Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆರೂಸಲೇಮಿನಲ್ಲಿ ಹಾಗೆಯೇ ಮಾಡಿದ್ದೆನು. ಮುಖ್ಯಯಾಜಕರಿಂದ, ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇರಿಸಿ, ಅವರಿಗೆ ಮರಣದ ತೀರ್ಪಾದಾಗ, ನಾನು ಅದಕ್ಕೆ ಸಮ್ಮತಿಯನ್ನು ಸೂಚಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಂತೆಯೇ ಜೆರುಸಲೇಮಿನಲ್ಲೇ ಈ ಕಾರ್ಯವನ್ನು ಆರಂಭಿಸಿದೆ . ಮುಖ್ಯ ಯಾಜಕರಿಂದ ಅಧಿಕಾರ ಪಡೆದು ದೇವಜನರಲ್ಲಿ ಅನೇಕರನ್ನು ನಾನು ಸೆರೆಮನೆಗೆ ತಳ್ಳಿದೆ. ಅವರಿಗೆ ಮರಣದಂಡನೆ ವಿಧಿಸಿದಾಗ ನಾನೂ ಅದನ್ನು ಅನುಮೋದಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆರೂಸಲೇವಿುನಲ್ಲಿ ಹಾಗೆಯೇ ನಡಿಸಿದೆನು. ಮಹಾಯಾಜಕರಿಂದ ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇಡಿಸಿ ಅವರಿಗೆ ಮರಣದ ತೀರ್ಪಾದಾಗ ನನ್ನ ಸಮ್ಮತಿಯನ್ನು ಸೂಚಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಜೆರುಸಲೇಮಿನಲ್ಲಿ ವಿಶ್ವಾಸಿಗಳ ವಿರೋಧವಾಗಿ ಅನೇಕ ಕಾರ್ಯಗಳನ್ನು ಮಾಡಿದೆ. ಈ ವಿಶ್ವಾಸಿಗಳಲ್ಲಿ ಅನೇಕರನ್ನು ಸೆರೆಮನೆಗೆ ಹಾಕಲು ಮಹಾಯಾಜಕರು ನನಗೆ ಅಧಿಕಾರವನ್ನು ಕೊಟ್ಟರು. ಯೇಸುವಿನ ಶಿಷ್ಯರನ್ನು ಕೊಂದಾಗ ಅದಕ್ಕೆ ನಾನೂ ನನ್ನ ಸಮ್ಮತಿಯನ್ನು ಸೂಚಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹಾಗೆಯೇ ನಾನು ಯೆರೂಸಲೇಮಿನಲ್ಲಿ ಮಾಡಿದೆನು. ಮುಖ್ಯಯಾಜಕರ ಅಧಿಕಾರ ಪಡೆದು ಅನೇಕ ಭಕ್ತರನ್ನು ಸೆರೆಮನೆಗೆ ಹಾಕಿಸಿದೆನು. ಅವರನ್ನು ಮರಣದಂಡನೆಗೆ ಒಪ್ಪಿಸುವಾಗ, ಅವರಿಗೆ ವಿರುದ್ಧವಾಗಿ ಮತ ಚಲಾಯಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆರುಜಲೆಮಾತ್ ದೆವಾಚ್ಯಾ ಲೊಕಾಕ್ನಿ ವಿರೊಧ್ ಹೊವ್ನ್ ಲೈ ಕಾಮಾ ಕರಲ್ಲೊ ಹ್ಯಾ ದೆವಾಚ್ಯಾ ಲೊಕಾಕ್ನಿ ಬಂದಿಖಾನ್ಯಾತ್ ಘಾಲುಕ್ ಮುಖ್ಯ್ ಯಾಜಕಾನಿ ಮಾಕಾ ಅಧಿಕಾರ್ ದಿಲ್ಯಾನಿ, ಜೆಜುಚ್ಯಾ ಸಿಸಾಕ್ನಿ ಜಿವಾನಿ ಮಾರಲ್ಲ್ಯಾ ತನ್ನಾ ಮಿಯಾ ತೆಕಾ ಒಪ್ಗಿ ದಿಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:10
17 ತಿಳಿವುಗಳ ಹೋಲಿಕೆ  

ಆದರೆ ಸೌಲನು ಮನೆಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದುಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ನಾಶಮಾಡುತ್ತಿದ್ದನು.


ಕೇಳಿದವರೆಲ್ಲರು ಬೆರಗಾಗಿ; “ಯೇಸುಕ್ರಿಸ್ತನ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ನಾಶಮಾಡುತ್ತಿದ್ದವನು ಇವನಲ್ಲವೇ. ಅಂಥವರನ್ನು ಬೇಡಿಹಾಕಿಸಿ ಮುಖ್ಯಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂದು ಇಲ್ಲಿಗೆ ಬಂದಿರುವನಲ್ಲವೇ” ಎಂದು ಮಾತನಾಡಿಕೊಂಡರು.


ನಾನಂತೂ ಅಪೊಸ್ತಲರಲ್ಲಿ ಕನಿಷ್ಠನು; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ.


ಅವನು ಯೆರೂಸಲೇಮಿಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಪಟ್ಟಾಗ, ಅಲ್ಲಿ ಇದ್ದವರು ಅವನನ್ನು ಯೇಸುವಿನ ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು.


ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.


ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.


ಆ ಸ್ತ್ರೀಯು ನೀತಿವಂತರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವುದೇನಂದರೆ,


ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದೆಂದು ನೀವು ಕೇಳಿದ್ದೀರಿ. ನಾನು ದೇವರ ಸಭೆಯನ್ನು ಬಹಳವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.


ಅವನು ಆಕೆಯನ್ನು ಕೈಹಿಡಿದು ಎಬ್ಬಿಸಿ, ಅಲ್ಲಿದ್ದ ವಿಧವೆಯರನ್ನು ಮತ್ತು ದೇವಜನರನ್ನೂ ಕರೆದು, ಜೀವಿತಳಾದ ಆಕೆಯನ್ನು ಅವರೆದುರಿಗೆ ನಿಲ್ಲಿಸಿದನು.


ಪೇತ್ರನು ಎಲ್ಲಾ ಕಡೆಗಳಲ್ಲಿಯೂ ಸಂಚಾರಮಾಡುತ್ತಿರುವಾಗ, ಲುದ್ದದಲ್ಲಿ ವಾಸವಾಗಿದ್ದ ದೇವಜನರ ಬಳಿಗೂ ಬಂದನು.


ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ, “ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು” ಎಂದು ಹೇಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು