Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ದ್ವೀಪದ ಮುಖ್ಯಸ್ಥನಾದ ಪೊಪ್ಲಿಯನ ಹೊಲಗದ್ದೆಗಳು ನಾವಿದ್ದ ಸ್ಥಳದ ಸಮೀಪದಲ್ಲಿ ಇದ್ದವು. ಅವನು ನಮ್ಮನ್ನು ಸ್ವಾಗತಿಸಿ ಮೂರು ದಿನಗಳವರೆಗೆ ಆದರದಿಂದ ಸತ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆ ದ್ವೀಪದ ಮುಖ್ಯಸ್ಥನಾದ ಪೊಪ್ಲಿಯನ ಹೊಲಗದ್ದೆಗಳು ನಾವಿದ್ದ ಸ್ಥಳದ ಪಕ್ಕದಲ್ಲೇ ಇದ್ದವು. ಅವನು ನಮ್ಮನ್ನು ಸ್ವಾಗತಿಸಿ ಮೂರು ದಿನಗಳವರೆಗೆ ಆದರದಿಂದ ಸತ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಸ್ಥಳದ ಸಮೀಪದಲ್ಲಿ ದ್ವೀಪದ ಮುಖ್ಯಸ್ಥನಾದ ಪೊಪ್ಲಿಯನೆಂಬವನಿಗೆ ಕೆಲವು ಭೂವಿು ಇತ್ತು. ಅವನು ನಮ್ಮನ್ನು ಸೇರಿಸಿಕೊಂಡು ಮೂರು ದಿವಸ ಆದರದಿಂದ ಸತ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಸ್ಥಳದ ಸುತ್ತಮುತ್ತ ಕೆಲವು ಹೊಲಗಳು ಇದ್ದವು. ಆ ದ್ವೀಪದ ಪ್ರಮುಖ ವ್ಯಕ್ತಿಯೊಬ್ಬನಿಗೆ ಆ ಹೊಲಗಳು ಸೇರಿದ್ದವು. ಅವನ ಹೆಸರು ಪೊಪ್ಲಿಯ. ಅವನು ನಮ್ಮನ್ನು ತನ್ನ ಮನೆಗೆ ಸ್ವಾಗತಿಸಿದನು. ಪೊಪ್ಲಿಯನು ಕನಿಕರ ತೋರಿದನು. ನಾವು ಅವನ ಮನೆಯಲ್ಲಿ ಮೂರು ದಿನವಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದ್ವೀಪದ ಮುಖ್ಯ ಅಧಿಕಾರಿ ಪೊಪ್ಲಿಯನೆಂಬುವನಿಗೆ ಸೇರಿದ ಹೊಲವು ಸಮೀಪದಲ್ಲಿಯೇ ಇತ್ತು. ಅವನು ನಮ್ಮನ್ನು ತನ್ನ ಮನೆಗೆ ಆಮಂತ್ರಿಸಿ ಮೂರು ದಿನ ನಮ್ಮನ್ನು ಉಪಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತ್ಯಾ ಜಾಗ್ಯಾರ್ ಅಜುಭಾಜುನ್ ಥೊಡೆ ಸೆತ್ ಹೊತ್ತೆ, ತೆ ಸಗ್ಳೆ ತ್ಯಾ ದ್ವಿಪಾತ್ಲ್ಯಾ ಪೊಪ್ಲಿಯಾ ಮನ್ತಲ್ಯಾ ಎಕ್ ಮೊಟೊ ಅಧಿಕಾರಿಕ್ ಸಮಂದ್ ಪಡಲೆ ಹೊತ್ತೆ, ತೆನಿ ಅಮ್ಕಾ ಅಪ್ಲ್ಯಾ ಘರಾಕ್ ಬಲ್ವುಲ್ಯಾನ್, ಅನಿ ಅಮ್ಕಾ ಲೈ ಕಾಳ್ಜಿ ದಾಕ್ವುಲ್ಯಾನ್ ಅಮಿ ತೆಚ್ಯಾ ಘರಾತ್ ತಿನ್ ದಿಸ್ ಹೊತ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:7
10 ತಿಳಿವುಗಳ ಹೋಲಿಕೆ  

ಅನ್ಯಭಾಷೆಯವರಾದ ಆ ದ್ವೀಪದವರು ನಮಗೆ ವಿಶೇಷ ಸಹಾನುಭೂತಿಯನ್ನು ತೋರಿದರು. ಮಳೆಯು ಆಗಲೇ ಹೊಯ್ದು ಚಳಿಯಾಗುತ್ತಿದ್ದುದರಿಂದ, ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.


ಮತ್ತು ಕುದುರೆಗಳನ್ನು ಸಿದ್ಧಮಾಡಿ, ಪೌಲನನ್ನು ಹತ್ತಿಸಿ, ದೇಶಾಧಿಪತಿಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟನು.


ಗಲ್ಲಿಯೋನನು ಅಖಾಯ ಪ್ರಾಂತ್ಯಕ್ಕೆ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಾಸ್ಥಾನದ ಮುಂದೆ ಹಿಡಿದು ತಂದು;


ಅವನು ರಾಜ್ಯ ಪಾಲನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಜೊತೆಯಲ್ಲಿದ್ದನು. ಆ ಅಧಿಪತಿಯು ಬುದ್ಧಿವಂತನಾಗಿದ್ದು, ಬಾರ್ನಬ ಮತ್ತು ಸೌಲನನ್ನು ತನ್ನ ಬಳಿಗೆ ಕರೆಸಿ ದೇವರ ವಾಕ್ಯವನ್ನು ಕೇಳುವುದಕ್ಕೆ ಅಪೇಕ್ಷೆ ಪಟ್ಟನು.


ಅವರು; “ಇವನ ಮೈ ಈಗ ಊದಿಕೊಳ್ಳುತ್ತದೆ, ಇಲ್ಲವೆ ಇವನು ಫಕ್ಕನೆ ಸತ್ತುಬೀಳುತ್ತಾನೆ” ಎಂದು ಕಾದಿದ್ದರು. ಎಷ್ಟು ಹೊತ್ತು ಕಾದರು ಅವನಿಗೆ ಯಾವ ಹಾನಿಯೂ ಆಗಲಿಲ್ಲ. ಇದನ್ನು ಕಂಡ ಅವರು ತಮ್ಮ ಅಭಿಪ್ರಾಯವನ್ನು ಬದಲಿಸಿಕೊಂಡು “ಇವನೊಬ್ಬ ದೇವನೇ” ಇರಬೇಕು ಎಂದುಕೊಂಡರು.


ಅವನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಹಾಸಿಗೆ ಹಿಡಿದಿದ್ದನು. ಪೌಲನು ಅವನ ಬಳಿಗೆ ಹೋಗಿ ಪ್ರಾರ್ಥನೆ ಮಾಡಿ ಅವನ ಮೇಲೆ ಕೈಗಳನ್ನಿಟ್ಟು ಅವನನ್ನು ಗುಣಪಡಿಸಿದನು.


ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿದ್ದಲ್ಲಿ, ಅವರು ಮಕ್ಕಳನ್ನು ಸಾಕಿಕೊಂಡು, ಅತಿಥಿಸತ್ಕಾರವನ್ನು ಮಾಡುತ್ತಾ, ದೇವಜನರಿಗೆ ಉಪಚಾರಮಾಡಿದವಳಾಗಲಿ, ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡುತ್ತಾ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಿರಲಿ.


ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು