Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀವು ನೋಡುತ್ತಿರುವಂತಹ, ನಿಮಗೆ ಗುರುತಿರುವಂತಹ ಈ ಮನುಷ್ಯನು ಗುಣವಾಗುವುದಕ್ಕೆ ಯೇಸುವಿನ ಹೆಸರಿನಲ್ಲಿ ಇಟ್ಟ ಅವನ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಸಂಪೂರ್ಣಸೌಖ್ಯವನ್ನು ಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಿಮ್ಮ ಕಣ್ಣೆದುರಿಗಿರುವ ಈ ಮನುಷ್ಯನು ಯಾರೆಂದು ನಿಮಗೆ ಗೊತ್ತಿದೆ. ಯೇಸುವಿನ ನಾಮದಿಂದಲೇ, ಆ ನಾಮದ ಮೇಲಿಟ್ಟ ವಿಶ್ವಾಸದಿಂದಲೇ, ಈತನು ಶಕ್ತಿಪಡೆದಿದ್ದಾನೆ. ಯೇಸುವಿನಲ್ಲಿಟ್ಟ ಆ ವಿಶ್ವಾಸವೇ ಈತನಿಗೆ, ನೀವೇ ನೋಡುವಂತೆ, ಸಂಪೂರ್ಣ ಆರೋಗ್ಯವನ್ನು ದಯಪಾಲಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀವು ನೋಡುವಂಥ ನಿಮಗೆ ಗುರುತಿರುವಂಥ ಈ ಮನುಷ್ಯನು ನೆಟ್ಟಗಾದದ್ದಕ್ಕೆ ಆತನ ಹೆಸರಿನಲ್ಲಿ ಇಟ್ಟ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಪೂರ್ಣಕ್ಷೇಮವನ್ನು ಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ನಿಮ್ಮ ಕಣ್ಣೆದುರಿಗಿರುವ ಇವನ ಪರಿಚಯ ನಿಮ್ಮೆಲ್ಲರಿಗೂ ಇದೆ. ಇವನು ಗುಣವಾದದ್ದಕ್ಕೆ ಇವನು ಯೇಸುವಿನ ಹೆಸರಿನಲ್ಲಿ ಇಟ್ಟ ನಂಬಿಕೆಯೇ ಕಾರಣ. ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನನ್ನು ನಿಮ್ಮೆಲ್ಲರ ಮುಂದೆ ಗುಣಪಡಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೇಸುವಿನ ನಾಮದಲ್ಲಿಟ್ಟ ವಿಶ್ವಾಸದಿಂದಲೇ ನೀವು ಕಂಡು ತಿಳಿದಿರುವ ಈ ಮನುಷ್ಯನು ಬಲಹೊಂದಿದ್ದಾನೆ. ಯೇಸುವಿನ ನಾಮವೂ ಅವರ ಮೂಲಕವಾಗಿ ಬರುವ ನಂಬಿಕೆಯೂ ಇವನಿಗೆ ಸಂಪೂರ್ಣ ಸ್ವಸ್ಥತೆಯನ್ನು ತಂದುಕೊಟ್ಟಿದೆ. ನೀವೆಲ್ಲರೂ ಇದನ್ನು ನೋಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತುಮ್ಚ್ಯಾ ಇದ್ರಾಕ್ ಹೊತ್ತ್ಯಾ ಹ್ಯಾ ಮಾನ್ಸಾಚಿ ವಳಕ್ ತುಮ್ಕಾ ಸಗ್ಳ್ಯಾಕ್ನಿ ಹಾಯ್, ತೆಚ್ಯಾ ನಾವಾವರ್ತಿ ಥವಲ್ಯಾ ವಿಶ್ವಾಸಾ ವೈನಾ ಹೊ ಮಾನುಸ್ ಗುನ್ ಹೊಲಾ. ಹೆ ಸಗ್ಳೆ ತುಮಿ ಬಗುಲ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:16
21 ತಿಳಿವುಗಳ ಹೋಲಿಕೆ  

ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ದಿಟ್ಟಿಸಿ ನೋಡಿ ವಾಸಿಯಾಗುವುದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು;


ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.


ಆಗ ಪೇತ್ರನು “ಬೆಳ್ಳಿ ಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆ” ಎಂದು ಹೇಳಿ,


ಅನೇಕ ದಿನ ಅವಳು ಹೀಗೆ ಮಾಡುತ್ತಿದ್ದುದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಅವಳೊಳಗಿದ್ದ ದುರಾತ್ಮಕ್ಕೆ; “ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ” ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟು ಹೋಯಿತು.


ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು” ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು.


ನನಗೆ ಪ್ರವಾದನ ವರವಿದ್ದರೂ, ಎಲ್ಲಾ ರಹಸ್ಯಗಳೂ, ಸಕಲ ವಿಧವಾದ ವಿದ್ಯೆಗಳನ್ನು ತಿಳಿದ್ದರೂ, ಬೆಟ್ಟಗಳನ್ನೂ ತೆಗೆದಿಡುವುಷ್ಟು ನಂಬಿಕೆಯಿದ್ದರೂ, ಪ್ರೀತಿಯಿಲ್ಲದವನಾಗಿದ್ದರೆ ನಾನು ಏನೂ ಅಲ್ಲದವನಾಗಿದ್ದೇನೆ.


“ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ; ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.


ಇವರು ಪೇತ್ರ ಮತ್ತು ಯೋಹಾನನ್ನು ನಡುವೆ ನಿಲ್ಲಿಸಿ “ನೀವು ಯಾವ ಶಕ್ತಿಯಿಂದ ಮತ್ತು ಯಾರ ಹೆಸರಿನಿಂದ ಇದನ್ನು ಮಾಡುತ್ತಿದ್ದೀರಿ” ಎಂದು ಕೇಳಲು,


ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ, ಕುಣಿಯುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು.


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.


ನಿನ್ನ ಕೈಚಾಚುತ್ತಿರುವಲ್ಲಿ, ನಿನ್ನ ದಾಸರು, ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು” ಅಂದರು.


ಮೋಶೆಯ ಧರ್ಮಶಾಸ್ತ್ರವನ್ನು ಮೀರಬಾರದೆಂದು ಒಬ್ಬನು ಸಬ್ಬತ್ ದಿನದಲ್ಲಿ ಸುನ್ನತಿಯನ್ನು ಮಾಡಿಸಿಕೊಳ್ಳುವುದಾದರೆ, ನಾನು ಸಬ್ಬತ್ ದಿನದಲ್ಲಿ ಒಬ್ಬ ಮನುಷ್ಯನನ್ನು ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ನೀವು ಏಕೆ ಕೋಪಗೊಳ್ಳುತ್ತೀರಿ?


ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.


ಆತನು, “ಬಾ” ಅಂದನು. ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವುದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು