Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ; “ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯೌವನಸ್ಥನನ್ನು ತಮ್ಮ ಬಳಿಗೆ ಕರೆದುಕೊಂಡು ಹೋಗುವಂತೆ ಬೇಡಿಕೊಂಡನು; ತಮಗೆ ತಿಳಿಸಬೇಕಾದ ಏನೋ ಒಂದು ಮಾತು ಇದೆಯಂತೆ” ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಂತೆಯೇ, ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ, “ಕೈದಿ ಪೌಲನು, ನನ್ನನ್ನು ಕರೆದು, ಈ ಯುವಕನನ್ನು ನಿಮ್ಮಲ್ಲಿಗೆ ಕರೆದುಕೊಂಡು ಬರಲು ತಿಳಿಸಿದನು. ನಿಮಗೆ ಹೇಳಬೇಕಾದ ವಿಷಯವೇನೋ ಇದೆಯಂತೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ - ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯೌವನಸ್ಥನನ್ನು ತಮ್ಮ ಬಳಿಗೆ ಕರೆದುಕೊಂಡು ಹೋಗುವಂತೆ ಬೇಡಿಕೊಂಡನು; ತಮಗೆ ತಿಳಿಸಬೇಕಾದ ಏನೋ ಒಂದು ಮಾತು ಅದೆಯಂತೆ ಎಂಬದಾಗಿ ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದ್ದರಿಂದ ಸೇನಾಧಿಕಾರಿಯು ಪೌಲನ ಸೋದರಳಿಯನನ್ನು ಸೇನಾಧಿಪತಿಯ ಬಳಿಗೆ ಕರೆದುಕೊಂಡು ಹೋದನು. ಆ ಅಧಿಕಾರಿಯು ಸೇನಾಧಿಪತಿಗೆ, “ಈ ಯೌವನಸ್ಥನನ್ನು ನಿನ್ನ ಬಳಿಗೆ ಕರೆದುಕೊಂಡು ಹೋಗಬೇಕೆಂದು ಸೆರೆವಾಸದಲ್ಲಿರುವ ಪೌಲನು ನನ್ನನ್ನು ಕೇಳಿಕೊಂಡನು ಇವನು ನಿನಗೊಂದು ಸಂದೇಶವನ್ನು ತಿಳಿಸಬೇಕೆಂದಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅದರಂತೆ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ, “ನಿಮಗೆ ತಿಳಿಸತಕ್ಕ ವಿಷಯವಿದೆಯೆಂದು ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯುವಕನನ್ನು ನಿಮ್ಮ ಬಳಿ ತರುವಂತೆ ಬೇಡಿಕೊಂಡಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತಸೆ ಹೊವ್ನ್, ಅಧಿಕಾರಿನ್ ಪಾವ್ಲುಚ್ಯಾ ಭೆನಿಚ್ಯಾ ಲೆಕಾಕ್ ಸೈನಿಕಾಂಚ್ಯಾ ಅಧಿಕಾರಿಕ್ಡೆ ನ್ಹೆಲ್ಯಾನ್. ಅನಿ ಹ್ಯಾ ದಾಂಡ್ಗ್ಯಾ ಮಾನ್ಸಾಕ್ ತುಜ್ಯಾಕ್ಡೆ ಬಲ್ವುನ್ ನ್ಹೆ ಮನುನ್ ಬಂಧಿಖಾನ್ಯಾತ್ ಹೊತ್ತ್ಯಾ ಪಾವ್ಲುನ್ ತುಕಾ ಎಕ್ ಖಬರ್ ಧಾಡುನ್ ದಿಲಾ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:18
11 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ ಪೌಲನೆಂಬ ನಾನು ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿದ್ದಾನೆ.


ನೀನು ಯುಕ್ತವಾದದ್ದನ್ನು ಮಾಡಬೇಕೆಂದು ಆಜ್ಞಾಪಿಸುವುದಕ್ಕೆ ನನಗೆ ಕ್ರಿಸ್ತನಲ್ಲಿ ಪೂರ್ಣ ಅಧಿಕಾರವಿದ್ದರೂ ಹಾಗೆ ಆಜ್ಞಾಪಿಸದೇ


ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿಕೊಂಡನು. ಅವರು ಬಂದಾಗ ಅವನು ಅವರಿಗೆ; “ಸಹೋದರರೇ, ನಾನು ನಮ್ಮ ಜನರಿಗೂ, ನಮ್ಮ ಪೂರ್ವಿಕರ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇಮಿನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು.


ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ, ಪೌಲನನ್ನೂ, ಬೇರೆ ಕೆಲವು ಸೆರೆಯವರನ್ನೂ ಔಗುಸ್ತ ಸೇನೆಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.


ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.


ಅದಕ್ಕೆ ಯೇಸು, “ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ಮಾತದೆ” ಅಂದಾಗ ಸೀಮೋನನು, “ಬೋಧಕನೇ, ಹೇಳು” ಅಂದನು.


ಆಮೇಲೆ ಆ ಸೈನಿಕರ ಗುಂಪು ಮತ್ತು ಸಹಸ್ರಾಧಿಪತಿಯೂ, ಯೆಹೂದ್ಯರ ಓಲೇಕಾರರೂ ಯೇಸುವನ್ನು ಹಿಡಿದು ಕಟ್ಟಿದರು.


ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ; “ಈ ಯೌವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಇದೆ” ಎಂದು ಹೇಳಿದನು.


ಸಹಸ್ರಾಧಿಪತಿಯು ಅವನನ್ನು ಕೈಹಿಡಿದು ಒಂದು ಕಡೆಗೆ ಏಕಾಂತವಾಗಿ ಕರೆದುಕೊಂಡು ಹೋಗಿ; “ನೀನು ನನಗೆ ಹೇಳಬೇಕಾದದ್ದು ಏನು?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು