Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಮತ್ತು ಕುದುರೆಗಳನ್ನು ಸಿದ್ಧಮಾಡಿ, ಪೌಲನನ್ನು ಹತ್ತಿಸಿ, ದೇಶಾಧಿಪತಿಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಕುದುರೆಗಳನ್ನು ಸಜ್ಜುಗೊಳಿಸಿ ಪೌಲನನ್ನು ಏರಿಸಿ, ರಾಜ್ಯಪಾಲ ಫೆಲಿಕ್ಸರ ಬಳಿಗೆ ಭದ್ರವಾಗಿ ಕರೆದುಕೊಂಡು ಹೋಗಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮತ್ತು ಕುದುರೆಗಳನ್ನು ಸಿದ್ಧಮಾಡಿ ಪೌಲನನ್ನು ಹತ್ತಿಸಿ ದೇಶಾಧಿಪತಿಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಪೌಲನ ಪ್ರಯಾಣಕ್ಕಾಗಿ ಕೆಲವು ಕುದುರೆಗಳನ್ನು ತೆಗೆದುಕೊ. ರಾಜ್ಯಪಾಲನಾದ ಫೇಲಿಕ್ಸನ ಬಳಿಗೆ ಅವನನ್ನು ಸುರಕ್ಷಿತವಾಗಿ ಕೊಂಡೊಯ್ಯಲೇಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಕುದುರೆಗಳನ್ನು ಸಿದ್ಧಮಾಡಿ ಪೌಲನನ್ನು ಹತ್ತಿಸಿ ಅವನು ಸುರಕ್ಷಿತವಾಗಿ ರಾಜ್ಯಪಾಲ ಫೇಲಿಕ್ಸನ ಬಳಿಗೆ ತಲುಪುವಂತೆ ವ್ಯವಸ್ಥೆಮಾಡಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 “ರಾಜ್ಯ್ ಪಾಲ್ ಫೆಲಿಕ್ಸಾಚ್ಯಾ ಜಗ್ಗೊಳ್ ಪಾವ್ಲುಕ್ ಕಾಯ್ ತರಾಸ್ ನಸ್ತಾನಾ ಬಲ್ವುನ್ ನೆವ್ಕ್ ಪಾಜೆ”, ತಸೆ ಹೊವ್ನ್ ತೆಚ್ಯಾ ಪ್ರಯಾನಾಕ್ ಉಲ್ಲೆ ಘೊಡೆ ತಯಾರ್ ಕರುನ್ ಘೆ, ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:24
14 ತಿಳಿವುಗಳ ಹೋಲಿಕೆ  

ಅವರು ಅನೇಕ ದಿನಗಳು ಅಲ್ಲಿ ತಂಗಿರಲಾಗಿ ಫೆಸ್ತನು ಪೌಲನ ಸಂಗತಿಯನ್ನು ರಾಜನಿಗೆ ತಿಳಿಸಿ ಹೇಳಿದ್ದೇನಂದರೆ; “ಫೇಲಿಕ್ಸನು ಬಿಟ್ಟುಹೋದ ಒಬ್ಬ ಸೆರೆಯವನು ಇದ್ದಾನೆ.


ದೇಶಾಧಿಪತಿಯು ಪೌಲನಿಗೆ; ನೀನು ಮಾತನಾಡಬಹುದೆಂದು ಸನ್ನೆಮಾಡಲು, ಅವನು ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ; “ನೀನು ಅನೇಕ ವರ್ಷಗಳಿಂದ ಈ ದೇಶದ ಜನರಿಗೆ ನ್ಯಾಯಾಧಿಪತಿಯಾಗಿರುತ್ತೀ, ಎಂದು ತಿಳಿದು ನಾನು ಧೈರ್ಯವಾಗಿ ಪ್ರತಿವಾದ ಮಾಡುತ್ತಿದ್ದೇನೆ.


“ಮಹಾರಾಜರಾಜಶ್ರೀ ದೇಶಾಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.


ಸವಾರರು ಕೈಸರೈಯಕ್ಕೆ ಸೇರಿ, ದೇಶಾಧಿಪತಿಗೆ ಪತ್ರವನ್ನು ಒಪ್ಪಿಸಿ, ಪೌಲನನ್ನು ಅವನ ಮುಂದೆ ನಿಲ್ಲಿಸಿದರು.


ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಗಾಯವನು ಕಟ್ಟಿ ತನ್ನ ಸ್ವಂತ ವಾಹನ ಪಶುವಿನ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರೆದುಕೊಂಡು ಹೋಗಿ ಅವನನ್ನು ಆರೈಕೆಮಾಡಿದನು.


ಚಕ್ರವರ್ತಿಯಾದ ತಿಬೇರಿಯನು ಆಳ್ವಿಕೆಗೆ ಬಂದ ಹದಿನೈದನೆಯ ವರ್ಷದಲ್ಲಿ, ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ, ಹೆರೋದನು ಗಲಿಲಾಯಕ್ಕೆ ಉಪರಾಜನೂ, ಅವನ ತಮ್ಮನಾದ ಫಿಲಿಪ್ಪನು ಇತುರಾಯ ತ್ರಕೋನೀತಿ ಸೀಮೆಗಳಿಗೆ ಉಪರಾಜನೂ, ಲುಸನ್ಯನು ಅಬಿಲೇನೆಗೆ ಉಪರಾಜನೂ ಆಗಿರುವಲ್ಲಿ


ಆತನನ್ನು ಕಟ್ಟಿಸಿ ಕರೆದುಕೊಂಡು ಹೋಗಿ ದೇಶಾಧಿಪತಿಯಾದ ಪಿಲಾತನಿಗೆ ಒಪ್ಪಿಸಿದರು.


ತಮ್ಮ ಪ್ರಾಣರಕ್ಷಣೆಗಾಗಿ ಎದ್ದು, ತಮ್ಮ ವಿರುದ್ಧವಾಗಿ ಆಯುಧಗಳೊಡನೆ ನೆರೆದು ಬರುವ ಎಲ್ಲಾ ಜನಾಂಗಗಳವರನ್ನೂ, ಸಂಸ್ಥಾನಗಳವರನ್ನೂ, ಅವರ ಹೆಂಡತಿಯರು ಮಕ್ಕಳು ಸಹಿತವಾಗಿ ಕೊಂದು, ಸಂಹರಿಸಿ, ನಿರ್ನಾಮಗೊಳಿಸಬೇಕು.


ಆಮೇಲೆ ಯೆರೂಸಲೇಮಿಗಾಗಿ ಮಾಡತಕ್ಕ ಕಾರ್ಯದ ವಿಷಯವಾಗಿ ನನ್ನ ದೇವರು ನನ್ನಲ್ಲಿ ಯಾವ ಆಲೋಚನೆಯನ್ನು ಹುಟ್ಟಿಸಿದ್ದಾನೆಂಬುದನ್ನು ಯಾರಿಗೂ ತಿಳಿಸದೆ, ರಾತ್ರಿಯಲ್ಲೆದ್ದು ಕೆಲವು ಜನರನ್ನು ಮಾತ್ರ ಕರೆದುಕೊಂಡು ಹೊರಟೆನು. ನನ್ನ ವಾಹನಪಶುವಿನ ಹೊರತು ಬೇರೆ ಯಾವ ಪಶುವೂ ನನ್ನೊಂದಿಗಿರಲಿಲ್ಲ.


ಇದಲ್ಲದೆ ಈ ಕೆಳಗಣ ಅಭಿಪ್ರಾಯದ ಒಂದು ಪತ್ರವನ್ನು ಬರೆದನು, ಅದೇನೆಂದರೆ;


ಐದು ದಿನಗಳಾದ ಮೇಲೆ ಮಹಾಯಾಜಕನಾದ ಅನನೀಯನು, ಹಿರಿಯರಲ್ಲಿ ಕೆಲವರನ್ನೂ ತೆರ್ತುಲ್ಯನೆಂಬ ಒಬ್ಬ ವಕೀಲನನ್ನೂ ಕರೆದುಕೊಂಡು ಬಂದು, ಪೌಲನ ಮೇಲೆ ದೇಶಾಧಿಪತಿಗೆ ದೂರು ಹೇಳಿದನು.


ನಾವು ಈ ಉಪಕಾರಗಳನ್ನು ಕೃತಜ್ಞತೆಯಿಂದ ಒಪ್ಪಿಕೊಳ್ಳುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು