನು ತನ್ನ ಹರಕೆಯ ದಿನಗಳಲ್ಲಿ ಕ್ಷೌರಮಾಡಿಸಿಕೊಳ್ಳಬಾರದು. ಅವನು ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ತಾನು ದೇವರಿಗೆ ಮೀಸಲಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬಿಡಬೇಕು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರ ಬಳಿಗೆ ಹೋಗಿ, ಈ ದಿನ ಮತ್ತು ನಾಳೆ ಅವರನ್ನು ಶುದ್ಧಗೊಳಿಸು. ನನ್ನ ಬರುವಿಕೆಗಾಗಿ ಅವರನ್ನು ಸಿದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು