Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಅಗ್ರಿಪ್ಪರಾಜನೇ, ಯೆಹೂದ್ಯರು ನನ್ನ ಮೇಲೆ ಆರೋಪಿಸುವ ಎಲ್ಲಾ ಆರೋಪಗಳ ವಿಷಯವಾಗಿ ನಿನ್ನ ಎದುರಿನಲ್ಲಿ ನಾನು ಈಹೊತ್ತು ಪ್ರತಿವಾದ ಮಾಡಬೇಕಾಗಿರುವುದರಿಂದ, ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಅಗ್ರಿಪ್ಪ ರಾಜರೇ, ಯೆಹೂದ್ಯರು ನನ್ನ ಮೇಲೆ ಹೊರಿಸಿರುವ ಎಲ್ಲಾ ಆಪಾದನೆಗಳಿಗೆ ಇಂದು ತಮ್ಮ ಮುಂದೆ ಪ್ರತಿವಾದಮಾಡುವ ಅವಕಾಶ ದೊರೆತಿರುವುದು ನನ್ನ ಸೌಭಾಗ್ಯವೆಂದೇ ಎಣಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಗ್ರಿಪ್ಪರಾಜನೇ, ಯೆಹೂದ್ಯರು ನನ್ನ ಮೇಲೆ ಆರೋಪಿಸುವ ಎಲ್ಲಾ ದೋಷಗಳ ವಿಷಯವಾಗಿ ನಿನ್ನ ಎದುರಿನಲ್ಲಿ ನಾನು ಈಹೊತ್ತು ಪ್ರತಿವಾದ ಮಾಡಬೇಕಾಗಿರುವದರಿಂದ ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ರಾಜನಾದ ಅಗ್ರಿಪ್ಪನೇ, ಯೆಹೂದ್ಯರು ನನ್ನ ಮೇಲೆ ಹೊರಿಸುತ್ತಿರುವ ಆಪಾದನೆಗಳಿಗೆಲ್ಲಾ ನಾನು ಉತ್ತರಕೊಡುವೆನು. ಇಂದು ನಿನ್ನ ಮುಂದೆ ನಿಂತುಕೊಂಡು ಪ್ರತಿವಾದ ಮಾಡುವ ಅವಕಾಶ ದೊರೆತಿರುವುದು ನನ್ನ ಭಾಗ್ಯವೆಂದೇ ಎಣಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಅಗ್ರಿಪ್ಪ ರಾಜರೇ, ಯೆಹೂದ್ಯರು ಮಾಡಿದ ಎಲ್ಲಾ ಆಪಾದನೆಗಳಿಗೆ ವಿರುದ್ಧವಾಗಿ ಇಂದು ನನ್ನ ಪ್ರತಿವಾದ ಮಾಡಲು ತಮ್ಮ ಎದುರಿನಲ್ಲಿರುವುದು ನನ್ನ ಭಾಗ್ಯವೆಂದೇ ತಿಳಿಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅಗ್ರಿಪ್ಪ್ ರಾಜಾ, ಜುದೆವಾಂಚ್ಯಾ ಲೊಕಾನಿ ಮಾಜ್ಯಾ ವರ್‍ತಿ ಘಾಟಲ್ಲ್ಯಾ ಸಗ್ಳ್ಯಾ ಅಪವಾದಾಕ್ನಿ ಮಿಯಾ ಜವಾಬ್ ದಿತಾ, ಆಜ್ ತುಜ್ಯಾ ಇದ್ರಾಕ್ ಇಬೆ ರಾವ್ನ್ ಪ್ರತಿವಾದ್ ಕರುಕ್ ಮಾಕಾ ಅವಕಾಸ್ ಗಾವ್ತಲಿ ಮಾಜಿ ಭಾಗ್ಯ್ ಮನುನ್ ಯೆವಜ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:2
10 ತಿಳಿವುಗಳ ಹೋಲಿಕೆ  

ನಿನ್ನ ಕಟ್ಟಳೆಗಳ ವಿಷಯವಾಗಿ, ಅರಸುಗಳ ಮುಂದೆಯೂ ಮಾತನಾಡುವೆನು, ನಾಚಿಕೆಪಡುವುದಿಲ್ಲ.


ಅವರು ನಿಮ್ಮನ್ನು ಸಭಾಮಂದಿರಗಳಿಗೂ, ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ, ಅಧಿಪತಿಗಳ ಎದುರಿಗೂ, ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು? ಎಂದು ಚಿಂತೆಮಾಡಬೇಡಿರಿ.


ಆಗ ಅಗ್ರಿಪ್ಪನು, ಪೌಲನಿಗೆ; “ನೀನು ನಿನ್ನ ಪರವಾಗಿ ಮಾತನಾಡಬಹುದು” ಅನ್ನಲು, ಪೌಲನು ಕೈಯೆತ್ತಿ, ಪ್ರತಿವಾದ ಮಾಡಿದ್ದೇನಂದರೆ;


ಏಕೆಂದರೆ, ಯೆಹೂದ್ಯರಲ್ಲಿರುವ ಎಲ್ಲಾ ಆಚಾರಗಳನ್ನೂ, ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರುತ್ತೀ. ನನ್ನ ಮಾತುಗಳನ್ನು ಸಹನೆಯಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ.


ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಆರಾಧಿಸುತ್ತಾ, ಆ ವಾಗ್ದಾನದ ಫಲವನ್ನು ಹೊಂದುವುದಕ್ಕಾಗಿ ನಿರೀಕ್ಷಿಸುತ್ತಾ ಇದ್ದಾರೆ. ಅರಸನೇ, ಅದೇ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು, ನನ್ನ ವಿರುದ್ಧ ದೋಷಾರೋಪಣೆಮಾಡುತ್ತಿದ್ದಾರೆ.


ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಏನು ಮಾತನಾಡಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಆ ಸಮಯದಲ್ಲಿ ನಿಮಗೆ ಗೋಚರವಾಗುವುದು.


ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು.


ಆದರೆ ಇವನ ಕುರಿತಾಗಿ ಕೈಸರನಿಗೆ ಬರೆಯುವುದಕ್ಕೆ ನಿರ್ದಿಷ್ಟವಾದ ಕಾರಣವೇನೂ ಕಂಡು ಬರಲಿಲ್ಲ. ಸೆರೆಯಲ್ಲಿರುವವನ ವಿರುದ್ಧ ಆರೋಪಿಸಿರುವ ದೋಷಗಳನ್ನು ಸೂಚಿಸದೆ, ಅವನನ್ನು ಕಳುಹಿಸುವುದು ಯುಕ್ತವಲ್ಲವೆಂದು ನನಗೆ ತೋರುತ್ತದೆ.


ಆದಕಾರಣ ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿಧೇಯನಾಗದೆ ಮೊದಲು ದಮಸ್ಕದವರಿಗೆ,


ಅಗ್ರಿಪ್ಪರಾಜನು ಈ ಸಂಗತಿಗಳನ್ನೆಲ್ಲಾ ತಿಳಿದವನು; ಆದುದರಿಂದ, ಅವನ ಮುಂದೆ ಧೈರ್ಯವಾಗಿ ಮಾತನಾಡುತ್ತೇನೆ. ಇವುಗಳಲ್ಲಿ ಒಂದಾದರೂ ಅವನಿಗೆ ಮುಚ್ಚುಮರೆಯಾದುದಲ್ಲವೆಂದು ನಂಬಿದ್ದೇನೆ, ಏಕೆಂದರೆ ಇದು ಒಂದು ಮೂಲೆಯಲ್ಲಿ ನಡೆದ ಕಾರ್ಯವಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು