Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಅಗ್ರಿಪ್ಪನು, ಪೌಲನಿಗೆ; “ನೀನು ನಿನ್ನ ಪರವಾಗಿ ಮಾತನಾಡಬಹುದು” ಅನ್ನಲು, ಪೌಲನು ಕೈಯೆತ್ತಿ, ಪ್ರತಿವಾದ ಮಾಡಿದ್ದೇನಂದರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಗ್ರಿಪ್ಪನು ಪೌಲನಿಗೆ ಮಾತನಾಡಲು ಅಪ್ಪಣೆಕೊಡುತ್ತಾ, “ಈಗ ನಿನ್ನ ಪರವಾಗಿ ನೀನು ಮಾತನಾಡಬಹುದು,” ಎಂದನು. ಪೌಲನು ಕೈಯೆತ್ತಿ ಹೀಗೆ ವಾದಿಸತೊಡಗಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಅಗ್ರಿಪ್ಪನು ಪೌಲನಿಗೆ - ನೀನು ನಿನ್ನ ಪಕ್ಷದಲ್ಲಿ ಮಾತಾಡಬಹುದು ಅನ್ನಲು ಪೌಲನು ಕೈಯೆತ್ತಿ ಪ್ರತಿವಾದ ಮಾಡಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಗ್ರಿಪ್ಪನು ಪೌಲನಿಗೆ, “ಈಗ ನೀನು ನಿನ್ನ ಪರವಾಗಿ ಮಾತಾಡಬಹುದು” ಎಂದು ಹೇಳಿದನು. ಆಗ ಪೌಲನು ತನ್ನ ಕೈಯೆತ್ತಿ ಮಾತಾಡಲಾರಂಭಿಸಿ ಹೀಗೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಅಗ್ರಿಪ್ಪನು, “ನಿನ್ನ ಪರವಾಗಿ ಮಾತನಾಡಲು ನಿನಗೆ ಅಪ್ಪಣೆಯಿದೆ,” ಎಂದು ಪೌಲನಿಗೆ ಹೇಳಿದನು. ಆಗ ಪೌಲನು ಕೈಯೆತ್ತಿ ಹೀಗೆ ಪ್ರತಿವಾದಿಸತೊಡಗಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅಗ್ರಿಪ್ಪ್ ರಾಜಾನ್ ಪಾವ್ಲುಕ್, ಅತ್ತಾ ತಿಯಾ ತುಜ್ಯಾ ವೈನಾ ಬೊಲುಕ್ ಹೊತಾ ಮನುನ್ ಸಾಂಗ್ಲ್ಯಾನ್, ತನ್ನಾ ಪಾವ್ಲುನ್ ಅಪ್ನಾಚೆ ಹಾತ್ ಉಕ್ಲುನ್ ಅಸೊ ಬೊಲುಕ್‍ ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:1
12 ತಿಳಿವುಗಳ ಹೋಲಿಕೆ  

ಕರ್ತನು ಅವನಿಗೆ, “ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


“ಅಗ್ರಿಪ್ಪರಾಜನೇ, ಯೆಹೂದ್ಯರು ನನ್ನ ಮೇಲೆ ಆರೋಪಿಸುವ ಎಲ್ಲಾ ಆರೋಪಗಳ ವಿಷಯವಾಗಿ ನಿನ್ನ ಎದುರಿನಲ್ಲಿ ನಾನು ಈಹೊತ್ತು ಪ್ರತಿವಾದ ಮಾಡಬೇಕಾಗಿರುವುದರಿಂದ, ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.


ಅವನು ಅವರಿಗೆ “ನಮ್ಮ ಧರ್ಮಶಾಸ್ತ್ರವು ಮೊದಲು ಒಬ್ಬನನ್ನು ವಿಚಾರಿಸಿ ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ಅವನ ವಿಷಯವಾಗಿ ಖಂಡನೆ ಮಾಡುವುದುಂಟೇ?” ಎಂದು ಹೇಳಿದ್ದಕ್ಕೆ,


ನಾನು ಕರೆದಾಗ ನೀವು ತಿರಸ್ಕರಿಸಿದಿರಿ. ಕೈ ಚಾಚಿದರೂ ಯಾರೂ ನನ್ನನ್ನು ಗಮನಿಸಲಿಲ್ಲ;


ಆದರೆ ಅವನು ಇಸ್ರಾಯೇಲ್ಯರನ್ನು ಕುರಿತು, “ನನ್ನ ಮಾತಿಗೆ ಅವಿಧೇಯರಾಗಿ ಎದುರುಮಾತನಾಡುವ ಜನರನ್ನು ನಾನು ದಿನವೆಲ್ಲಾ ಎಡೆಬಿಡದೆ ಕೈ ಚಾಚಿ ಕರೆದೆನೆಂದು” ಆತನು ಹೇಳುತ್ತಾನೆ.


“ನಾನು ಅವರಿಗೆ; ಪ್ರತಿವಾದಿಯು ವಾದಿಗಳಿಗೆ, ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷದ ವಿಷಯದಲ್ಲಿ ಪ್ರತಿವಾದಮಾಡುವುದಕ್ಕೆ ಎಡೆಕೊಡದೆ, ಅವನನ್ನು ಒಪ್ಪಿಸಿಬಿಡುವುದು ರೋಮಾಯರ ಪದ್ಧತಿಯಲ್ಲವೆಂದು” ಹೇಳಿದೆನು.


“ಸಹೋದರರೇ, ತಂದೆಗಳೇ, ಈಗ ನಾನು ನೀಡುವ ಸಮರ್ಥನೆಯ ಮಾತನ್ನು ಕೇಳಿರಿ” ಎಂದು ಹೇಳಿದನು.


ಮೊದಲು ವಾದಿಸುವವನು ನ್ಯಾಯವಾದಿ ಎಂದು ತೋರುವನು, ಪ್ರತಿವಾದಿ ಎದ್ದ ಮೇಲೆ ಅವನ ಪರೀಕ್ಷೆ ಆಗುವುದು.


ಗಮನಿಸದೆ ಉತ್ತರಕೊಡುವವನು, ಮೂರ್ಖನೆಂಬ ಅವಮಾನಕ್ಕೆ ಗುರಿಯಾಗುವನು.


ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆನು; ನಿನ್ನನ್ನು ದ್ವೇಷಿಸಿ ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯದ ಕುಮಾರ್ತೆಯರ ಕೈಗೆ ನಿನ್ನನ್ನು ಸಿಕ್ಕಿಸಿದೆನು.


ನಿನ್ನ ಕಟ್ಟಳೆಗಳ ವಿಷಯವಾಗಿ, ಅರಸುಗಳ ಮುಂದೆಯೂ ಮಾತನಾಡುವೆನು, ನಾಚಿಕೆಪಡುವುದಿಲ್ಲ.


ಆದುದರಿಂದ ವಿಚಾರಣೆಯಾದ ಮೇಲೆ ಬರೆಯುವುದಕ್ಕೆ ಏನಾದರೂ ಸಿಕ್ಕೀತೆಂದು, ಇವನನ್ನು ನಿಮ್ಮ ಮುಂದೆ ಮುಖ್ಯವಾಗಿ ಅಗ್ರಿಪ್ಪರಾಜನೇ ನಿನ್ನ ಮುಂದೆ ಕರೆಯಿಸಿದ್ದೇನೆ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು