Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ಅನ್ಯಾಯ ಮಾಡಿದವನಾಗಿ ಮರಣದಂಡನೆಗೆ ಕಾರಣವಾದ ಏನನ್ನಾದರೂ ಮಾಡಿದ್ದೇಯಾದರೆ ಮರಣ ದಂಡನೆಯನ್ನು ನಿರಾಕರಿಸುವುದಿಲ್ಲ. ಆದರೆ ಇವರು ನನ್ನ ಮೇಲೆ ಹೊರಿಸುವ ಅಪವಾದಗಳು ಪೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹಾಗೇನಾದರೂ ಮಾಡಿ, ಮರಣದಂಡನೆಗೆ ಅರ್ಹನಾಗಿದ್ದರೆ, ಅದಕ್ಕೆ ಗುರಿಯಾಗಲು ಹಿಂಜರಿಯುವುದಿಲ್ಲ. ಆದರೆ ಅವರು ನನ್ನ ವಿರುದ್ಧ ತಂದಿರುವ ಆಪಾದನೆಗಳು ಜೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಚಕ್ರವರ್ತಿಗೇ ಅಪೀಲುಮಾಡಿಕೊಳ್ಳುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನು ಅನ್ಯಾಯ ಮಾಡಿದವನಾಗಿ ಮರಣದಂಡನೆಗೆ ಕಾರಣವಾದ ಯಾವದನ್ನಾದರೂ ನಡಿಸಿದ್ದಾದರೆ ಮರಣದಂಡನೆಯನ್ನು ಬೇಡವೆನ್ನುವದಿಲ್ಲ. ಇವರು ನನ್ನ ಮೇಲೆ ಹೊರಿಸುವ ತಪ್ಪುಗಳಲ್ಲಿ ಒಂದೂ ನಿಜವಲ್ಲದ ಮೇಲೆ ಇವರ ಮೇಲಣ ದಯೆಯಿಂದ ನನ್ನನ್ನು ಒಪ್ಪಿಸಿಕೊಡುವದಕ್ಕೆ ಒಬ್ಬರಿಗೂ ಅಧಿಕಾರವಿಲ್ಲ. ನಾನು ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಎನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೂ ಮರಣಶಿಕ್ಷೆಗೆ ಯೋಗ್ಯವಾದದ್ದೇನಾದರೂ ಮಾಡಿದ ಅಪರಾಧಿ ನಾನಾಗಿದ್ದರೆ, ಸಾಯಲಿಕ್ಕೂ ನಾನು ಹಿಂಜರಿಯುವುದಿಲ್ಲ. ಆದರೆ ಯೆಹೂದ್ಯರು ನನ್ನ ವಿರೋಧವಾಗಿ ತಂದಿರುವ ಆಪಾದನೆಗಳು ಸುಳ್ಳಾದವುಗಳಾದದ್ದರಿಂದ, ನನ್ನನ್ನು ಅವರಿಗೆ ಒಪ್ಪಿಸಲು ಯಾರಿಗೂ ಅಧಿಕಾರವಿಲ್ಲ. ನಾನು ನೇರವಾಗಿ ಕೈಸರನಿಗೇ ಮನವಿ ಮಾಡಿಕೊಳ್ಳುತ್ತೇನೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅನಿ ಮಿಯಾ ಚುಕ್ ಕರಲ್ಲೊ ಹೊವ್ನ್ ಖಾಯ್ದ್ಯಾಂಚ್ಯಾ ಪರ್‍ಕಾರ್ ಮಾಕಾ ಮರ್‍ನಾಚಿ ಶಿಕ್ಷಾ ದಿಲ್ಯಾರ್, ಮಿಯಾ ತೆ ಒಪುನ್ ಘೆತಾ, ಖರೆ ಹೆನಿ ಸಾಂಗ್ತಲೆ ಝುಟೆ ಹೊಲ್ಯಾರ್ ಮಾಕಾ ಹೆಂಚ್ಯಾ ಹಾತಿತ್ ಒಪ್ಸುಕ್ ಕೊನಾಕ್ಡೆಬಿ ಹೊಯ್ನಾ! ಮಾಜಿ ಹಿ ವಿಶಯಾ ಸಿಸರಾಚ್ ಸಮಾ ಕರುನ್ದಿತ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:11
17 ತಿಳಿವುಗಳ ಹೋಲಿಕೆ  

ಅದಕ್ಕೆ ಯೆಹೂದ್ಯರು ವಿರೋಧಿಸಿದ್ದರಿಂದ, ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳಬೇಕಾಗಿ ಬಂದಿತು. ನನ್ನ ಸ್ವಂತ ದೇಶದವರ ಮೇಲೆ ದೋಷಾರೋಪಣೆ ಮಾಡಬೇಕೆಂಬ ಅಭಿಪ್ರಾಯದಿಂದ ಅದನ್ನು ಹೇಳಲಿಲ್ಲ.


ಅಗ್ರಿಪ್ಪನು ಫೆಸ್ತನಿಗೆ; “ಈ ಮನುಷ್ಯನು ಕೈಸರನಿಗೆ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡುಗಡೆ ಮಾಡಬಹುದಿತ್ತು” ಎಂದು ಹೇಳಿದನು.


ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂದಿತು. ಅವನೇ ಕೈಸರನಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ, ಇವನನ್ನು ಕೈಸರನ ಬಳಿಗೆ ಕಳುಹಿಸುವುದಕ್ಕೆ ತೀರ್ಮಾನಿಸಿದೆನು.


ಅದಕ್ಕೆ ಪೌಲನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುವ ತನಕ, ತನ್ನನ್ನು ಕಾಯಬೇಕೆಂದು ಕೇಳಿಕೊಂಡಾಗ ನಾನು ಕೈಸರನ ಬಳಿಗೆ ಕಳುಹಿಸುವ ತನಕ, ಅವನನ್ನು ಕಾಯುವುದಕ್ಕೆ ಅಪ್ಪಣೆಕೊಟ್ಟೆನು ಎಂದು ಹೇಳಿದನು.


ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.


“ನಾನು ಕೈಸರನ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ.


ಅವರು ಪೌಲನನ್ನು ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು; “ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ, ಕೊರಡೆಗಳಿಂದ ಹೊಡಿಸುವುದು ನಿಮಗೆ ನ್ಯಾಯವೋ?” ಎಂದು ಕೇಳಿದನು.


ಪೌಲನು ಪ್ರತಿವಾದ ಮಾಡಬೇಕೆಂದಿದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ; “ಎಲೈ ಯೆಹೂದ್ಯರೇ, ಅನ್ಯಾಯವು, ದುಷ್ಕರ್ಮವು ಇಂಥದೇನಾದರೂ ಇದ್ದಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನೆಯಿಂದ ಕೇಳುವುದು ನ್ಯಾಯವೇ.


ಅದಕ್ಕೆ ಪೌಲನು; “ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರದುಕೊಂಡುಹೋದರೆ ಸರಿ” ಎಂದು ಹೇಳಿದನು.


ನ್ಯಾಯಸ್ಥಾನದಲ್ಲಿ ನನಗೆ ಸಹಾಯ ಉಂಟೆಂದು, ಅನಾಥನ ಮೇಲೆ ಕೈಮಾಡಿದೆನೋ?


ದಾವೀದನು ತನ್ನ ಮನಸ್ಸಿನಲ್ಲಿ, “ನಾನು ಇಲ್ಲೇ ಇದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಸಾಯಲೇಬೇಕು ಆದ್ದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆ ಮೇಲೆ ಸೌಲನು ಇಸ್ರಾಯೇಲ್ಯರ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು. ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು” ಅಂದುಕೊಂಡನು.


“ದೇವಾಧಿದೇವನಾದ ಯೆಹೋವನು ಇದಕ್ಕೆ ಸಾಕ್ಷಿ; ಆ ದೇವಾಧಿದೇವನಾದ ಯೆಹೋವನಿಗೆ ಇದು ಗೊತ್ತಿದೆ. ಇಸ್ರಾಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಯೆಹೋವನ ವಿರುದ್ಧವಾಗಿ ಪಾಪಮಾಡಿದವರು ಆಗಿದ್ದರೆ ಯೆಹೋವನು ನಮ್ಮನ್ನು ಈ ಹೊತ್ತೇ ನಮ್ಮ ಜೀವವನ್ನು ತೆಗೆದುಬಿಡಲಿ.


ಅಲ್ಲದೆ ಯೆರೆಮೀಯನು ಅರಸನಾದ ಚಿದ್ಕೀಯನಿಗೆ, “ನೀವು ನನ್ನನ್ನು ಸೆರೆಯಲ್ಲಿ ಹಾಕಿಸಿದ್ದಕ್ಕೆ ನಾನು ನಿನಗಾಗಲಿ, ನಿನ್ನ ಸೇವಕರಿಗಾಗಲಿ ಅಥವಾ ಈ ಜನರಿಗಾಗಲಿ ಯಾವ ಅಪರಾಧವನ್ನು ಮಾಡಿದೆನು?


ಆಗ, ಫೆಸ್ತನು ತನ್ನ ಸಭೆಯವರ ಸಂಗಡ ಸಮಾಲೋಚನೆಮಾಡಿದ ಮೇಲೆ ಪೌಲನಿಗೆ; “ನೀನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಎಂದೆಯಲ್ಲಾ, ಆದುದರಿಂದ ಕೈಸರನ ಬಳಿಗೇ ಹೋಗಬೇಕು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು