Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮರುದಿನ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಂಗಣದೊಳಗೆ ಸೇರಿಬಂದಾಗ ಫೆಸ್ತನು ಅಪ್ಪಣೆ ಕೊಡಲು, ಪೌಲನನ್ನು ಕರತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಮಾರನೆಯ ದಿನ ಅಗ್ರಿಪ್ಪ ಮತ್ತು ಬೆರ್ನಿಸ್ ಮಹಾಸಡಗರದಿಂದ ಆಗಮಿಸಿದರು. ಸೇನಾಧಿಪತಿಗಳ ಹಾಗೂ ಪುರಪ್ರಮುಖರ ಸಮೇತ ಆಸ್ಥಾನವನ್ನು ಪ್ರವೇಶಿಸಿದರು. ಫೆಸ್ತನ ಆಜ್ಞೆಯ ಪ್ರಕಾರ ಪೌಲನನ್ನು ಹಾಜರುಪಡಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮರುದಿನ ಅಗ್ರಿಪ್ಪರಾಜನೂ ಬೆರ್ನಿಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಸ್ಥಾನದೊಳಗೆ ಸೇರಿದಾಗ ಫೆಸ್ತನು ಅಪ್ಪಣೆಕೊಡಲು ಪೌಲನನ್ನು ಕರತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಮರುದಿನ ಅಗ್ರಿಪ್ಪ ರಾಜ ಮತ್ತು ಬೆರ್ನಿಕೆ ರಾಣಿ ವೈಭವದ ಬಟ್ಟೆಗಳನ್ನು ಧರಿಸಿಕೊಂಡು ಸೇನಾಧಿಕಾರಿಗಳೊಡನೆ ಹಾಗೂ ಸೆಜರೇಯದ ಪ್ರಮುಖರೊಡನೆ ನ್ಯಾಯಾಲಯದೊಳಗೆ ಬಂದರು. ಪೌಲನನ್ನು ಒಳಗೆ ಕರೆದುಕೊಂಡು ಬರಬೇಕೆಂದು ಫೆಸ್ತನು ಸೈನಿಕರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಮರುದಿನ ಅಗ್ರಿಪ್ಪನು ಹಾಗೂ ಬೆರ್ನಿಕೆಯು ಮಹಾ ವೈಭವದಿಂದ ಸೈನ್ಯಾಧಿಕಾರಿಗಳೊಂದಿಗೂ ಪಟ್ಟಣದ ಗಣ್ಯವ್ಯಕ್ತಿಗಳೊಂದಿಗೂ ಆಸ್ಥಾನವನ್ನು ಪ್ರವೇಶಿಸಿದರು. ಫೆಸ್ತನ ಆಜ್ಞೆಯಂತೆ ಪೌಲನನ್ನು ಕರೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ದುಸ್ರ್ಯಾಂದಿಸಿ ಅಗ್ರಿಪ್ಪರಾಜಾ, ಅನಿ ಬೆರ್ನಿಕೆ ರಾನಿ ಆಡಂಬರಾಚೆ ಕಪ್ಡೆನೆಸುನ್ ಘೆವ್ನ್ ಸೈನಿಕಾಂಚ್ಯಾ ಅಧಿಕಾರ್ಯ್ಯಾಚ್ಯಾ ವಾಂಗ್ಡಾ ಅನಿ ಸೆಜರೆಯಾತ್ಲ್ಯಾ ಪ್ರಮುಖ್ ಲೊಕಾಂಚ್ಯಾ ವಾಂಗ್ಡಾ ಝಡ್ತಿ ಕರ್‍ತಲ್ಯಾ ಜಾಗ್ಯಾರ್ ಯೆಲೆ, ತನ್ನಾ ಪಾವ್ಲುಕ್ ಭುತ್ತುರ್ ಹಾನುಚೆ ಮನುನ್ ಫೆಸ್ತಾನ್ ಸೈನಿಕಾಕ್ನಿ ಹುಕುಮ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:23
18 ತಿಳಿವುಗಳ ಹೋಲಿಕೆ  

ಆ ಮೇಲೆ ರಾಜನೂ, ದೇಶಾಧಿಪತಿಯೂ ಮತ್ತು ಬೆರ್ನಿಕೆಯೂ ಅವರ ಸಂಗಡ ಕುಳಿತಿದ್ದವರೂ, ಎದ್ದು ಹೊರಗೆ ಹೋಗಿ;


ಕೆಲವು ದಿನಗಳು ಕಳೆದನಂತರ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ, ಫೆಸ್ತನನ್ನು ಭೇಟಿಯಾಗುವುದಕ್ಕೆ ಕೈಸರೈಯಕ್ಕೆ ಬಂದರು.


ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.


ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.


ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಹುಲ್ಲು ಬಾಡಿ, ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು.


ಲೋಕವನ್ನು ಅನುಭೋಗಿಸುವವರು ಅದನ್ನು ಪರಿಪೂರ್ಣವಾಗಿ ಅನುಭೋಗಿಸದವರಂತೆಯೂ ಇರಬೇಕು. ಯಾಕೆಂದರೆ ಈ ಪ್ರಪಂಚದ ಆಡಂಬರವು ಗತಿಸಿ ಹೋಗುತ್ತದೆ.


ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತು ಅವರಿಗೆ ಉಪನ್ಯಾಸ ಮಾಡಿದನು.


ಕರ್ತನು ಅವನಿಗೆ, “ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.


ನಾನು ದೇಶವನ್ನು ಹಾಳುಮಾಡುವೆನು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು; ಇಸ್ರಾಯೇಲಿನ ಪರ್ವತಗಳು ಹಾಳಾಗಿರುವುದರಿಂದ ಯಾರೂ ಅಲ್ಲಿ ಹಾದು ಹೋಗುವುದಿಲ್ಲ.


ನಾನು ನಿನ್ನ ಪ್ರಜೆಯನ್ನು ಅತಿಭಯಂಕರ ಜನಾಂಗದವರಾದ ಬಲಿಷ್ಠರ ಕತ್ತಿಗಳಿಂದ ಸಂಹರಿಸುವೆನು. ಅವರು ಐಗುಪ್ತದ ಮಹತ್ತನ್ನು ನಾಶ ಮಾಡುವರು. ಅದರ ಜನ ಸಮೂಹವೆಲ್ಲಾ ನಿರ್ನಾಮವಾಗುವುದು.


ಐಗುಪ್ತವು ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ, ಅಲ್ಲಿ ಹೊತ್ತು ಮೂಡದು. ಅದರ ಶಕ್ತಿಯ ಅಹಂಕಾರವು ಅಡಗಿ ಹೋಗುವುದು, ಕಾರ್ಮುಗಿಲು ಅದನ್ನು ಆವರಿಸುವುದು, ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.


ಹೀಗಿರಲು ನಾನು ಅತಿ ದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುದು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರ ಸ್ಥಾನಗಳು ಹೊಲೆಗೆಡುವವು.


ನಿನ್ನ ವೈಭವವೂ ವೀಣಾನಾದದೊಂದಿಗೆ ಪಾತಾಳಕ್ಕೆ ತಳ್ಳಲ್ಪಟ್ಟಿವೆ. ನಿನಗೆ ಹುಳಗಳೇ ಹಾಸಿಗೆ, ಕ್ರಿಮಿಗಳೇ ನಿನ್ನ ಹೊದಿಕೆಯು.


ಹೀಗಿರುವುದರಿಂದ ಪಾತಾಳವು ಹೆಚ್ಚು ಆತುರದಿಂದ ಅಗಾಧವಾಗಿ ಬಾಯಿ ತೆರೆಯಲು, ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲವುಗಳು ಅದರೊಳಗೆ ಬಿದ್ದುಹೋಗುವವು.


ಪ್ರಸಂಗಿಯು ಹೀಗೆ ಹೇಳುತ್ತಾನೆ. “ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ.


ಅವನು ಅನೇಕ ದಿನ ಅಂದರೆ, ನೂರ ಎಂಭತ್ತು ದಿನಗಳವರೆಗೂ ಅವರಿಗೆ ತನ್ನ ಘನವಾದ ರಾಜ್ಯದ ಐಶ್ವರ್ಯವನ್ನೂ ಮತ್ತು ಮಹಾಮಹಿಮೆಯ ವೈಭವದ ಪ್ರತಾಪಗಳನ್ನೂ ಪ್ರದರ್ಶಿಸಿದನು.


ಆದರೆ ಹೆರೋದ್ಯಳಿಗೆ ಅನುಕೂಲವಾದ ದಿನ ಬಂದಿತು; ಹೇಗೆಂದರೆ ಹೆರೋದನು ತನ್ನ ಜನ್ಮದಿನದಂದು ಪ್ರಭುಗಳಿಗೂ, ಸಹಸ್ರಾಧಿಪತಿಗಳಿಗೂ, ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಏರ್ಪಡಿಸಿದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು