Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು ಬಂದ ಮೇಲೆ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು, ಅವನ ಸುತ್ತಲು ನಿಂತುಕೊಂಡು ತಾವು ಸಾಬೀತುಪಡಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪೌಲನು ಅಲ್ಲಿಗೆ ಬಂದಾಗ, ಜೆರುಸಲೇಮಿನಿಂದ ಆಗಮಿಸಿದ್ದ ಯೆಹೂದ್ಯರು ಅವನ ಸುತ್ತಲೂ ನಿಂತು ಅವನ ವಿರುದ್ಧ ಹಲವಾರು ತೀವ್ರ ಆಪಾದನೆಗಳನ್ನು ಹೊರಿಸಿದರು. ಆದರೆ ಅವುಗಳನ್ನು ರುಜುವಾತುಪಡಿಸಲು ಅವರಿಂದಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ಬಂದ ಮೇಲೆ ಯೆರೂಸಲೇವಿುನಿಂದ ಬಂದಿದ್ದ ಯೆಹೂದ್ಯರು ಅವನ ಸುತ್ತಲು ನಿಂತುಕೊಂಡು ತಾವು ಸ್ಥಾಪಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪೌಲನು ನ್ಯಾಯಾಲಯದೊಳಗೆ ಬಂದನು. ಜೆರುಸಲೇಮಿನಿಂದ ಬಂದಿದ್ದ ಯೆಹೂದ್ಯರು ಅವನ ಸುತ್ತಲೂ ನಿಂತುಕೊಂಡು ಅವನ ಮೇಲೆ ಅನೇಕ ದೋಷಾರೋಪಗಳನ್ನು ಮಾಡಿದರು. ಆದರೆ ಅವುಗಳಲ್ಲಿ ಯಾವುದಕ್ಕೂ ಆಧಾರವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪೌಲನು ಅಲ್ಲಿಗೆ ಬಂದಾಗ, ಯೆರೂಸಲೇಮಿನಿಂದ ಬಂದ ಯೆಹೂದ್ಯರು ಅವನ ಸುತ್ತಲೂ ಎದ್ದು ನಿಂತು, ಅನೇಕ ತೀವ್ರ ಆಪಾದನೆಗಳನ್ನು ಅವನ ವಿರುದ್ಧ ಹೊರಿಸಿದರು. ಆದರೆ ಅವುಗಳನ್ನು ರುಜುವಾತುಪಡಿಸಲು ಅವರಿಗೆ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಪಾವ್ಲು ಝಡ್ತಿ ಕರ್‍ತಲ್ಯಾ ಜಾಗ್ಯಾಕ್ ಯೆಲೊ ಜೆರುಜಲೆಮಾತ್ನಾ ಜುದೆವಾಂಚಿ ಲೊಕಾ ತೆಚ್ಯಾ ಆಜುಭಾಜುಕ್ ಇಬೆ ರ್‍ಹಾವ್ನ್ ಲೈ ಚುಕ್ ಸಾಂಗುಲಾಗ್ಲೆ ತ್ಯಾತುರ್‍ಲೆ ಎಕ್ಬಿ ಖರೆ ನತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:7
16 ತಿಳಿವುಗಳ ಹೋಲಿಕೆ  

ಇದಲ್ಲದೆ ಇವರು ಈಗ ನನ್ನ ಮೇಲೆಹೊರಿಸುವ ತಪ್ಪುಗಳನ್ನು ನಿಜವೆಂದು ನಿನಗೆ ತೋರಿಸಲಾರರು.


ಆಗ ಫೆಸ್ತನು; “ಅಗ್ರಿಪ್ಪರಾಜನೇ, ನಮ್ಮ ಸಂಗಡ ಕೂಡಿಬಂದಿರುವ ಎಲ್ಲಾ ಜನರೇ, ಈ ಮನುಷ್ಯನನ್ನು ನೋಡುತ್ತೀರಲ್ಲಾ, ಇವನ ವಿಷಯದಲ್ಲಿ ಯೆಹೂದ್ಯರೆಲ್ಲರೂ, ಇವನು ಇನ್ನು ಮೇಲೆ ಬದುಕಬಾರದೆಂದು ಕೂಗುತ್ತಾ ಯೆರೂಸಲೇಮಿನಲ್ಲಿಯೂ, ಇಲ್ಲಿಯೂ ನನ್ನನ್ನು ಬೇಡಿಕೊಂಡರು.


ಮುಖ್ಯಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಆತನ ಕುರಿತು ಬಹು ತೀವ್ರವಾಗಿ ಆರೋಪಿಸುತ್ತಿದ್ದರು.


“ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.


ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ.


“ಇಸ್ರಾಯೇಲ್‍ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ” ಎಂದು ಕೂಗಿದರು.


ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ.


ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಎಲ್ಲರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗಗಳವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗಿಂತ ಭಿನ್ನವಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವುದೇ ಇಲ್ಲ, ಅರಸನು ಅವರನ್ನು ಸುಮ್ಮನೆ ಬಿಡುವುದು ಉಚಿತವಲ್ಲ.


ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥಗಳನ್ನು ಪರಿಶೋಧಿಸಿ ತಿಳಿದುಕೊಳ್ಳುವುದು ಸೂಕ್ತ ಎಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣವು ರಾಜಕಂಟಕವಾದ ಪಟ್ಟಣವು. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥದು, ಪೂರ್ವಕಾಲದಿಂದಲೇ ದಂಗೆಯೆಬ್ಬಿಸುವಂಥದು ಎಂಬುದೂ ಆ ಕಾರಣದಿಂದಲೇ ಈ ಪಟ್ಟಣವು ನೆಲಸಮವಾಯಿತು ಎಂದು ಆ ಚರಿತ್ರಾ ಗ್ರಂಥದಲ್ಲಿ ಕಂಡುಬರುತ್ತದೆ.


ತರುವಾಯ ಯೆರೂಸಲೇಮಿನಿಂದ ಫರಿಸಾಯರೂ, ಶಾಸ್ತ್ರಿಗಳೂ ಯೇಸುವಿನ ಬಳಿಗೆ ಬಂದು,


ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು