Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಎಲ್ಲಾ ಸಭಾಮಂದಿರಗಳಲ್ಲಿಯೂ, ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ, ಅವರನ್ನು ಹಿಂಸೆಪಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅನೇಕ ಬಾರಿ ನಾನು ಅವರನ್ನು ಪ್ರಾರ್ಥನಾಮಂದಿರಗಳಲ್ಲೆಲ್ಲಾ ಬಾಧೆಪಡಿಸಿದೆ. ಹೀಗೆ, ವಿಶ್ವಾಸಭ್ರಷ್ಟರಾಗುವಂತೆ ಬಲಾತ್ಕರಿಸಿದೆ. ನನ್ನ ಕೋಪೋದ್ರೇಕಕ್ಕೆ ಎಲ್ಲೆ ಇರಲಿಲ್ಲ. ಹೊರನಾಡಿನ ಊರುಗಳಿಗೂ ಅವರನ್ನು ಬೆನ್ನಟ್ಟಿಹೋಗಿ ಹಿಂಸೆಪಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಎಲ್ಲಾ ಸಭಾಮಂದಿರಗಳಲ್ಲಿಯೂ ನಾನು ಅನೇಕಾವರ್ತಿ ಅವರನ್ನು ದಂಡಿಸಿ ಅವರಿಂದ ದೂಷಣೆಯ ಮಾತುಗಳನ್ನಾಡಿಸುವದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಪರಪಟ್ಟಣಗಳ ತನಕ ಅವರನ್ನು ಹಿಂಸೆಪಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪ್ರತಿಯೊಂದು ಸಭಾಮಂದಿರದಲ್ಲಿಯೂ ನಾನು ಅವರನ್ನು ದಂಡಿಸಿದೆನು. ಯೇಸುವಿನ ವಿರುದ್ಧ ದೂಷಣೆಯ ಮಾತುಗಳನ್ನು ಅವರ ಬಾಯಿಂದ ಹೊರಡಿಸಲು ನಾನು ಪ್ರಯತ್ನಿಸಿದೆನು. ಆ ವಿಶ್ವಾಸಿಗಳ ಮೇಲೆ ಬಹುಕೋಪವುಳ್ಳವನಾಗಿದ್ದು ಅವರನ್ನು ಹುಡುಕಿಹುಡುಕಿ ಹಿಂಸಿಸುವುದಕ್ಕಾಗಿ ವಿದೇಶದ ಪಟ್ಟಣಗಳಿಗೂ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅನೇಕ ಸಲ ಅವರನ್ನು ದಂಡಿಸಲು ನಾನು ಒಂದು ಸಭಾಮಂದಿರದಿಂದ ಇನ್ನೊಂದು ಸಭಾಮಂದಿರಕ್ಕೆ ಹೋಗಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆ. ಇದಲ್ಲದೆ ಅವರ ಮೇಲೆ ಬಹು ಕೋಪಗೊಂಡವನಾಗಿ ನಾನು ಅವರನ್ನು ಹಿಂಸಿಸಲು ವಿದೇಶಿ ಪಟ್ಟಣಗಳಿಗೂ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಹರ್ ಎಕ್ ಸಿನಾಗೊತ್ನಿ ಮಿಯಾ ತೆಂಕಾ ಶಿಕ್ಷಾ ದಿಲಾ ಜೆಜುಚ್ಯಾ ವರ್‍ತಿ ವಿರೊಧ್ ಹೊವ್ನ್ ತೆಂಚ್ಯಾ ತೊಂಡಾನಿ ಸಾಂಗುಕ್ ಮಿಯಾ ಕಸರತ್ ಕರ್‍ಲೊ ತ್ಯಾ ದೆವಾಚ್ಯಾ ಲೊಕಾಚ್ಯಾ ವರ್‍ತಿ ಲೈ ರಾಗ್ ಹೊವ್ನ್ ತೆಂಕಾ ಹುಡ್ಕುನ್ ತರಾಸ್ ದಿವ್ಕ್ ದುಸ್ರ್ಯಾ ದೆಶಾತ್ ಅನಿ ಶಾರಾಕ್ನಿ ಗೆಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:11
17 ತಿಳಿವುಗಳ ಹೋಲಿಕೆ  

“ಅದಕ್ಕೆ ನಾನು; ‘ಕರ್ತನೇ, ಎಲ್ಲಾ ಸಭಾಮಂದಿರಗಳಲ್ಲಿ, ನಿನ್ನ ಮೇಲೆ ನಂಬಿಕೆಯಿಟ್ಟವರನ್ನು, ನಾನು ಸೆರೆಮನೆಯಲ್ಲಿ ಹಾಕಿಸುತ್ತಾ, ಹೊಡಿಸುತ್ತಾ ಇದ್ದೆನೆಂಬುದನ್ನು,


ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.


ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು.


ಈ ವಿಷಯದಲ್ಲಿ ಮಹಾಯಾಜಕನೂ, ಹಿರೀಸಭೆಯರೆಲ್ಲರೂ ಸಾಕ್ಷಿಗಳಾಗಿದ್ದಾರೆ; ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ಬಂಧಿಸಿ ದಂಡನೆಗಾಗಿ ಯೆರೂಸಲೇಮಿಗೆ ತರಬೇಕೆಂದು ಹೊರಟವನು.


ಸೌಲನು ಇನ್ನೂ ಕರ್ತನ ಶಿಷ್ಯರ ಮೇಲೆ ಕೋಪವುಳ್ಳನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಲೋಚಿಸುತ್ತಾ ಮಹಾಯಾಜಕನ ಬಳಿಗೆ ಹೋಗಿ;


ಆದರೆ ಅವನ ದುಷ್ಟ ಕೃತ್ಯಕ್ಕೆ ಖಂಡನೆಯಾಯಿತು. ಮೂಕ ಪ್ರಾಣಿಯಾದ ಕತ್ತೆಯು ಮನುಷ್ಯಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನವನ್ನು ಅಡ್ಡಿ ಮಾಡಿತು.


ನೀವು ಕರೆಯಲ್ಪಟ್ಟ ಆ ಶ್ರೇಷ್ಠವಾದ ನಾಮವನ್ನು ದೂಷಿಸುವವರು ಅವರಲ್ಲವೋ?


ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; “ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿ,


ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು.


ಆಗ ಅವನಿಗೆ ಬುದ್ಧಿಬಂದು ಅವನು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ.


ಆದರೆ ಅವರು ಕ್ರೋಧಭರಿತರಾಗಿದ್ದರಿಂದ, ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


“ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು,


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಸಿಕ್ಕುವುದು.


ಈ ಲೋಕದಲ್ಲಿ ನಡೆಯುವ ಎಲ್ಲಾ ಸಂಗತಿಗಳಿಗೂ ಕೆಟ್ಟ ಪ್ರತಿಫಲ ಉಂಟು ಮತ್ತು ಎಲ್ಲರಿಗೂ ಒಂದೇ ಗತಿಯಾಗುವುದು. ಇದಲ್ಲದೆ ಮನುಷ್ಯರ ಹೃದಯದಲ್ಲಿ ಕೆಟ್ಟತನವು ತುಂಬಿದೆ. ಅವರು ಬದುಕಿರುವ ತನಕ ಹುಚ್ಚುತನವು ಅವರ ಮನಸ್ಸನ್ನು ಹಿಡಿದಿರುವುದು. ಅನಂತರ ಅವರು ಸಾಯುತ್ತಾರೆ.


ವೈರಿಗಳು ಹಗಲೆಲ್ಲಾ ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಾವೇಶವುಳ್ಳವರು ಯಾರನ್ನಾದರೂ ಶಪಿಸುವಾಗ, ನನ್ನನ್ನು ದೃಷ್ಟಾಂತಮಾಡಿ ಶಪಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು