Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಇದಕ್ಕಿಂತ ಮೊದಲು ಥೈದನು ಎಂಬ ಒಬ್ಬನು ಎದ್ದು ತಾನೊಬ್ಬ ಮಹಾಪುರುಷನೆಂದು ಹೇಳಿಕೊಂಡನು. ಅವನ ಪಕ್ಷಕ್ಕೆ ಸುಮಾರು ನಾನೂರು ಜನರು ಸೇರಿಕೊಂಡರು, ಅವನು ಕೊಲ್ಲಲ್ಪಟ್ಟನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಸಲ್ಪಟ್ಟು ಇಲ್ಲವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಸ್ವಲ್ಪಕಾಲಕ್ಕೆ ಹಿಂದೆ ತೈದ ಎಂಬವನಿದ್ದ. ತಾನೊಬ್ಬ ಮಹಾಪುರುಷನು ಎಂದು ಹೇಳಿಕೊಳ್ಳುತ್ತಿದ್ದ. ಸುಮಾರು ನಾನೂರು ಮಂದಿ ಅವನ ಅನುಯಾಯಿಗಳಾದರು. ಅವನ ಕೊಲೆಯಾದದ್ದೇ, ಅವನನ್ನು ಹಿಂಬಾಲಿಸಿದವರೆಲ್ಲರೂ ಚದರಿಹೋದರು. ಅವನ ಪಕ್ಷ ನಿರ್ನಾಮವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಇದಕ್ಕಿಂತ ಮುಂಚೆ ಥೈದನು ಎದ್ದು ತಾನು ದೊಡ್ಡ ಮನುಷ್ಯನೆಂದು ಹೇಳಿಕೊಂಡನು. ಅವನ ಪಕ್ಷಕ್ಕೆ ಸುಮಾರು ನಾನೂರು ಜನರು ಸೇರಿಕೊಂಡರು. ಅವನು ಕೊಲ್ಲಲ್ಪಟ್ಟನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಸಲ್ಪಟ್ಟು ಇಲ್ಲವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಒಮ್ಮೆ, ತೈದ ಎಂಬುವನು ಬಂದದ್ದು ನಿಮ್ಮ ನೆನಪಿನಲ್ಲಿದೆಯೋ? ಅವನು ತನ್ನನ್ನು ಮಹಾಪುರುಷನೆಂದು ಹೇಳಿಕೊಂಡನು. ಸುಮಾರು ನಾನೂರು ಮಂದಿ ಅವನ ಜೊತೆ ಸೇರಿದರು. ಆದರೆ ಅವನು ಕೊಲ್ಲಲ್ಪಟ್ಟನು. ಅವನನ್ನು ಹಿಂಬಾಲಿಸುತ್ತಿದ್ದವರೆಲ್ಲ ಚದರಿ ಓಡಿಹೋದರು. ಅವರಿಂದ ಏನೂ ಮಾಡಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಕೆಲವು ದಿನಗಳ ಹಿಂದೆ ಥೈದನೆಂಬವನು ಕಾಣಿಸಿಕೊಂಡು, ತಾನು ಒಬ್ಬ ಗಣ್ಯವ್ಯಕ್ತಿಯೆಂದು ಹೇಳಿಕೊಳ್ಳುತ್ತಾ ಬಂದನು. ಸುಮಾರು ನಾಲ್ಕುನೂರು ಜನರು ಅವನ ಹಿಂಬಾಲಕರಾದರು. ಅವನು ಕೊಲೆಗೀಡಾದನು. ಅವನಿಗೆ ವಿಧೇಯರಾದವರೆಲ್ಲರೂ ಚದರಿಹೋಗಿ ಇಲ್ಲದಂತಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಎಗ್ದಾ ಥೆಯೊದಾಸ್ ಮನ್ತಲ್ಯಾ ನಾವಾಚೊ ಮಾನುಸ್ ಯೆಲ್ಲೆ ತುಮ್ಕಾ ಯಾದ್ ಅಸಿಲ್? ತೆನಿ ಅಪ್ನಾಕುಚ್ ಮೊಟೊ ಮಾನುಸ್ ಮನುನ್ ಘೆಟಲ್ಲ್ಯಾನ್ ಜಗ್ಗೊಳ್-ಜಗ್ಗೊಳ್ ಚಾರ್ಸಿ ಲೊಕಾ ತೆಚ್ಯಾ ವಾಂಗ್ಡಾ ಹೊತ್ತಿ ಹೊಲ್ಯಾರ್ ಬಿ ತೆಕಾ ಮಾರುನ್ ಟಾಕಲ್ಲ್ಯಾನಿ ತೆಚಿ ವಾಂಗ್ಡಿಯಾ ಸಗ್ಳಿ ಪರ್‍ತುನ್ ಪಳುನ್ ಗೆಲೆ ತೆಂಚೆನ್ ಕಾಯ್ಬಿ ಕರುಕ್ ಹೊವ್ಕ್‌ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:36
14 ತಿಳಿವುಗಳ ಹೋಲಿಕೆ  

ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು.


ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು.


ಅವಳ ಹಣೆಯ ಮೇಲೆ, “ಮಹತ್ತಾದ ಬಾಬೆಲೆಂಬ ಭೂಮಿಯಲ್ಲಿರುವ ಜಾರಸ್ತ್ರೀಯರ ಅಸಹ್ಯವಾದ ಕಾರ್ಯಗಳ ಮಾತೆ” ಎಂಬ ಹೆಸರನ್ನು ಬರೆಯಲಾಗಿತ್ತು.


ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.


ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳುವನಾಗಿದ್ದಾನೆ.


ಆದರೆ ಗಣ್ಯವ್ಯಕ್ತಿಗಳಾಗಿದ್ದವರಿಂದ ನನಗೇನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. ದೇವರಿಗೆ ಮನುಷ್ಯರನ್ನು ಮೆಚ್ಚಿಸಬೇಕಾಗಿಲ್ಲ. ಗಣ್ಯವ್ಯಕ್ತಿಗಳೆಂದು ಎನಿಸಿಕೊಂಡವರು ನನಗೇನನ್ನೂ ತಿಳಿಸಿಕೊಡಲಿಲ್ಲ.


ಕೆಲವು ದಿನಗಳ ಹಿಂದೆ ದಂಗೆ ಎಬ್ಬಿಸಿ ಆ ನಾಲ್ಕು ಸಾವಿರ ಮಂದಿ ಘಾತಕರನ್ನು ಅಡವಿಗೆ ಕರೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೇ” ಎಂದು ಕೇಳಿದನು.


ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಆಗ ಅವನು ದೇವರಾತ್ಮವಶನಾದ ನನ್ನನ್ನು ಎತ್ತಿಕೊಂಡು ಮರುಭೂಮಿಗೆ ಹೋದನು. ಅಲ್ಲಿ ನಾನು ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು. ಆ ಮೃಗದ ಮೈಮೇಲೆಲ್ಲಾ ದೂಷಣೆಗಳಿಂದ ಕೂಡಿದ್ದ ಹೆಸರುಗಳು ತುಂಬಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.


ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.


ಆದಕಾರಣ ಯಾರಾದರು ನಿಮಗೆ, ‘ಅಗೋ ಕ್ರಿಸ್ತನು ಅಡವಿಯಲ್ಲಿ ಇದ್ದಾನೆಂದು’ ಹೇಳಿದರೆ ಅಡವಿಗೆ ಹೊರಟುಹೋಗಬೇಡಿರಿ; ‘ಇಗೋ ಒಳಕೋಣೆಗಳಲ್ಲಿದ್ದಾನೆಂದು’ ಹೇಳಿದರೆ ನಂಬಬೇಡಿರಿ.


ಏಕೆಂದರೆ, ನನ್ನ ಹೆಸರಿನಲ್ಲಿ ಅನೇಕರು ಬಂದು, ‘ನಾನು ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.


ಅನಂತರ ಸಭೆಯವರಿಗೆ, “ಇಸ್ರಾಯೇಲ್ ಜನರೇ, ನೀವು ಈ ಮನುಷ್ಯರ ವಿಷಯದಲ್ಲಿ ತೆಗೆದುಕೊಳ್ಳುವ ನಿರ್ಧಾರದ ಕುರಿತು ಎಚ್ಚರಿಕೆಯುಳ್ಳವರಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು