Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಪೇತ್ರನೂ ಉಳಿದ ಅಪೊಸ್ತಲರೂ ಅವರಿಗೆ, “ನಾವು ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅದಕ್ಕೆ ಪ್ರತ್ಯುತ್ತರವಾಗಿ ಪೇತ್ರ ಮತ್ತು ಉಳಿದ ಪ್ರೇಷಿತರು, “ನಾವು ವಿಧೇಯರಾಗಬೇಕಾದದ್ದು ದೇವರಿಗೆ, ಮಾನವರಿಗಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಪೇತ್ರನೂ ಉಳಿದ ಅಪೊಸ್ತಲರೂ - ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಪೇತ್ರ ಮತ್ತು ಉಳಿದ ಅಪೊಸ್ತಲರು, “ನಾವು ವಿಧೇಯರಾಗಬೇಕಾದದ್ದು ದೇವರಿಗೇ ಹೊರತು ನಿಮಗಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಪೇತ್ರ ಮತ್ತು ಇತರ ಅಪೊಸ್ತಲರು ಉತ್ತರವಾಗಿ, “ನಾವು ಮನುಷ್ಯರಿಗೆ ವಿಧೇಯರಾಗಿರುವುದಕ್ಕಿಂತ ದೇವರಿಗೆ ವಿಧೇಯರಾಗಿರಬೇಕಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತನ್ನಾ ಪೆದ್ರುನ್ ಅನಿ ಹುರಲ್ಲ್ಯಾ ಅಪೊಸ್ತಲಾನಿ ಉತ್ತರ್ ದಿಲ್ಯಾನ್ ಅಮಿ ದೆವಾಕ್ ಮಾನುನ್ ಘೆತಾಂವ್ ಖರೆ ಮಾನ್ಸಾಕ್ನಿ ನ್ಹಯ್ ಮಟ್ಲ್ಯಾನ್ !

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:29
10 ತಿಳಿವುಗಳ ಹೋಲಿಕೆ  

ಸೌಲನು ಸಮುವೇಲನಿಗೆ, “ನಾನು ಯೆಹೋವನ ಮತ್ತು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆನು.


ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ;


ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.


ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತರ ಅರಸನ ಮಾತಿನಂತೆ ಮಾಡದೆ ಗಂಡು ಮಕ್ಕಳನ್ನು ಜೀವದಿಂದ ಉಳಿಸಿದರು.


ಆಗ ಯೆರೆಮೀಯನು ಸಕಲ ಸರದಾರರಿಗೂ ಸಮಸ್ತ ಜನರಿಗೂ, “ನೀವು ಕೇಳಿದ ಮಾತುಗಳನ್ನೆಲ್ಲಾ ಈ ಆಲಯಕ್ಕೂ ಈ ಪಟ್ಟಣಕ್ಕೂ ಪ್ರತಿಕೂಲವಾಗಿ ನುಡಿಯಬೇಕೆಂದು ಯೆಹೋವನು ನನ್ನನ್ನು ಕಳುಹಿಸಿದನು.


ಆಗ ಅವರು ರಾಜನ ಸನ್ನಿಧಿಯಲ್ಲಿ, “ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ, ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ, ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಅವನ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದಾನೆ” ಎಂದು ಅರಿಕೆ ಮಾಡಿದರು.


ಆದರೆ ಅರಸನು ಯೋವಾಬನಿಗೂ ಇತರ ಸೇನಾಧಿಪತಿಗಳಿಗೂ ಕಿವಿಗೊಡದೆ, ತನ್ನ ಮಾತನ್ನೇ ಸಾಧಿಸಿದ್ದರಿಂದ ಅವರು ಇಸ್ರಾಯೇಲರನ್ನು ಲೆಕ್ಕಿಸುವುದಕ್ಕಾಗಿ ಅರಸನ ಸನ್ನಿಧಿಯಿಂದ ಹೊರಟು ಹೋದರು.


ಯಾಜಕನಾದ ಊರೀಯನು ಅರಸನಾದ ಆಹಾಜನು ಹೇಳಿದಂತೆಯೇ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು