Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಐದು ದಿನಗಳಾದ ಮೇಲೆ ಮಹಾಯಾಜಕನಾದ ಅನನೀಯನು, ಹಿರಿಯರಲ್ಲಿ ಕೆಲವರನ್ನೂ ತೆರ್ತುಲ್ಯನೆಂಬ ಒಬ್ಬ ವಕೀಲನನ್ನೂ ಕರೆದುಕೊಂಡು ಬಂದು, ಪೌಲನ ಮೇಲೆ ದೇಶಾಧಿಪತಿಗೆ ದೂರು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಐದು ದಿನಗಳ ನಂತರ ಪ್ರಧಾನಯಾಜಕ ಅನನೀಯನು, ಕೆಲವು ಪ್ರಮುಖರನ್ನೂ ತೆರ್ತುಲ್ಲ ಎಂಬ ವಕೀಲನನ್ನೂ ಕರೆದುಕೊಂಡು ಬಂದನು. ಅವರು ರಾಜ್ಯಪಾಲ ಫೆಲಿಕ್ಸನ ಸನ್ನಿಧಾನದಲ್ಲಿ ಪೌಲನ ವಿರುದ್ಧ ದೂರಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಐದು ದಿವಸಗಳಾದ ಮೇಲೆ ಮಹಾಯಾಜಕನಾದ ಅನನೀಯನು ಸಭೇಹಿರಿಯರಲ್ಲಿ ಕೆಲವರನ್ನೂ ತೆರ್ತುಲ್ಲನೆಂಬ ಒಬ್ಬ ವಕೀಲನನ್ನೂ ಕರೆದುಕೊಂಡು ಬಂದು ಪೌಲನ ಮೇಲೆ ದೇಶಾಧಿಪತಿಗೆ ಫಿರಿಯಾದಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಐದು ದಿನಗಳ ನಂತರ, ಪ್ರಧಾನಯಾಜಕ ಅನನೀಯನು ಯೆಹೂದ್ಯರ ಹಿರೀನಾಯಕರಲ್ಲಿ ಕೆಲವರನ್ನು ಮತ್ತು ತೆರ್ತುಲ್ಲ ಎಂಬ ವಕೀಲನನ್ನು ಕರೆದುಕೊಂಡು ರಾಜ್ಯಪಾಲನ ಎದುರಿನಲ್ಲಿ ಪೌಲನ ಮೇಲೆ ದೋಷಾರೋಪಣೆ ಮಾಡಲು ಸೆಜರೇಯ ಪಟ್ಟಣಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಐದು ದಿನಗಳ ನಂತರ ಮಹಾಯಾಜಕ ಅನನೀಯನು ಕೆಲವು ಹಿರಿಯರೊಂದಿಗೆ ಕೈಸರೈಯಕ್ಕೆ ಬಂದನು. ತನ್ನೊಂದಿಗೆ ಟೆರ್ಟುಲಸ್ ಎಂಬ ವಕೀಲನನ್ನು ಕರೆದುಕೊಂಡು ಬಂದು, ರಾಜ್ಯಪಾಲನಿಗೆ ಪೌಲನ ವಿರೋಧವಾಗಿ ದೂರುಗಳನ್ನಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪಾಚ್ ದಿಸಾ ಕಳದ್ದ್ಯಾ ಮಾನಾ ಮುಖ್ಯ್ ಯಾಜಕ್ ಅನನಿಯಾ, ಜುದೆವಾಂಚ್ಯಾ ಜಾನ್ತ್ಯಾ ಮುಖಂಡಾಕ್ನಿ ಉಲ್ಲ್ಯಾ ಲೊಕಾಕ್ನಿ ಅನಿ ತೆರ್ತುಲ್ ಮನ್ತಲ್ಯಾ ವಕಿಲಾಕ್ ಬಲ್ವುನ್ ಘೆವ್ನ್ ರಾಜ್ಯ್ ಪಾಲಾಕ್ಡೆ ಪಾವ್ಲುಚೆರ್ ಚುಕ್ ಸಾಂಗುಚೆ ಮನುನ್ ಯೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:1
15 ತಿಳಿವುಗಳ ಹೋಲಿಕೆ  

ನಾನು ದೇವಾರಾಧನೆಮಾಡುವುದಕ್ಕೆ, ಯೆರೂಸಲೇಮಿಗೆ ಹೋಗಿ, ಹನ್ನೆರಡು ದಿನಗಳು ಮಾತ್ರವಾಗಿದೆಯೆಂದು ನೀನು ತಿಳಿದುಕೊಳ್ಳಬಹುದು.


ಅದಕ್ಕೆ ಮಹಾಯಾಜಕನಾದ ಅನನೀಯನು; ಅವನ ಬಾಯಿಯ ಮೇಲೆ ಹೊಡೆಯಿರಿ ಎಂದು ಹತ್ತಿರದಲ್ಲಿ ನಿಂತಿದ್ದವರಿಗೆ ಅಪ್ಪಣೆ ಕೊಡಲು ಪೌಲನು ಅವನಿಗೆ;


ಅಲ್ಲಿ ಮುಖ್ಯಯಾಜಕನೂ, ಯೆಹೂದ್ಯರಲ್ಲಿ ಪ್ರಮುಖರೂ, ಅವನಿಗೆ ಪೌಲನ ಮೇಲೆ ದೂರು ಹೇಳಿ,


“ನಿನ್ನ ಮೇಲೆ ತಪ್ಪು ಹೊರಿಸುವವರು ಬಂದ ನಂತರ, ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ” ಎಂದು ಹೇಳಿ, ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬುದಾಗಿ ಅಪ್ಪಣೆಮಾಡಿದನು.


ಈ ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ನಡೆಯುತ್ತಿದೆ ಎಂದು ನನಗೆ ತಿಳಿದುಬಂದ್ದುದರಿಂದ ಕೂಡಲೆ, ನಾನು ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ, ಅವನ ವಿರುದ್ಧ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ವಾದ ಮಂಡಿಸುವ ಹಾಗೆ ಅಪ್ಪಣೆ ಕೊಟ್ಟೆನು” ಎಂಬುದೇ.


ಮತ್ತು ಕುದುರೆಗಳನ್ನು ಸಿದ್ಧಮಾಡಿ, ಪೌಲನನ್ನು ಹತ್ತಿಸಿ, ದೇಶಾಧಿಪತಿಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟನು.


ಆ ಏಳು ದಿನಗಳು ಮುಗಿಯುತ್ತಿದ್ದಂತೆ ಅಸ್ಯಸೀಮೆಯಿಂದ ಬಂದಿದ್ದ ಯೆಹೂದ್ಯರು ಪೌಲನನ್ನು ದೇವಾಲಯದಲ್ಲಿ ಕಂಡು ಗುಂಪುಕೂಡಿದ ಜನರೆಲ್ಲರನ್ನು ಚದುರಿಸಿ ಅವನನ್ನು ಹಿಡಿದು;


ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ, ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ.


ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಳ್ಳಬೇಕೆಂದು ನನ್ನ ಬೋಧನೆಯಲ್ಲಿಯೂ, ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೇ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.


ಸಹೋದರರೇ, ನಾನು ಗುಪ್ತವಾಗಿದ್ದ ದೇವರ ಸತ್ಯಾರ್ಥಗಳನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ, ಜ್ಞಾನದಿಂದಾಗಲಿ ಬರಲಿಲ್ಲ.


ನಾನು ಯೆರೂಸಲೇಮಿನಲ್ಲಿದ್ದಾಗ, ಯೆಹೂದ್ಯರ ಮುಖ್ಯಯಾಜಕರೂ, ಹಿರಿಯರೂ ಅವನ ವಿಷಯವಾಗಿ ನನಗೆ ದೂರುಹೇಳಿ ಅವನಿಗೆ ವಿರುದ್ಧವಾಗಿ ತೀರ್ಪು ಆಗಬೇಕೆಂದು ಬೇಡಿಕೊಂಡರು.


ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತು ಅವರಿಗೆ ಉಪನ್ಯಾಸ ಮಾಡಿದನು.


ಪಂಚಾಶತಾಧಿಪತಿ, ಘನವಂತನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರೆಲ್ಲರನ್ನು ತೊಲಗಿಸಿಬಿಡುವೆನು.


ಸವಾರರು ಕೈಸರೈಯಕ್ಕೆ ಸೇರಿ, ದೇಶಾಧಿಪತಿಗೆ ಪತ್ರವನ್ನು ಒಪ್ಪಿಸಿ, ಪೌಲನನ್ನು ಅವನ ಮುಂದೆ ನಿಲ್ಲಿಸಿದರು.


ಪೌಲನನ್ನು ಕರೆಯಿಸಿದನಂತರ ತೆರ್ತುಲ್ಯನು ಅವನ ಮೇಲೆ ತಪ್ಪುಹೊರಿಸುವುದಕ್ಕೆ ಪ್ರಾರಂಭಿಸಿ ಹೀಗಂದನು; “ಮಹಾ ಶ್ರೇಷ್ಠನಾದ ಫೇಲಿಕ್ಸನೇ, ನಿನ್ನ ಮೂಲಕವಾಗಿ ನಮಗೆ ಬಹು ಸಮಾಧಾನ ಉಂಟಾಗುವುದರಿಂದಲೂ, ನಿನ್ನ ಮುಂದಾಲೋಚನೆಯಿಂದ ಈ ದೇಶದ ಜನರಿಗೆ ಎಲ್ಲಾ ವಿಧದಲ್ಲಿಯೂ, ಎಲ್ಲಾ ಸ್ಥಳಗಳಲ್ಲಿಯೂ, ಸುಧಾರಣೆಗಳು ಆಗುವುದರಿಂದಲೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು