Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯಾವ ಅಡ್ಡಿಯೂ ಇಲ್ಲದೆ, ತುಂಬಾ ಧೈರ್ಯದಿಂದ ದೇವರ ರಾಜ್ಯದ ಕುರಿತು ಬೋಧಿಸುತ್ತಾ, ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಭಯಭೀತಿಯಿಲ್ಲದೆ ಹಾಗೂ ಅಡ್ಡಿಆತಂಕವಿಲ್ಲದೆ ದೇವರ ಸಾಮ್ರಾಜ್ಯವನ್ನು ಕುರಿತು ಪ್ರಬೋಧಿಸುತ್ತಿದ್ದನು; ಸ್ವಾಮಿ ಯೇಸುಕ್ರಿಸ್ತರ ವಿಷಯವಾಗಿ ಉಪದೇಶಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯಾವ ಅಡ್ಡಿಯೂ ಇಲ್ಲದೆ ತುಂಬಾ ಧೈರ್ಯದಿಂದ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ದೇವರ ರಾಜ್ಯದ ಬಗ್ಗೆ ಬೋಧಿಸುತ್ತಿದ್ದನು; ಪ್ರಭು ಯೇಸುಕ್ರಿಸ್ತನ ಬಗ್ಗೆ ಉಪದೇಶಿಸುತ್ತಿದ್ದನು; ಬಹು ಧೈರ್ಯದಿಂದ ಮಾತಾಡುತ್ತಿದ್ದನು. ಅವನಿಗೆ ಅಡ್ಡಿಮಾಡಲು ಯಾರೂ ಪ್ರಯತ್ನಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವನು ಧೈರ್ಯದಿಂದ ಯಾವ ಅಡ್ಡಿ ಆತಂಕಗಳಿಲ್ಲದೇ ದೇವರ ರಾಜ್ಯವನ್ನು ಪ್ರಕಟಿಸುತ್ತಾ, ಕರ್ತ ಆಗಿರುವ ಯೇಸುಕ್ರಿಸ್ತರ ವಿಷಯವಾಗಿ ಉಪದೇಶ ಮಾಡುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ದೆವಾಚ್ಯಾ ರಾಜಾಚ್ಯಾ ವಿಶಯಾತ್ ಶಿಕಾಪ್ ಕರಿ, ಅನಿ ಧನಿಯಾ ಜೆಜು ಕ್ರಿಸ್ತಾಚ್ಯಾ ವಿಶಯಾತ್ ಸಾಂಗಿತ್ ಹೊತ್ತೊ, ಅನಿ ತೊ ಉಲ್ಲೆಬಿ ಭಿಂಯ್‍ನಸ್ತಾನಾ ಹೆ ಕಾಮ್ ಕರಿತ್ ಹೊತ್ತೊ , ತೆಕಾ ಅಡ್ಡಿ ಕರುಕ್ ಕೊನಾಚೆನ್ಬಿ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:31
17 ತಿಳಿವುಗಳ ಹೋಲಿಕೆ  

ಕರ್ತನೇ, ಈಗ ನೀನು ಅವರ ಬೆದರಿಕೆಗಳನ್ನು ನೋಡಿ ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನ ಮೂಲಕವಾಗಿ ರೋಗ ಪರಿಹಾರವೂ, ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜರಗುವಂತೆ


ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.


ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ.


ಇಗೋ, ಇಷ್ಟು ದಿನ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ನೋಡುವುದಿಲ್ಲವೆಂದು ಬಲ್ಲೆನು.


ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.


ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.


ಹಿರೀಸಭೆಯ ಎದುರಿನಿಂದ ಹೊರಟುಹೋಗಿ, ಪ್ರತಿದಿನ ಎಡೆಬಿಡದೆ ದೇವಾಲಯದಲ್ಲಿಯೂ, ಮನೆಮನೆಗಳಲ್ಲಿಯೂ, ಉಪದೇಶಮಾಡುತ್ತಾ ಕ್ರಿಸ್ತನಾದ ಯೇಸುವಿನ ಕುರಿತು ಶುಭವರ್ತಮಾನವನ್ನು ಸಾರುತ್ತಾ ಇದ್ದರು.


ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ಅಂದು ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು; “ಧೈರ್ಯದಿಂದಿರು; ನೀನು ಯೆರೂಸಲೇಮಿನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವುದು” ಅಂದನು.


ತರುವಾಯ ಯೇಸು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ,


ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು,


ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು.


ತರುವಾಯ ಅವನು ತಾನೇ ಬಾಡಿಗೆಗೆ ತೆಗೆದುಕೊಂಡಿದ್ದ ಮನೆಯಲ್ಲಿ ಎರಡು ವರ್ಷಗಳ ಕಾಲ ಇದ್ದು, ತನ್ನ ಬಳಿಗೆ ಬರುವವರೆಲ್ಲರನ್ನು ಆದರದಿಂದ ಬರಮಾಡಿಕೊಳ್ಳುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು