Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಿನ್ನ ಕೈಚಾಚುತ್ತಿರುವಲ್ಲಿ, ನಿನ್ನ ದಾಸರು, ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಸ್ವಸ್ಥಪಡಿಸುವ ನಿಮ್ಮ ಅಮೃತಹಸ್ತವನ್ನು ಚಾಚಿರಿ; ನಿಮ್ಮ ಪರಮಪೂಜ್ಯ ದಾಸ ಯೇಸುವಿನ ನಾಮದಲ್ಲಿ ಅದ್ಭುತಗಳೂ ಸೂಚಕಕಾರ್ಯಗಳೂ ಜರುಗುವಂತಾಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಿನ್ನ ಕೈಚಾಚಿ ಯೇಸುವಿನ ಹೆಸರಿನ ಮೂಲಕ ರೋಗಿಗಳನ್ನು ಗುಣಪಡಿಸು; ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡು” ಎಂದು ಅವರು ಪ್ರಾರ್ಥಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಿಮ್ಮ ಪವಿತ್ರ ಸೇವಕ ಯೇಸುವಿನ ನಾಮದ ಮೂಲಕವಾಗಿ ಗುಣಪಡಿಸಲು, ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಮಾಡಲು ದೇವರೇ, ನಿಮ್ಮ ಹಸ್ತವನ್ನು ಚಾಚಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಪವಿತ್ರ್ ಜೆಜುಚ್ಯಾ ನಾಂವಾನ್ ರೊಗಾತ್ ಹೊತ್ತ್ಯಾ ಲೊಕಾಕ್ನಿ ಗುನ್ ಕರ್ ಅಜಾಪಾಚಿ ಅನಿ ಚಮತ್ಕಾರಾಚಿ ಕಾಮಾ ಕರುಕ್ ತುಜೊ ಹಾತ್ ಫಿಡೆ ಕರ್ ಮನುನ್ ತೆನಿ ಮಾಗ್ನಿ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:30
19 ತಿಳಿವುಗಳ ಹೋಲಿಕೆ  

ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,


ಆಗ ಪೇತ್ರನು “ಬೆಳ್ಳಿ ಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆ” ಎಂದು ಹೇಳಿ,


ಅದಕ್ಕೆ ನಾನು, “ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು; ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿತೀರಿಸು. ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ. ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಜ್ಞಾಪಕಕ್ಕೆ ತಂದುಕೋ.


ಸ್ತೆಫನನು ದೇವರ ಕೃಪೆಯಿಂದಲೂ, ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹಾ ಅದ್ಭುತ ಕಾರ್ಯಗಳನ್ನೂ, ಸೂಚಕಕಾರ್ಯಗಳನ್ನೂ ಮಾಡುತ್ತಾ ಇದ್ದನು.


ಇದಲ್ಲದೆ ಅಪೊಸ್ತಲರ ಕೈಯಿಂದ ಅನೇಕ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜನರೊಳಗೆ ನಡೆಯುತ್ತಾ ಇದ್ದವು. ಮತ್ತು ಎಲ್ಲರು ಒಗ್ಗಟ್ಟಾಗಿ ಸೊಲೊಮೋನನ ಮಂಟಪದಲ್ಲಿ ಸೇರಿಬರುತ್ತಿದ್ದರು.


ನೀವು ನೋಡುತ್ತಿರುವಂತಹ, ನಿಮಗೆ ಗುರುತಿರುವಂತಹ ಈ ಮನುಷ್ಯನು ಗುಣವಾಗುವುದಕ್ಕೆ ಯೇಸುವಿನ ಹೆಸರಿನಲ್ಲಿ ಇಟ್ಟ ಅವನ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಸಂಪೂರ್ಣಸೌಖ್ಯವನ್ನು ಕೊಟ್ಟಿತು.


ಎಲ್ಲರೂ ಭಯ ಪರವಶರಾದರು. ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ, ಸೂಚಕಕಾರ್ಯಗಳೂ ಅಪೊಸ್ತಲರ ಮುಖಾಂತರ ನಡೆದವು.


“ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.


ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ.


ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.


ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.


ಯೇಸು ಅವನಿಗೆ “ನೀವು ಸೂಚಕ ಕಾರ್ಯಗಳನ್ನೂ ಮತ್ತು ಅದ್ಭುತ ಕಾರ್ಯಗಳನ್ನೂ ನೋಡದಿದ್ದರೆ ನಂಬುವುದೇ ಇಲ್ಲ” ಎಂದು ಹೇಳಿದನು.


ನಮ್ಮ ಪೂರ್ವಿಕರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು