Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ, ಪೌಲನನ್ನೂ, ಬೇರೆ ಕೆಲವು ಸೆರೆಯವರನ್ನೂ ಔಗುಸ್ತ ಸೇನೆಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾದಮೇಲೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ‘ಔಗುಸ್ತದಳ’ ಎಂಬ ರೋಮಿನ ದಳಕ್ಕೆ ಸೇರಿದ ಜೂಲಿಯಸ್ ಎಂಬ ಶತಾಧಿಪತಿಯ ವಶಕ್ಕೆ ಒಪ್ಪಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ ಪೌಲನನ್ನೂ ಬೇರೆ ಕೆಲವು ಸೆರೆಯವರನ್ನೂ ಚಕ್ರವರ್ತಿಯ ಪಟಾಲವಿುಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾಯಿತು. ಪೌಲನಿಗೂ ಇತರ ಕೆಲವು ಕೈದಿಗಳಿಗೂ ಜೂಲಿಯಸ್ ಎಂಬ ಸೇನಾಧಿಕಾರಿಯು ಕಾವಲಾಗಿದ್ದನು. ಜೂಲಿಯಸನು ಚಕ್ರವರ್ತಿಯ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾವು ಇಟಲಿಗೆ ಸಮುದ್ರ ಪ್ರಯಾಣ ಮಾಡಬೇಕೆಂದು ತೀರ್ಮಾನವಾದ ಮೇಲೆ ಪೌಲನನ್ನೂ ಇತರ ಕೈದಿಗಳನ್ನೂ ಯೂಲ್ಯನೆಂಬ ಹೆಸರಿನ ಒಬ್ಬ ಶತಾಧಿಪತಿಗೆ ಒಪ್ಪಿಸಿದರು. ಅವನು ಚಕ್ರವರ್ತಿಯ ದಳಕ್ಕೆ ಸೇರಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅಮಿ ಇಟಲಿಕ್ ಢೊನಿತ್ನಾ ಜಾವ್ಚೆ ಮನುನ್ ನಿರ್ದಾರ್ ಕರ್ಲಾಂವ್ ಪಾವ್ಲುಕ್‍ ಅನಿ ಹುರಲ್ಯಾ ಚೊರಾಕ್ನಿ ಜುಲಿಯಸ್ ಮನ್ತಲೊ ಚಕ್ರವರ್ತಿಚ್ಯಾ ಸೈನ್ಯ ರೊಮಾಚೊ ಶತಾದಿಪತಿ ರಾಕ್ವಲಿ ಹೊವ್ನ್ ಹೊತ್ತೊ, ಜುಲಿಯಸ್ ಮನ್ತಲೊ ಚಕ್ರವರ್ತಿಚ್ಯಾ ಸೈನಿಕಾತ್ನಿ ಸೆವಾ ಕರಿತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:1
29 ತಿಳಿವುಗಳ ಹೋಲಿಕೆ  

ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂದಿತು. ಅವನೇ ಕೈಸರನಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ, ಇವನನ್ನು ಕೈಸರನ ಬಳಿಗೆ ಕಳುಹಿಸುವುದಕ್ಕೆ ತೀರ್ಮಾನಿಸಿದೆನು.


ಆಗ, ಫೆಸ್ತನು ತನ್ನ ಸಭೆಯವರ ಸಂಗಡ ಸಮಾಲೋಚನೆಮಾಡಿದ ಮೇಲೆ ಪೌಲನಿಗೆ; “ನೀನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಎಂದೆಯಲ್ಲಾ, ಆದುದರಿಂದ ಕೈಸರನ ಬಳಿಗೇ ಹೋಗಬೇಕು” ಎಂದು ಹೇಳಿದನು.


ಕೈಸರೈಯ ಪಟ್ಟಣದಲ್ಲಿ ಇತಾಲ್ಯ ಸೈನ್ಯದ ಶತಾಧಿಪತಿಯಾದ ಕೊರ್ನೆಲ್ಯನೆಂಬ ಒಬ್ಬ ಮನುಷ್ಯನಿದ್ದನು.


ಆದರೆ ಪೌಲನು ಹೇಳಿದ ಮಾತುಗಳಿಗಿಂತ, ನಾವಿಕನೂ ಹಡಗಿನ ಯಜಮಾನನೂ ಹೇಳಿದ ಮಾತಿಗೆ ಶತಾಧಿಪತಿಯು ಹೆಚ್ಚಾಗಿ ಲಕ್ಷ್ಯಕೊಟ್ಟನು.


ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ಆಜ್ಞೆ ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿನಗಳ ಮೊದಲೇ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.


ನಿಮ್ಮ ಎಲ್ಲಾ ಸಭಾನಾಯಕರಿಗೂ ಮತ್ತು ಪರಿಶುದ್ಧ ದೇವಜನರಿಗೂ ವಂದನೆ ಹೇಳಿರಿ. ಇತಾಲ್ಯ ದೇಶದಿಂದ ಬಂದವರು ನಿಮಗೆ ವಂದನೆ ಹೇಳುತ್ತಾರೆ.


ನಾವು ರೋಮಾಪುರಕ್ಕೆ ಬಂದ ಮೇಲೆ, ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು.


ಆದರೆ ಶತಾಧಿಪತಿಯು, ಪೌಲನನ್ನು ಉಳಿಸಬೇಕೆಂದು ಅಪೇಕ್ಷಿಸಿ ಅವರ ಆಲೋಚನೆಯನ್ನು ಬೇಡವೆಂದು ಹೇಳಿ, ಈಜಬಲ್ಲವರು ಹಡಗಿನಿಂದ ಧುಮುಕಿ ಮೊದಲು ತೀರಕ್ಕೆ ಹೋಗಬೇಕೆಂತಲೂ,


ಅಲ್ಲಿ ಅಲೆಕ್ಸಾಂದ್ರಿಯದಿಂದ ಬಂದು ಇತಾಲ್ಯದೇಶಕ್ಕೆ ಹೋಗುತ್ತಿದ್ದ ಒಂದು ಹಡಗನ್ನು ಶತಾಧಿಪತಿಯು ಕಂಡು ನಮ್ಮನ್ನು ಅದರೊಳಗೆ ಹತ್ತಿಸಿದನು.


ಅನಂತರ ಪೌಲನನ್ನು ಕಾವಲ್ಲಿನಲ್ಲಿ ಇಡಬೇಕೆಂದೂ, ಆದರೆ ಕಟ್ಟು ನಿಟ್ಟು ಬೇಕಿಲ್ಲವೆಂದೂ, ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು, ಅಡ್ಡಿಮಾಡಬಾರದೆಂದು ಶತಾಧಿಪತಿಗೆ ಅಪ್ಪಣೆಮಾಡಿದನು.


ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ; “ಈ ಯೌವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಇದೆ” ಎಂದು ಹೇಳಿದನು.


ಅಂದು ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು; “ಧೈರ್ಯದಿಂದಿರು; ನೀನು ಯೆರೂಸಲೇಮಿನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವುದು” ಅಂದನು.


ಶತಾಧಿಪತಿಯು ಆ ಮಾತನ್ನು ಕೇಳಿ ಸಹಸ್ರಾಧಿಪತಿಯ ಬಳಿಗೆ ಹೋಗಿ; “ನೀನು ಏನು ಮಾಡಬೇಕೆಂದಿದ್ದೀ? ಈ ಮನುಷ್ಯನು ರೋಮಾಪುರದ ಹಕ್ಕುದಾರನು” ಎಂದು ಹೇಳಲು,


ಅವನು ತಕ್ಷಣವೇ ಸಿಪಾಯಿಗಳನ್ನೂ, ಶತಾಧಿಪತಿಗಳನ್ನೂ ತೆಗೆದುಕೊಂಡು ಜನಸಮೂಹದ ಹತ್ತಿರ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ, ಸಿಪಾಯಿಗಳನ್ನೂ ನೋಡಿ ಪೌಲನನ್ನು ಹೊಡೆಯುವುದನ್ನು ಬಿಟ್ಟರು.


ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.


ಅವನಿಗೆ ಆ ದರ್ಶನವಾದ ಮೇಲೆ, ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು, ಕೂಡಲೆ ಮಕೆದೋನ್ಯಕ್ಕೆ ಹೊರಟುಹೋಗುವ ಪ್ರಯತ್ನಮಾಡಿದೆವು.


ಅವರು; “ಕೊರ್ನೆಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ, ದೇವರಿಗೆ ಭಯಪಡುವವನೂ, ಯೆಹೂದ್ಯ ಜನರೆಲ್ಲರಿಂದ ಒಳ್ಳೆಯ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನಿನ್ನಿಂದ ಸುವಾರ್ತೆಯನ್ನು ಕೇಳಬೇಕೆಂದು ಪರಿಶುದ್ಧ ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದ್ದಾನೆ” ಎಂದು ಹೇಳಿದರು.


ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ, “ಈ ಮನುಷ್ಯನು ನಿಜವಾಗಲೂ ನೀತಿವಂತನೇ” ಆಗಿದ್ದನು ಎಂದು ದೇವರನ್ನು ಕೊಂಡಾಡಿದನು.


ಅಲ್ಲಿ ದಂಡಿನ ಶತಾಧಿಪತಿಗೆ ಇಷ್ಟನಾದ ಒಬ್ಬ ಆಳು ಕ್ಷೇಮವಿಲ್ಲದೆ ಸಾಯುವ ಹಾಗಿದ್ದನು.


ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.


ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.


ಯೌವನದಲ್ಲಿ ನೊಗಹೊರುವುದು ಮನುಷ್ಯನಿಗೆ ಹಿತಕರ.


ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.


ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.


ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ.


ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು” ಎಂದನು.


ನಾವು ಸುರಕ್ಷಿತವಾಗಿ ದಡವನ್ನು ಸೇರಿದ ಮೇಲೆ, ಅದು ಮೆಲೀತೆ ದ್ವೀಪವೆಂದು ತಿಳಿದುಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು