Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ, ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು; “ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಬಹಳ ದಿನಗಳವರೆಗೆ ಅವರು ಊಟವಿಲ್ಲದೆ ಇದ್ದರು. ಆಗ ಪೌಲನು ಎದ್ದುನಿಂತು, “ಗೆಳೆಯರೇ, ನೀವು ನನ್ನ ಮಾತನ್ನು ಕೇಳಬೇಕಿತ್ತು. ಕ್ರೇಟ್ ದ್ವೀಪದಿಂದ ಮುಂದಕ್ಕೆ ಪ್ರಯಾಣ ಮಾಡಬಾರದಿತ್ತು. ಆಗ ಇಷ್ಟೆಲ್ಲಾ ಕಷ್ಟನಷ್ಟವನ್ನು ತಡೆಯಬಹುದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು - ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆ ಜನರು ಬಹಳ ದಿನಗಳವರೆಗೆ ಊಟಮಾಡಲಿಲ್ಲ. ಆಗ ಒಂದು ದಿನ ಪೌಲನು ಎದ್ದುನಿಂತುಕೊಂಡು ಅವರಿಗೆ, “ಜನರೇ, ಕ್ರೇಟ್ ದ್ವೀಪದಿಂದ ಹೊರಡಬೇಡಿರಿ ಎಂದು ನಾನು ನಿಮಗೆ ಹೇಳಿದೆ. ನೀವು ನನ್ನ ಮಾತನ್ನು ಕೇಳಬೇಕಿತ್ತು. ಆಗ ನಿಮಗೆ ಇಷ್ಟು ಕಷ್ಟವಾಗಲಿ ನಷ್ಟವಾಗಲಿ ಆಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಬಹಳ ದಿನಗಳವರೆಗೆ ಜನರು ಊಟ ಮಾಡದೇ ಇದ್ದಾಗ, ಪೌಲನು ಅವರ ಮುಂದೆ ಎದ್ದು ನಿಂತುಕೊಂಡು ಹೀಗೆ ಹೇಳಿದನು: “ಸ್ನೇಹಿತರೇ, ನೀವು ಕ್ರೇತದಿಂದ ಮುಂದೆ ಪ್ರಯಾಣ ಮಾಡಬಾರದೆಂದು ಹೇಳಿದ ನನ್ನ ಮಾತಿಗೆ ವಿಧೇಯರಾಗಿದ್ದರೆ ಈ ಕಷ್ಟನಷ್ಟವನ್ನು ತಡೆಯಬಹುದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಪಾವ್ಲುನ್ ತೆಂಚ್ಯಾ ಇದ್ರಾಕ್ ಉಟುನ್ ಇಬೆ ರ್‍ಹಾವ್ನ್ ಮಾಜಿ ಗೊಸ್ಟ್ ಆಯ್ಕುನ್ ತುಮಿ ಕ್ರೆಟ್ ದ್ವಿಪಾತ್ನಾ ಯೆಯ್ ನಸ್ತಾನಾ ಹೊತ್ತೆ ಹೊಲ್ಯಾರ್ ಹ್ಯೊ ತರಾಸ್ ಅನಿ ಲುಕ್ಷಾನ್ ಹೊಯ್ನಶಿ ಹೊತ್ತೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:21
8 ತಿಳಿವುಗಳ ಹೋಲಿಕೆ  

ಅದಕ್ಕೆ ರೂಬೇನನು, “ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೆ. ನೀವು ಕೇಳಲಿಲ್ಲ. ಆದುದರಿಂದ ಅವನಿಗಾದ ಪ್ರಾಣ ಹಾನಿಯ ವಿಷಯದಲ್ಲಿ ನಾವು ಈಗ ಉತ್ತರ ಹೇಳಬೇಕಾಗಿ ಬಂದಿದೆ” ಎಂದನು.


ಅನೇಕ ದಿನಗಳ ಕಾಲ ನಿಧಾನವಾಗಿ ಸಾಗುತ್ತಾ ಎಷ್ಟೋ ಪ್ರಯಾಸದಿಂದ ಕ್ನೀದಕ್ಕೆ ಸಮೀಪವಾಗಿ ಬಂದಾಗ ಗಾಳಿಯು ನಮ್ಮನ್ನು ಅಲ್ಲಿಗೆ ಮುಟ್ಟಗೊಡಿಸದೆ ಇದ್ದುದರಿಂದ ಕ್ರೇತ ದ್ವೀಪದ ಮರೆಯಲ್ಲಿ ಸಾಗಿ ಸಲ್ಮೋನೆಗೆ ಸಮೀಪವಾಗಿ ಬಂದು,


ಆ ಬಂದರು ಪ್ರದೇಶ; ಚಳಿಗಾಲವನ್ನು ಕಳೆಯುವುದಕ್ಕೆ ಅನುಕೂಲವಲ್ಲವಾದುದರಿಂದ, ಅಲ್ಲಿಂದ ಹೊರಟು ಸಾಧ್ಯವಾದರೆ ಹೇಗೂ ಫೊಯಿನಿಕ್ಸ ಊರನ್ನು ಸೇರಿ, ಅಲ್ಲೇ ಆ ಚಳಿಗಾಲವನ್ನು ಕಳೆಯಬೇಕೆಂದು ಹೆಚ್ಚು ಜನರು ತಮ್ಮ ಅಭಿಪ್ರಾಯಗಳನ್ನು ಹೇಳಿದರು. ಫೊಯಿನಿಕ್ಸವು ಕ್ರೇತ ದ್ವೀಪದ ಒಂದು ಬಂದರು ಪ್ರದೇಶ, ಈಶಾನ್ಯ ದಿಕ್ಕಿಗೂ, ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ.


ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರುಗಳನ್ನು ತೆಗೆದು ಕ್ರೇತ ದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು.


ಅನೇಕ ದಿನಗಳ ತನಕ ಸೂರ್ಯನಾಗಲಿ, ನಕ್ಷತ್ರಗಳಾಗಲಿ ನಮಗೆ ಕಾಣಿಸದೆ, ದೊಡ್ಡ ಬಿರುಗಾಳಿ ಮಳೆ ನಮ್ಮ ಮೇಲೆ ಹೊಡೆದುದರಿಂದ ತಪ್ಪಿಸಿಕೊಂಡೇವೆಂಬ ಎಲ್ಲಾ ನಿರೀಕ್ಷೆಯು ವಿಫಲವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು