Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಪ್ರತಿಷ್ಠೆಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಏರ್ಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ದೇವರು ತನ್ನ ವಿಶೇಷ ಸೇವಕನನ್ನು (ಯೇಸುವನ್ನು) ಮೊಟ್ಟಮೊದಲು ನಿಮ್ಮ ಬಳಿಗೆ ಕಳುಹಿಸಿದನು. ನಿಮ್ಮನ್ನು ಆಶೀರ್ವದಿಸುವುದಕ್ಕಾಗಿ ದೇವರು ಯೇಸುವನ್ನು ಕಳುಹಿಸಿದನು. ಆತನು ನಿಮ್ಮನ್ನು ನಿಮ್ಮ ಕೆಟ್ಟಕಾರ್ಯಗಳಿಂದ ದೂರಮಾಡಿ ಆಶೀರ್ವದಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ದೇವರು ತಮ್ಮ ಸೇವಕರಾದ ಯೇಸುವನ್ನು ಜೀವಂತವಾಗಿ ಎಬ್ಬಿಸಿದಾಗ, ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ದುರ್ಮಾರ್ಗಗಳಿಂದ ತಿರುಗಿಸಿ ನಿಮ್ಮನ್ನು ಮೊಟ್ಟಮೊದಲು ಆಶೀರ್ವದಿಸಲು ಯೇಸುವನ್ನು ನಿಮ್ಮ ಬಳಿಗೆ ಕಳುಹಿಸಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ದೆವಾನ್ ಮುಖ್ಯ್ ಸೆವಕ್ ಅದ್ದಿಚ್ಯಾ ಅದ್ದಿ ಮರ್ನಾಕ್ನಾ ಉಟ್ವುನ್ ತುಮ್ಕಾ ಆಶಿರ್ವಾದ್ ದಿವ್ಕ್ ಸಾಟ್ನಿ, ತುಮ್ಚ್ಯಾಕ್ಡೆ ಧಾಡುನ್ ದಿಲ್ಯಾನ್, ತೊ ತುಮ್ಚ್ಯಾ ಬುರ್ಶಾ ಕಾಮಾತ್ನಾ ದುರ್ ಕರುನ್ ತುಮ್ಕಾ ಆಶಿರ್ವಾದ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:26
41 ತಿಳಿವುಗಳ ಹೋಲಿಕೆ  

ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.


ಮೋಶೆಯು ಹೇಳಿದ್ದೇನಂದರೆ, ‘ದೇವರಾಗಿರುವ ಕರ್ತನು ನನ್ನ ಹಾಗೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಎಬ್ಬಿಸುವನು; ಆತನು ಹೇಳುವ ಎಲ್ಲಾ ಮಾತುಗಳಿಗೆ ನೀವು ಕಿವಿಗೊಡಬೇಕು.


ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ,


ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.


ನೀವು ಆ ಪ್ರವಾದಿಗಳ ಶಿಷ್ಯರು, ದೇವರು ನಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ ‘ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವುದು’ ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,


ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.


ಇದಲ್ಲದೆ ನಿಮ್ಮ ಬಳಿಗೆ ಬರುವಾಗ ಕ್ರಿಸ್ತನಿಂದಾಗುವ ಆಶೀರ್ವಾದಗಳನ್ನು ಹೇರಳವಾಗಿ ತರುವೆನೆಂದು ಬಲ್ಲೆನು.


ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.


ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.


ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.


ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.


“ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.


ಪುನರುಜ್ಜೀವನದ ಕಾಲಗಳು ಒದಗಿ ಆತನು ನಿಮಗೆ ನೇಮಕವಾಗಿರುವ ಕ್ರಿಸ್ತನಾದ ಯೇಸುವನ್ನು ಕಳುಹಿಸಿಕೊಡುವನು.


ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.


ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವುದನ್ನು ಕೇಳಿದ್ದೇನೆ, ‘ನೀನು ನನ್ನನ್ನು ಶಿಕ್ಷಿಸಿದ್ದಿ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು. ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.


ಆದರೆ ಯೇಸು ಹೇಳಿದ್ದೇನೆಂದರೆ “ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ” ಅಂದನು.


ಸಮಾರ್ಯದವರಾದ ನೀವು ಅರಿಯದೇ ಇರುವಂಥದನ್ನು ಆರಾಧಿಸುತ್ತೀರಿ, ಆದರೆ ನಾವು ಅರಿತಿರುವುದನ್ನೇ ಆರಾಧಿಸುವವರಾಗಿದ್ದೇವೆ. ಏಕೆಂದರೆ, ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ.


ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.


ನಮ್ಮ ಪೂರ್ವಿಕರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.


ಯಾಕೆಂದರೆ ಕ್ರಿಸ್ತನು ಪೂರ್ವಿಕರಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು