Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಿರುವಾಗಲೇ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ದುಕಾಯರೂ ಅವರಿಗೆ ವಿರೋಧವಾಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪೇತ್ರ ಮತ್ತು ಯೊವಾನ್ನ ಜನರನ್ನು ಉದ್ದೇಶಿಸಿ ಇನ್ನೂ ಮಾತನಾಡುತ್ತಿದ್ದರು. ಆಗ ಯಾಜಕರೂ ಮಹಾದೇವಾಲಯದ ದಳಪತಿಗಳೂ ಸದ್ದುಕಾಯರೂ ಅಲ್ಲಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಪೊಸ್ತಲರು ಜನರಿಗೆ ಉಪದೇಶ ಮಾಡುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪೇತ್ರ ಮತ್ತು ಯೋಹಾನ ಜನರೊಂದಿಗೆ ಮಾತಾಡುತ್ತಿದ್ದಾಗ, ಕೆಲವು ಜನರು ಅವರ ಬಳಿಗೆ ಬಂದರು. ಅಲ್ಲಿ ಕೆಲವು ಯೆಹೂದ್ಯ ಯಾಜಕರಿದ್ದರು. ಕೆಲವು ಸದ್ದುಕಾಯರಿದ್ದರು ಮತ್ತು ದೇವಾಲಯ ಕಾಯುವ ಸಿಪಾಯಿಗಳ ಅಧಿಪತಿಯೂ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪೇತ್ರ ಮತ್ತು ಯೋಹಾನರು ಜನರೊಂದಿಗೆ ಮಾತನಾಡುತ್ತಿದ್ದಾಗಲೇ, ಯಾಜಕರೂ ದೇವಾಲಯದ ದಳಪತಿಯೂ ಸದ್ದುಕಾಯರೂ ಅವರ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪೆದ್ರು ಅನಿ ಜುವಾಂವ್ ಲೊಕಾಂಚ್ಯಾಕ್ಡೆ ಬೊಲಿತ್ ರಾತಾನಾ ಅನಿ ಥೊಡಿ ಲೊಕಾ ತೆಚ್ಯಾ ಜಗ್ಗೊಳ್ ಯೆಲ್ಯಾನಿ ತ್ಯಾತುರ್ ಥೊಡಿಲೊಕಾ ಯಾಜಕಾ, ಅನಿ ಉಲ್ಲಿ ಲೊಕಾ ಸಾದುಸೆವಾಂಚಿ, ಅನಿ ದೆವಾಚಿ ಗುಡಿ ರಾಕ್ತಲ್ಯಾಂಚೊ ಮುಂಖಡ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:1
20 ತಿಳಿವುಗಳ ಹೋಲಿಕೆ  

ಅವನು ಮುಖ್ಯಯಾಜಕರ ಬಳಿಗೂ ಕಾವಲಿನ ದಳವಾಯಿಗಳ ಬಳಿಗೂ ಹೋಗಿ ತಾನು ಯೇಸುವನ್ನು ಹಿಡಿದುಕೊಡುವ ಉಪಾಯವನ್ನು ಕುರಿತು ಅವರ ಸಂಗಡ ಮಾತನಾಡಿದನು.


ಅವರು ಜನರನ್ನೂ, ಹಿರಿಯರನ್ನೂ, ಶಾಸ್ತ್ರಿಗಳನ್ನೂ ಪ್ರಚೋದಿಸಿದರು ಮತ್ತು ಅವನನ್ನು ಹಿಡಿದು, ಎಳೆದುಕೊಂಡು, ಹಿರೀಸಭೆಗೆ ತೆಗೆದುಕೊಂಡು ಹೋಗಿ ಅವನಿಗೆ ವಿರುದ್ಧವಾಗಿ ಸುಳ್ಳುಸಾಕ್ಷಿಗಳನ್ನು ಕರತಂದು ನಿಲ್ಲಿಸಿದರು.


ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ.


ದೇವಾಲಯದ ಅಧಿಪತಿಯೂ, ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತೋ ಎಂದು ಕಳವಳಗೊಂಡರು.


ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?


ಅವರೊಂದಿಗೆ ಅನ್ನನೆಂಬ ಮಹಾಯಾಜಕನೂ, ಕಾಯಫನೂ, ಯೋಹಾನನೂ, ಅಲೆಕ್ಸಾಂದ್ರನೂ, ಮಹಾಯಾಜಕನ ಸಂಬಂಧಿಕರೆಲ್ಲರೂ ಇದ್ದರು.


ಹೀಗಿರಲಾಗಿ ಯೂದನು ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಸೈನಿಕರ ಗುಂಪನ್ನೂ, ಕಾವಲಾಳುಗಳನ್ನೂ ಕರೆದುಕೊಂಡು ದೀಪಗಳನ್ನೂ, ಪಂಜುಗಳನ್ನೂ ಮತ್ತು ಆಯುಧಗಳನ್ನೂ ಹಿಡಿದುಕೊಂಡು ಅಲ್ಲಿಗೆ ಬಂದನು.


ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು.


ಅದೇ ರೀತಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ, “ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.


ಆದರೆ ಮುಖ್ಯಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟುಕೊಡಬೇಕೆಂದು ಬೇಡಿಕೊಳ್ಳುವಂತೆಯೂ ಯೇಸುವನ್ನು ಸಾಯಿಸಬೇಕೆಂದು ಕೇಳುವ ಹಾಗೆಯೂ ಜನರನ್ನು ಒಡಂಬಡಿಸಿದ್ದರು.


ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.


ಆಗ ಅವರು ರೊಟ್ಟಿಯ ಹುಳಿಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ; ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬುದಾಗಿ ತಿಳಿದುಕೊಂಡರು.


ದೇವರ ವಾಕ್ಯವು ಪ್ರಬಲವಾಯಿತು; ಶಿಷ್ಯರ ಸಂಖ್ಯೆಯು ಯೆರೂಸಲೇಮಿನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂದಿತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತ ನಂಬಿಕೆಗೆ ಒಳಗಾಗುತ್ತಾ ಬಂದರು.


ಆ ದಿನಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಫಕ್ಕನೆ ಬಂದು,


ಹೀಗಿರುವಲ್ಲಿ ಮಹಾಯಾಜಕನೂ, ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು