Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಹಾಶಬ್ದದಿಂದ; “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಈ ರೀತಿ ಪೌಲನು ತನ್ನ ಪರವಾಗಿ ವಾದಿಸುತ್ತಿದ್ದಾಗ ಫೆಸ್ತನು, “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಗಟ್ಟಿಯಾಗಿ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ - ಪೌಲನೇ, ನೀನು ಮರುಳಾಗಿದ್ದೀ; ನೀನು ಬಹಳವಾಗಿ ಮಾಡುವ ಶಾಸ್ತ್ರವಿಚಾರವು ನಿನ್ನನ್ನು ಮರುಳುಗೊಳಿಸುತ್ತದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಪೌಲನು ತನ್ನ ಪರವಾಗಿ ಈ ಸಂಗತಿಗಳನ್ನು ಹೇಳುತ್ತಿರಲು ಫೆಸ್ತನು, “ಪೌಲನೇ, ನೀನು ಹುಚ್ಚನಾಗಿರುವೆ! ಅಧಿಕ ಅಧ್ಯಯನ ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ!” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಧ್ಯೆ ಬಾಯಿ ಹಾಕಿ, “ಪೌಲನೇ, ನಿನಗೆ ಹುಚ್ಚುಹಿಡಿದಿದೆ! ನಿನ್ನ ಅಧಿಕಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ,” ಎಂದು ಗಟ್ಟಿಯಾಗಿ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಅಪ್ನಾಂಚ್ಯಾ ವೈನಾ ಹಿ ಸಂಗ್ತಿಯಾ ಪಾವ್ಲು ಸಾಂಗಿತ್ ರಾತಾನಾ ಫೆಸ್ತ್ ಮನ್ತಲೊ ಪಾವ್ಲು ತಿಯಾ ,ಪಿಸೊ ಹೊಲ್ಲೆಯ್! ತಿಯಾ ಶಿಕಲೆ ಲೈ ಹೊವ್ನ್ ತುಕಾ ಪಿಸೊ ಹೊಯ್ ಸಾರ್ಕೆ ಕರ್‍ಲಾ! ಮನುನ್ ಬೊಬ್ ಮಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:24
19 ತಿಳಿವುಗಳ ಹೋಲಿಕೆ  

ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ.


ನಮಗೆ ಬುದ್ಧಿಭ್ರಮಣೆಯಾಗಿದ್ದರೆ ಅದು ದೇವರ ಮಹಿಮೆಗಾಗಿಯೇ; ಹಾಗೂ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ಪ್ರಯೋಜನಕ್ಕಾಗಿಯೇ.


ನಾವಂತೂ ಕ್ರಿಸ್ತನ ನಿಮಿತ್ತ ಮೂರ್ಖರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ. ನಾವು ಬಲಹೀನರು, ನೀವು ಬಲಿಷ್ಠರು, ನೀವು ಗೌರವವುಳ್ಳವರು, ನಾವು ನಿಂದಿಸಲ್ಪಟ್ಟವರು.


ಇದನ್ನು ಕೇಳಿ ಆತನ ಬಂಧುಗಳು “ಅವನಿಗೆ ಹುಚ್ಚುಹಿಡಿದಿದೆ” ಎಂದು ಹೇಳಿ ಆತನನ್ನು ಹಿಡಿಯುವುದಕ್ಕೆ ಹೊರಟರು.


ಎಲ್ಲಾ ಸಭಾಮಂದಿರಗಳಲ್ಲಿಯೂ, ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ, ಅವರನ್ನು ಹಿಂಸೆಪಡಿಸಿದೆನು.


“ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿ, ಯಾರು ತನ್ನನ್ನು ತಾನೇ ಪ್ರವಾದಿಯಂತೆ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.


ಯೇಹುವು ತಿರುಗಿ ತನ್ನ ಒಡೆಯನ ಸೇವಕರ ಹತ್ತಿರ ಬರಲು ಅವರು ಅವನನ್ನು, “ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಅದಕ್ಕೆ ಯೇಹುವು, “ಆ ಮನುಷ್ಯನು ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೇ ಗೊತ್ತಿದೆಯಲ್ಲಾ” ಎಂದು ಉತ್ತರಕೊಟ್ಟನು.


ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಪೌಲನನ್ನು ಅಪಹಾಸ್ಯಮಾಡಿದರು, ಬೇರೆ ಕೆಲವರು; “ನೀನು ಈ ವಿಷಯದಲ್ಲಿ ಹೇಳುವುದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ” ಅಂದರು.


ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, “ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು” ಅಂದುಕೊಳ್ಳುತ್ತೀ.


ಪೌಲನು ನೀತಿ, ಶಮೆದಮೆ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ; “ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು” ಎಂದು ಹೇಳಿದನು.


“ಸಹೋದರರೇ, ತಂದೆಗಳೇ, ಈಗ ನಾನು ನೀಡುವ ಸಮರ್ಥನೆಯ ಮಾತನ್ನು ಕೇಳಿರಿ” ಎಂದು ಹೇಳಿದನು.


ಅದಕ್ಕೆ ಯೆಹೂದ್ಯರು “ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು. ಅಬ್ರಹಾಮನು ಸತ್ತನು ಮತ್ತು ಪ್ರವಾದಿಗಳೂ ಸತ್ತರು, ಆದರೆ ನೀನು ‘ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ’ ಎಂದು ಹೇಳುತ್ತೀಯಲ್ಲಾ?


ಅದಕ್ಕೆ ಯೆಹೂದ್ಯರು, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೋ?” ಎಂದು ಕೇಳಿದರು.


ಯೆಹೂದ್ಯರು ಅದಕ್ಕೆ ಆಶ್ಚರ್ಯಪಟ್ಟು, “ಶಾಸ್ತ್ರಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವುದಾದರೂ ಹೇಗೆ?” ಎಂದರು.


ಎರಡು ವರ್ಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಎಂಬವನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂದು ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟು ಹೋದನು.


ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು