Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅಲ್ಲಿಯವರೆಗೆ ಪೌಲನ ಮಾತುಗಳನ್ನು ಅವರು ಕೇಳಿಸಿಕೊಳ್ಳುತ್ತಿದ್ದರು. ಆನಂತರ; “ಇಂಥವನನ್ನು ಭೂಮಿಯಿಂದ ತೆಗೆದುಹಾಕಿಬಿಡು; ಇವನು ಬದುಕುವುದು ಯುಕ್ತವಲ್ಲವೆಂದು” ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇಲ್ಲಿಯವರೆಗೆ ಪೌಲನು ಹೇಳುತ್ತಿದ್ದನ್ನು ಜನರು ಕಿವಿಗೊಟ್ಟು ಕೇಳುತ್ತಿದ್ದರು. ಆಮೇಲೆ ಅವರು, “ಇವನು ಈ ಲೋಕದಿಂದಲೇ ತೊಲಗಬೇಕು; ಇಂಥವನು ಜೀವದಿಂದ ಇರಬಾರದು,” ಎಂದು ಗಟ್ಟಿಯಾಗಿ ಕೂಗಾಡಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಈ ಮಾತಿನ ತನಕ ಅವರು ಕೇಳುತ್ತಿದ್ದರು; ಆಮೇಲೆ - ಇಂಥವನನ್ನು ಭೂವಿುಯಿಂದ ತೆಗೆದುಹಾಕಿಬಿಡು; ಇವನು ಬದುಕುವದು ಯುಕ್ತವಲ್ಲವೆಂದು ಕೂಗಿಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಪೌಲನು ಈ ಕೊನೆಯ ಸಂಗತಿಯನ್ನು ಅಂದರೆ ಯೆಹೂದ್ಯರಲ್ಲದವರ ಬಳಿಗೆ ಹೋಗುವುದರ ಬಗ್ಗೆ ಹೇಳಿದಾಗ ಅವರು ಅವನ ಮಾತಿಗೆ ಕಿವಿಗೊಡುವುದನ್ನು ನಿಲ್ಲಿಸಿ, “ಅವನನ್ನು ಕೊಲ್ಲಿರಿ! ಅವನನ್ನು ಪ್ರಪಂಚದಿಂದ ತೊಲಗಿಸಿರಿ! ಇಂಥ ಮನುಷ್ಯನಿಗೆ ಜೀವಿಸಲು ಅವಕಾಶವನ್ನೇ ಕೊಡಕೂಡದು!” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇದನ್ನು ಹೇಳುವವರೆಗೆ ಜನರು ಪೌಲನ ಮಾತುಗಳನ್ನು ಗಮನವಿಟ್ಟು ಕೇಳುತ್ತಿದ್ದರು. ಅನಂತರ ಅವರು ತಮ್ಮ ಸ್ವರವೆತ್ತಿ, “ಇಂಥವನನ್ನು ಭೂಲೋಕದಿಂದ ತೊಲಗಿಸಿರಿ! ಇವನು ಜೀವಿಸುವುದಕ್ಕೆ ಯೋಗ್ಯನಲ್ಲ!” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಹಿ ಗೊಸ್ಟಿಯಾ ಸಾಂಗ್ತಾನಾ ಸಗ್ಳಿ ಲೊಕಾ ಪಾವ್ಲು ಸಾಂಗ್ತಲೆ ಆಯ್ಕುಲಾಲಿ ಮಾನಾ ತೆನಿ “ಅಸ್ಲ್ಯಾಕ್ನಿ ಜಿಮ್ನಿ ವೈನಾ ಕಾಡುನ್ ಟಾಕುಚೆ ಹ್ಯೊ ಜಿವಾನಿ ರ್‍ಹಾವ್ಕ್ ಯೊಗ್ಯಾನಾ” ಮನುನ್ ಬೊಬ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:22
6 ತಿಳಿವುಗಳ ಹೋಲಿಕೆ  

ಆಗ ಫೆಸ್ತನು; “ಅಗ್ರಿಪ್ಪರಾಜನೇ, ನಮ್ಮ ಸಂಗಡ ಕೂಡಿಬಂದಿರುವ ಎಲ್ಲಾ ಜನರೇ, ಈ ಮನುಷ್ಯನನ್ನು ನೋಡುತ್ತೀರಲ್ಲಾ, ಇವನ ವಿಷಯದಲ್ಲಿ ಯೆಹೂದ್ಯರೆಲ್ಲರೂ, ಇವನು ಇನ್ನು ಮೇಲೆ ಬದುಕಬಾರದೆಂದು ಕೂಗುತ್ತಾ ಯೆರೂಸಲೇಮಿನಲ್ಲಿಯೂ, ಇಲ್ಲಿಯೂ ನನ್ನನ್ನು ಬೇಡಿಕೊಂಡರು.


ಏಕೆಂದರೆ, ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು; “ಅವನನ್ನು ಕೊಲ್ಲಿರಿ” ಎಂದು ಕೂಗುತ್ತಾ ಬೆನ್ನಟ್ಟಿ ಬರುತ್ತಿದ್ದರು.


ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು.


ಆದರೆ ಅವರು, “ಅವನನ್ನು ಕೊಲ್ಲಿಸು, ನಮಗೆ ಬರಬ್ಬನನ್ನು ಬಿಟ್ಟುಕೊಡು” ಎಂದು ಒಟ್ಟಾಗಿ ಕೂಗಿಕೊಂಡರು.


ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು