Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ಅಂತೆಯೇ, ನಿಮ್ಮ ಪರಮಪೂಜ್ಯದಾಸ ಯೇಸುವಿನ ವಿರುದ್ಧ ಹೆರೋದನು ಮತ್ತು ಪೊಂತ್ಸಿಯುಸ್ ಪಿಲಾತನು ಅನ್ಯಧರ್ಮದವರೊಡನೆ ಹಾಗೂ ಇಸ್ರಯೇಲಿನ ಜನರೊಡನೆ ಸೇರಿ ಈ ಪಟ್ಟಣದಲ್ಲೇ ಸಮಾಲೋಚನೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ ಪೊಂತ್ಯ ಪಿಲಾತನೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತವಾಗಿ ಕೂಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಹೆರೋದರಾಜನು, ಪೊಂತಿಯಸ್ ಪಿಲಾತನು, ಜನಾಂಗಗಳು ಮತ್ತು ಯೆಹೂದ್ಯರು ಈ ಪಟ್ಟಣದಲ್ಲಿ ಒಟ್ಟಾಗಿ ಸೇರಿಕೊಂಡು ಯೇಸುವನ್ನು ವಿರೋಧಿಸಿದಾಗ ಈ ಸಂಗತಿಗಳು ನಿಜವಾಗಿಯೂ ನೆರವೇರಿದವು. ಯೇಸು ನಿನ್ನ ಪವಿತ್ರ ಸೇವಕನಾಗಿದ್ದಾನೆ. ನೀನು ಆತನನ್ನು ಅಭಿಷೇಕಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕ ಯೇಸುವಿನ ವಿರೋಧವಾಗಿ ದುರಾಲೋಚನೆ ಮಾಡಲು ಹೆರೋದನು ಮತ್ತು ಪೊಂತ್ಯ ಪಿಲಾತನು, ಯೆಹೂದ್ಯರಲ್ಲದವರೊಂದಿಗೂ ಇಸ್ರಾಯೇಲರೊಂದಿಗೂ ಈ ಪಟ್ಟಣದಲ್ಲೇ ಸೇರಿ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಖರೆಚ್ ಬಿ ಹೆರೊದ್ ಅನಿ ಪೊಂತಿಯಸ್ ಪಿಲಾತ್ ಸಗ್ಳ್ಯಾ ಜುದೆವಾಂಚ್ಯಾ ಲೊಕಾಂಚ್ಯಾ ವಾಂಗ್ಡಾ ಅನಿ ಇಸ್ರಾಯೆಲ್ ಲೊಕಾಂಚ್ಯಾ ವಾಗ್ಡಾ ಕ್ರಿಸ್ತ್ ತುಜೊ ಪವಿತ್ರ್ ಸೆವಕಾಕ್ ವಿರೊದ್ ಹೊವ್ನ್ ಶಾರಾತ್ ಗೊಳಾ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:27
53 ತಿಳಿವುಗಳ ಹೋಲಿಕೆ  

ಆತನನ್ನು ಕಟ್ಟಿಸಿ ಕರೆದುಕೊಂಡು ಹೋಗಿ ದೇಶಾಧಿಪತಿಯಾದ ಪಿಲಾತನಿಗೆ ಒಪ್ಪಿಸಿದರು.


ನಿನ್ನ ಕೈಚಾಚುತ್ತಿರುವಲ್ಲಿ, ನಿನ್ನ ದಾಸರು, ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು” ಅಂದರು.


ಯೇಸು ಅವರಿಗೆ, “ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ” ಎಂದು ಹೇಳಿದನು.


ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.


ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ, ನಿನ್ನ ಪವಿತ್ರನಿಗೆ ಕೊಳೆಯಲು ಬಿಡಲಾರೆ.


ಆದರೆ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು. ಕೂಡಲೆ ರಕ್ತವೂ ನೀರೂ ಹೊರಗೆ ಬಂದವು.


ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ.


ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ‘ನಾನು ದೇವರ ಮಗನಾಗಿದ್ದೇನೆಂದು’ ಹೇಳಿದ್ದಕ್ಕೆ ‘ನೀನು ದೇವದೂಷಣೆ ಮಾಡುತ್ತೀ ಎಂದು ನೀವು ನನಗೆ ಹೇಳುತ್ತಿರಲ್ಲಾ?’


ಆತನು ತನ್ನ ಸ್ವಂತ ಜನರ ಬಳಿಗೆ ಬಂದನು; ಆದರೆ ಸ್ವಂತ ಜನರು ಆತನನ್ನು ಸ್ವೀಕರಿಸಲಿಲ್ಲ.


ಆ ಮೇಲೆ ಯೇಸುವನ್ನು ಹಿಡಿದವರು ಆತನನ್ನು ಪರಿಹಾಸ್ಯಮಾಡುತ್ತಾ, ಆತನಿಗೆ ಮುಸುಕುಹಾಕಿ ಹೊಡೆದು, “ನಿನ್ನನ್ನು ಹೊಡೆದವನಾರು? ಪ್ರವಾದನೆ ಹೇಳು” ಎಂದು ಆತನನ್ನು ಕೇಳಿದರು.


“ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ


ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.


ಅದೇ ಮೇರೆಗೆ ಮುಖ್ಯಯಾಜಕರೂ ಶಾಸ್ತ್ರಿಗಳೂ, “ಅವನು ಮತ್ತೊಬ್ಬರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.


ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಒಪ್ಪಿಸಿಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳ ಕೈಗೆ ಒಪ್ಪಿಸುವರು.


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ! ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ನೀನು ಹೋಗಿ ಈ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು’ ಎಂದು ಹೇಳಲು


ಆ ಕಾಲದಲ್ಲಿ ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ,


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ, ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ, “ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.”


ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ; ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.


“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.


ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,


ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ? ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ?


ನರನು ಎಷ್ಟರವನು! ಅವನು ಪರಿಶುದ್ಧನಾಗಿರುವುದು ಸಾಧ್ಯವೋ? ಮಾನವನಾಗಿ ಹುಟ್ಟಿದವನು ನೀತಿವಂತನಾಗಿರಬಹುದೇ?


ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ.


ಇದನ್ನು ನೀನು ಕೇಳಲಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು. ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತು.


ಹೆರೋದನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು.


ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದಿದ್ದ ಅತಿಥಿಗಳ ಮುಂದೆ ನೃತ್ಯಮಾಡಿ ಹೆರೋದನನ್ನು ಮೆಚ್ಚಿಸಿದಳು.


ಅಲ್ಲಿ ಕೂಡಿದ್ದವರೆಲ್ಲರೂ ಎದ್ದು ಆತನನ್ನು ಪಿಲಾತನ ಬಳಿಗೆ ಕರೆದುಕೊಂಡು ಹೋಗಿ,


ಹೀಗಿರಲಾಗಿ ಪಿಲಾತನು ಹೊರಗೆ ಅವರ ಬಳಿಗೆ ಬಂದು, “ಈ ಮನುಷ್ಯನ ಮೇಲೆ ಏನು ದೂರು ತಂದಿದ್ದೀರಿ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು