Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ರೊಟ್ಟಿಯನ್ನು ತೆಗೆದುಕೊಂಡು, ಎಲ್ಲರ ಮುಂದೆ ದೇವರ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವುದಕ್ಕೆ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಹೀಗೆ ಹೇಳಿದ ಮೇಲೆ ಪೌಲನು ರೊಟ್ಟಿಯನ್ನು ತೆಗೆದುಕೊಂಡು, ಎಲ್ಲರ ಮುಂದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಅದನ್ನು ಮುರಿದು ತಿನ್ನಲಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ರೊಟ್ಟಿಯನ್ನು ತೆಗೆದುಕೊಂಡು ಎಲ್ಲರ ಮುಂದೆ ದೇವರ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವದಕ್ಕೆ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಹೀಗೆ ಹೇಳಿದ ಬಳಿಕ, ಪೌಲನು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡು ಅದಕ್ಕಾಗಿ ಅವರೆಲ್ಲರ ಮುಂದೆ ದೇವರಿಗೆ ಸ್ತೋತ್ರ ಮಾಡಿದನು. ಬಳಿಕ ಅವನು ಒಂದು ತುಂಡನ್ನು ಮುರಿದು ತಿನ್ನತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಹೀಗೆ ಹೇಳಿದ ನಂತರ ಅವನು ರೊಟ್ಟಿಯನ್ನು ತೆಗೆದುಕೊಂಡು ಅವರೆಲ್ಲರ ಎದುರಿನಲ್ಲಿ ದೇವರಿಗೆ ಕೃತಜ್ಞತೆ ಸಲ್ಲಿಸಿ, ಅದನ್ನು ಮುರಿದು ತಿನ್ನಲು ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಅಶೆ ಸಾಂಗುನ್ ಮಾನಾ ಪಾವ್ಲುನ್ ಭಾಕ್ರಿ ಘೆವ್ನ್ ತಿಕಾ ಸಗ್ಳ್ಯಾಂಚ್ಯಾ ಫಿಡ್ಯಾತ್ ದೆವಾಕ್ ಸ್ತುತಿ ಕರ್‍ಲ್ಯಾನ್, ಅನಿ ಭಾಕ್ರಿ ಮೊಡುನ್ ತುಕ್ಡೊ ಖಾವ್ಕ್ ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:35
16 ತಿಳಿವುಗಳ ಹೋಲಿಕೆ  

ಆತನು ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಹಂಚಿಕೊಟ್ಟರು.


ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು.


ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ.


ದಿನವನ್ನು ಆಚರಿಸುವವನು ಕರ್ತನಿಗಾಗಿ ಅದನ್ನು ಆಚರಿಸುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರನ್ನು ಸ್ತುತಿಸುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವರನ್ನು ಸ್ತುತಿಸುತ್ತಾನೆ.


ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.


ಅಷ್ಟರೊಳಗೆ ತಿಬೇರಿಯಾದಿಂದ ಬೇರೆ ದೋಣಿಗಳು ಹೊರಟು, ಕರ್ತನು ದೇವರಿಗೆ ಕೃತಜ್ಞತೆ ಸಲ್ಲಿಸಿ, ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.


ಆಮೇಲೆ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಹಂಚಿದನು. ಅದೇ ರೀತಿ ಮೀನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದನು.


ಆತನು ಅವರ ಸಂಗಡ ಊಟಕ್ಕೆ ಕುಳಿತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ, ಮುರಿದು ಅವರಿಗೆ ಕೊಡುತ್ತಿರಲಾಗಿ,


ಆಗ ಯೇಸು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟು, ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ ಅವುಗಳನ್ನು ಮುರಿದು ಜನರಿಗೆ ಹಂಚಲು ತನ್ನ ಶಿಷ್ಯರ ಕೈಗೆ ಕೊಟ್ಟನು; ಅವರು ಗುಂಪಿನವರಿಗೆ ಹಂಚಿಕೊಟ್ಟರು.


ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು.


ನಿನ್ನ ಕಟ್ಟಳೆಗಳ ವಿಷಯವಾಗಿ, ಅರಸುಗಳ ಮುಂದೆಯೂ ಮಾತನಾಡುವೆನು, ನಾಚಿಕೆಪಡುವುದಿಲ್ಲ.


ಅವನು ಯಜ್ಞಭೋಜನಕ್ಕೋಸ್ಕರ ಗುಡ್ಡಕ್ಕೆ ಹೋಗುವ ಮೊದಲು ನೀವು ಊರೊಳಕ್ಕೆ ಹೋದರೆ ಸಿಕ್ಕುವನು. ಅವನು ಅಲ್ಲಿಗೆ ಹೋಗುವ ವರೆಗೆ ಜನರು ಊಟಮಾಡುವುದಿಲ್ಲ. ಅವನು ಹೋಗಿ ಯಜ್ಞಾಹಾರವನ್ನು ಆಶೀರ್ವದಿಸುತ್ತಾನೆ. ಅನಂತರ ಕರೆಯಲ್ಪಟ್ಟವರು ಊಟಮಾಡುತ್ತಾರೆ. ಈಗಲೇ ಹೋಗಿರಿ. ಅವನು ಸಿಕ್ಕುವ ಸಮಯ ಇದೇ” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು