Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮರುದಿನ ಸೀದೋನಿಗೆ ತಲುಪಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ, ಅವನನ್ನು ಸ್ನೇಹಿತರ ಬಳಿಗೆ ಹೋಗಿ ಸತ್ಕಾರ ಹೊಂದುವುದಕ್ಕೆ ಅನುಮತಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮಾರನೆಯ ದಿನ ನಾವು ಸಿದೋನಿಗೆ ಆಗಮಿಸಿದೆವು. ಪೌಲನು ತನ್ನ ಗೆಳೆಯರನ್ನು ಸಂದರ್ಶಿಸುವುದಕ್ಕೂ ಅವರಿಂದ ತನಗೆ ಅಗತ್ಯವಿದ್ದುದನ್ನು ಪಡೆಯುವುದಕ್ಕೂ ಜೂಲಿಯಸನು ಆದರದಿಂದ ಅನುಮತಿಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮರುದಿನ ಸೀದೋನಿಗೆ ಮುಟ್ಟಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ ಅವನನ್ನು ಸ್ನೇಹಿತರ ಬಳಿಗೆ ಹೋಗಿ ಸತ್ಕಾರ ಹೊಂದುವದಕ್ಕೆ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮರುದಿನ ನಾವು ಸಿದೋನ್ ಪಟ್ಟಣಕ್ಕೆ ಬಂದೆವು. ಜೂಲಿಯಸನು ಪೌಲನ ಬಗ್ಗೆ ಕನಿಕರವುಳ್ಳವನಾಗಿದ್ದನು. ಸ್ನೇಹಿತರ ಬಳಿಗೆ ಹೋಗಿ ಅವರನ್ನು ಭೇಟಿಯಾಗಲು ಅವನು ಪೌಲನಿಗೆ ಸ್ವತಂತ್ರವನ್ನು ಕೊಟ್ಟನು. ಸ್ನೇಹಿತರು ಪೌಲನ ಅಗತ್ಯತೆಗಳನ್ನು ಪೂರೈಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮರುದಿನ ನಾವು ಸೀದೋನಿಗೆ ತಲುಪಿದೆವು. ಪೌಲನಿಗೆ ಯೂಲ್ಯನು ದಯೆತೋರಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗುವುದಕ್ಕೂ ಅವರಿಂದ ಉಪಚಾರವನ್ನು ಹೊಂದುವುದಕ್ಕೂ ಅನುಮತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ದುಸ್ರ್ಯಾಂದಿಸಿ ಅಮಿ ಸಿದೊನ್ ಮನ್ತಲ್ಯಾ ಶಾರಾಕ್ ಪಾವ್ಲಾಂವ್, ಜುಲಿಯಸ್ ಪಾವ್ಲುಚ್ಯಾ ವಿಶಯಾತ್ ಕಾಳ್ಜಿಚೊ ಮಾನುಸ್ ಹೊಲ್ಲೊ, ಪಾವ್ಲುಕ್ ಅಪ್ಲ್ಯಾ ವಾಂಗ್ಡಿಯಾಕ್ನಿ ಭೆಟುಕ್ ತೆನಿ ಒಪ್ಕಿ ದಿಲ್ಯಾನ್, ತನ್ನಾ ತೆಚ್ಯಾ ವಾಂಗ್ಡಿಯಾನಿ ತೆಚ್ಯಾ ಗರ್ಜೆಚೆ ಪಾಜೆ ಹೊಲ್ಲೆ ಸಗ್ಳೆ ತೆಕಾ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:3
12 ತಿಳಿವುಗಳ ಹೋಲಿಕೆ  

ಅನಂತರ ಪೌಲನನ್ನು ಕಾವಲ್ಲಿನಲ್ಲಿ ಇಡಬೇಕೆಂದೂ, ಆದರೆ ಕಟ್ಟು ನಿಟ್ಟು ಬೇಕಿಲ್ಲವೆಂದೂ, ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು, ಅಡ್ಡಿಮಾಡಬಾರದೆಂದು ಶತಾಧಿಪತಿಗೆ ಅಪ್ಪಣೆಮಾಡಿದನು.


ನಾವು ರೋಮಾಪುರಕ್ಕೆ ಬಂದ ಮೇಲೆ, ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು.


ಆದರೆ ಶತಾಧಿಪತಿಯು, ಪೌಲನನ್ನು ಉಳಿಸಬೇಕೆಂದು ಅಪೇಕ್ಷಿಸಿ ಅವರ ಆಲೋಚನೆಯನ್ನು ಬೇಡವೆಂದು ಹೇಳಿ, ಈಜಬಲ್ಲವರು ಹಡಗಿನಿಂದ ಧುಮುಕಿ ಮೊದಲು ತೀರಕ್ಕೆ ಹೋಗಬೇಕೆಂತಲೂ,


ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ, ಪೌಲನನ್ನೂ, ಬೇರೆ ಕೆಲವು ಸೆರೆಯವರನ್ನೂ ಔಗುಸ್ತ ಸೇನೆಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.


ಆ ಕಾಲದಲ್ಲಿ ತೂರ್ ಮತ್ತು ಸೀದೋನ್ ಪಟ್ಟಣಗಳ ನಿವಾಸಿಗಳು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿಕೊಂಡಿರುವುದನ್ನು ನೋಡಿ ಒಮ್ಮನಸ್ಸಿನಿಂದ ಅವನ ಸನ್ನಿಧಿಗೆ ಬಂದು ಅರಸನ ಅಂತಃಪುರದ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ಒಲಿಸಿಕೊಂಡು ಸಮಾಧಾನವಾಗಿರಬೇಕೆಂದು ಅರಸನನ್ನು ಬೇಡಿಕೊಂಡರು. ಏಕೆಂದರೆ ಅರಸನ ಸೀಮೆಯಿಂದಲೇ ಅವರ ಸೀಮೆಗೆ ದವಸಧಾನ್ಯ ಬರುತ್ತಿತ್ತು.


ಹೇಗೆಂದರೆ, “ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.


ದಮಸ್ಕದ ಪಕ್ಕದಲ್ಲಿನ ಹಮಾತಿನಲ್ಲಿಯೂ ಬಹಳ ಜಾಣರು ಎಂದು ಕೊಚ್ಚಿಕೊಂಡಿರುವ ತೂರ್, ಚೀದೋನ್ ಪಟ್ಟಣಗಳಲ್ಲಿಯೂ ಕಣ್ಣಿಟ್ಟಿದ್ದಾನೆ.


ಆತನು, “ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿ ಇರದು” ಎಂದು ಹೇಳಿದ್ದಾನೆ.


ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಮಾಡುವನು. ಅವನಿಗೆ ಹಡಗುಗಳು ಸೇರುವ ಬಂದರು ಇರುವುದು. ಅವನ ಸೀಮೆಯ ಒಂದು ಮೇರೆ ಚೀದೋನಿಗೆ ಮುಟ್ಟುವುದು.


ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆ ಮೇಲೆ ಹೇತ್ ಹುಟ್ಟಿದನು.


ಕಾಬೂಲ್, ಎಬ್ರೋನ್, ರೆಹೋಬ್, ಹಮ್ಮೋನ್, ಕಾನಾ ಇವುಗಳ ಮೇಲೆ ಚೀದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು