Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಪೌಲನು ಮರುದಿನ ಆ ನಾಲ್ವರೊಡನೆ ಹೋಗಿ ಶುದ್ಧಾಚಾರದ ವಿಧಿಯನ್ನು ನೆರವೇರಿಸಿದನು. ಅನಂತರ ಶುದ್ಧಾಚಾರ ಮುಗಿಯುವ ದಿನವನ್ನು ತಿಳಿಸುವುದಕ್ಕಾಗಿ ದೇವಾಲಯದೊಳಗೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಬಲಿಯರ್ಪಣೆಯಾಗುವುದೆಂದು ಅಲ್ಲಿ ಸೂಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಂತೆಯೇ ಪೌಲನು ಮಾರನೆಯ ದಿನ ಆ ನಾಲ್ವರೊಡನೆ ಹೋಗಿ ಶುದ್ಧಾಚಾರದವಿಧಿಯನ್ನು ನೆರವೇರಿಸಿದನು. ಅನಂತರ ಶುದ್ಧಾಚಾರ ಮುಗಿಯುವ ದಿನವನ್ನು ತಿಳಿಸುವುದಕ್ಕಾಗಿ ಮಹಾದೇವಾಲಯಕ್ಕೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಬಲಿಯರ್ಪಣೆಯಾಗುವುದೆಂದು ಅಲ್ಲಿ ಸೂಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಗ ಪೌಲನು ಆ ಮನುಷ್ಯರನ್ನು ಕರೆದುಕೊಂಡು ಮರುದಿನ ಅವರೊಡನೆ ತನ್ನನ್ನು ಶುದ್ಧಿಮಾಡಿಕೊಂಡು ವ್ರತದ ದಿವಸಗಳು ಮುಗಿದವೆಂದು ತಿಳಿಸುವವನಾಗಿ ದೇವಾಲಯದೊಳಗೆ ಹೋದನು. ಪ್ರತಿಯೊಬ್ಬನಿಗೋಸ್ಕರ ಮಾಡಬೇಕಾದ ಅರ್ಪಣೆಯನ್ನು ಮುಂದೆ ಅರ್ಪಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಗ ಪೌಲನು ಆ ನಾಲ್ಕುಮಂದಿಯನ್ನು ತನ್ನೊಂದಿಗೆ ಕರೆದುಕೊಂಡು ಹೋದನು. ಮರುದಿನ ಪೌಲನು, ಶುದ್ಧಾಚಾರದ ವ್ರತದಲ್ಲಿ ಭಾಗವಹಿಸಿದನು. ಬಳಿಕ ಅವನು ದೇವಾಲಯಕ್ಕೆ ಹೋಗಿ ಶುದ್ಧಾಚಾರದ ಸಂಪ್ರದಾಯ ಮುಗಿಯುವ ದಿನವನ್ನು ಪ್ರಕಟಿಸಿದನು. ಕೊನೆಯ ದಿನದಲ್ಲಿ ಪ್ರತಿಯೊಬ್ಬ ವ್ಯಕ್ತಿಗಾಗಿಯೂ ಯಜ್ಞವನ್ನರ್ಪಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಮರುದಿನ ಪೌಲನು ಆ ನಾಲ್ವರೊಂದಿಗೆ ತನ್ನನ್ನು ಶುದ್ಧೀಕರಿಸಿಕೊಂಡನು. ಅನಂತರ ಶುದ್ಧಾಚಾರ ಮುಗಿಯುವ ದಿನಗಳ ಬಗ್ಗೆ ತಿಳಿಸುವುದಕ್ಕಾಗಿ ದೇವಾಲಯಕ್ಕೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಅರ್ಪಣೆಯು ಆಗಬೇಕೆಂಬುದರ ಬಗ್ಗೆಯೂ ಸೂಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತನ್ನಾ ಪಾವ್ಲುನ್ ತ್ಯಾ ಚಾರ್ ಜನಾಕ್ನಿ ಅಪ್ನಾಂಚ್ಯಾ ವಾಂಗ್ಡಾ ಬಲ್ವುನ್ ಘೆವ್ನ್ ಗೆಲ್ಯಾನ್, ದುಸ್ರೆ ದಿಸಿ ಪಾವ್ಲುನ್ ಶುದ್ಧಾಚಾರಾಚ್ಯಾ ವ್ರತಾತ್ ಭಾಗ್ ಘೆಟ್ಲ್ಯಾನ್, ಮಾನಾಸರ್ ತೆನಿ ದೆವಾಚ್ಯಾ ಗುಡಿಕ್ ಜಾವ್ನ್ ಶುದ್ದಾಚಾರಾಚಿ ನೆಮಾ ಸಗ್ಳಿ ಸಾರ್‍ತಲೆ ದಿಸಾ ಪರ್ಗಟ್ ಕರ್‍ಲ್ಯಾನ್, ಆಕ್ರಿಚ್ಯಾ ದಿಸಾತ್ನಿ ಹರ್ ಎಕ್ಲೊ ಮಾನುಸ್ ಬಲಿ ದಿತಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:26
6 ತಿಳಿವುಗಳ ಹೋಲಿಕೆ  

ನಾನು ಶುದ್ಧಮಾಡಿಕೊಂಡವನಾಗಿ, ಅವುಗಳನ್ನು ಒಪ್ಪಿಸುತ್ತಿರುವಲ್ಲಿ, ಇವರು ನನ್ನನ್ನು ದೇವಾಲಯದಲ್ಲಿ ಕಂಡರು; ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಗದ್ದಲವೂ ಇರಲಿಲ್ಲ. ನನ್ನನ್ನು ಕಂಡವರು ಆಸ್ಯಸೀಮೆಯಿಂದ ಬಂದ ಕೆಲವು ಯೆಹೂದ್ಯರೇ.


ಯೆಹೂದ್ಯರನ್ನು ಸಂಪಾದಿಸಿಕೊಳ್ಳುವುದಕ್ಕೆ ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಲ್ಲದವನಾದರೂ, ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೋಸ್ಕರ ಧರ್ಮಶಾಸ್ತ್ರಕ್ಕೆ ಅಧೀನನಂತಾದೆನು.


ನೀನು ಅವರನ್ನು ಕರೆದುಕೊಂಡು ಹೋಗಿ, ಅವರೊಡನೆ ನಿನ್ನನ್ನು ಶುದ್ಧಿಮಾಡಿಕೊಂಡು ಅವರು ತಮ್ಮ ಕ್ಷೌರದ ಶಪಥವನ್ನು ತೀರಿಸಿಕೊಳ್ಳುವುದಕ್ಕಾಗಿ, ಆಗುವ ವೆಚ್ಚವನ್ನು ನೀನು ಕೊಡು. ಹೀಗೆ ಮಾಡಿದರೆ ಎಲ್ಲರೂ ನಿನ್ನ ವಿಷಯವಾಗಿ ತಾವು ಕೇಳಿದ ಸುದ್ದಿ ನಿಜವಲ್ಲವೆಂತಲೂ, ನೀನು ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತೀ, ಎಂತಲೂ ತಿಳಿದುಕೊಳ್ಳುವರು.


“ಮನುಷ್ಯನ ಶವ ಸೋಂಕಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.


ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ, ಬಹು ಜನರು ತಮ್ಮನ್ನು ಶುದ್ಧ ಮಾಡಿಕೊಳ್ಳುವುದಕ್ಕಾಗಿ ಹಬ್ಬಕ್ಕಿಂತ ಮೊದಲೇ ಹಳ್ಳಿಗಳಿಂದ ಯೆರೂಸಲೇಮಿಗೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು