Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಹಿರೀಸಭೆಯ ಎದುರಿನಿಂದ ಹೊರಟುಹೋಗಿ, ಪ್ರತಿದಿನ ಎಡೆಬಿಡದೆ ದೇವಾಲಯದಲ್ಲಿಯೂ, ಮನೆಮನೆಗಳಲ್ಲಿಯೂ, ಉಪದೇಶಮಾಡುತ್ತಾ ಕ್ರಿಸ್ತನಾದ ಯೇಸುವಿನ ಕುರಿತು ಶುಭವರ್ತಮಾನವನ್ನು ಸಾರುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಯೇಸುವೇ ಲೋಕೋದ್ಧಾರಕನೆಂದು ಪ್ರತಿದಿನ ದೇವಾಲಯದಲ್ಲೂ ಮನೆಮನೆಗಳಲ್ಲೂ ಉಪದೇಶಿಸುವುದರಲ್ಲಿ ಹಾಗೂ ಸಾರುವುದರಲ್ಲಿ ನಿರತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಹಿರೀಸಭೆಯ ಎದುರಿನಿಂದ ಹೊರಟುಹೋಗಿ ಪ್ರತಿದಿನ ಎಡೆಬಿಡದೆ ದೇವಾಲಯದಲ್ಲಿಯೂ ಮನೆಮನೆಯಲ್ಲಿಯೂ ಉಪದೇಶಮಾಡುತ್ತಾ ಕ್ರಿಸ್ತನಾದ ಯೇಸುವಿನ ವಿಷಯವಾದ ಶುಭವರ್ತಮಾನವನ್ನು ಸಾರುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಅವರು ಜನರಿಗೆ ಉಪದೇಶಿಸುವುದನ್ನು ನಿಲ್ಲಿಸಲಿಲ್ಲ. ಯೇಸುವೇ ಕ್ರಿಸ್ತನೆಂಬ ಶುಭವಾರ್ತೆಯನ್ನು ಜನರಿಗೆ ಹೇಳುವುದನ್ನು ಮುಂದುವರಿಸಿದರು. ಅವರು ಪ್ರತಿದಿನ ದೇವಾಲಯದಲ್ಲಿಯೂ ಜನರ ಮನೆಗಳಲ್ಲಿಯೂ ಉಪದೇಶಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ದಿನದಿನವೂ ಅವರು ದೇವಾಲಯಗಳಲ್ಲಿ ಮತ್ತು ಮನೆಯಿಂದ ಮನೆಗೆ ಹೋಗಿ ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ಸಾರುವುದನ್ನೂ ಬೋಧಿಸುವುದನ್ನೂ ನಿಲ್ಲಿಸಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ತೆನಿ ಲೊಕಾಕ್ನಿ ಶಿಕ್ವುತಲೆ ಬಂದ್ ಕರುಕ್ನಾತ್, ಜೆಜುಚ್ ಕ್ರಿಸ್ತ್ ಮನ್ತತ್ಲಿ ಬರಿ ಖಬರ್ ಲೊಕಾಕ್ನಿ ಸಾಂಗುಲಾಲೆ ತೆನಿ ಹರ್ ಎಕ್ ದಿಸಾಬಿ ಗುಡಿತ್ನಿ, ಅನಿ ಲೊಕಾಂಚ್ಯಾ ಘರಾತ್ನಿ ಶಿಕಾಪ್ ಕರಿತ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:42
22 ತಿಳಿವುಗಳ ಹೋಲಿಕೆ  

ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.


ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವುದಕ್ಕೂ, ಸಭೆಯಲ್ಲಿಯೂ, ಮನೆಮನೆಯಲ್ಲಿಯೂ, ಉಪದೇಶಿಸುವದಕ್ಕೂ ಹಿಂತೆಗೆಯದೆ


ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.


ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು.


ಯೇಸು ಹಗಲಿನಲ್ಲಿ ದೇವಾಲಯದಲ್ಲಿ ಉಪದೇಶಮಾಡುತ್ತಾ, ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೆ ಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ರಾತ್ರಿಯನ್ನು ಕಳೆಯುತ್ತಾ ಇದ್ದನು.


ಆಯಾ ವಾಕ್ಯಗಳ ಅರ್ಥವನ್ನು ವಿವರಿಸಿ; ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು, ಎದ್ದು ಬರುವುದು ಅಗತ್ಯವೆಂತಲೂ “ನಾನು ನಿಮಗೆ ಪ್ರಸಿದ್ಧಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ” ಸ್ಥಿರಪಡಿಸಿದನು.


ಅವನು ಕೂಡಲೇ, ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವುದಕ್ಕೆ ಪ್ರಾರಂಭಮಾಡಿದನು.


ಕರ್ತನೇ, ಈಗ ನೀನು ಅವರ ಬೆದರಿಕೆಗಳನ್ನು ನೋಡಿ ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನ ಮೂಲಕವಾಗಿ ರೋಗ ಪರಿಹಾರವೂ, ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜರಗುವಂತೆ


ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು.


ನಾನು ಶಿಲುಬೆಗೆ ಹಾಕಲ್ಪಟ್ಟ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವುದನ್ನೂ ತಿಳಿಯದವನಾಗಿ ನಿಮ್ಮಲ್ಲಿ ಇರುವೆನೆಂದು ತೀರ್ಮಾನಿಸಿಕೊಂಡೆನು.


ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.


ಅವರಲ್ಲಿ ಕುಪ್ರದ್ವೀಪದವರು ಕೆಲವರೂ, ಕುರೇನ್ಯದವರು ಕೆಲವರೂ, ಅಂತಿಯೋಕ್ಯಕ್ಕೆ ಬಂದು, ಗ್ರೀಕರೊಂದಿಗೆ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಸಾರಿದರು.


ಫಿಲಿಪ್ಪನು ಸಮಾರ್ಯವೆಂಬ ಪಟ್ಟಣಕ್ಕೆ ಹೋಗಿ ಕ್ರಿಸ್ತನ ವಿಷಯವಾಗಿ ಅಲ್ಲಿರುವವರಿಗೆ ಪ್ರಚುರಪಡಿಸಿದನು.


ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು” ಎಂದು ಉತ್ತರಕೊಟ್ಟರು.


ನಾನು ಪ್ರತಿದಿನ ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ. ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನದ ಕಾಲ” ಎಂದು ಹೇಳಿದನು.


ಇದಕ್ಕಿಂತ ಇನ್ನೂ ಹೆಚ್ಚಾಗಿ ತಿರಸ್ಕಾರ ಹೊಂದುವುದಕ್ಕೂ ನನ್ನನ್ನು ಅಲ್ಪನೆಂದು ಭಾವಿಸಿಕೊಳ್ಳುವುದಕ್ಕೂ ಸಿದ್ಧನಾಗಿದ್ದೇನೆ. ನೀನು ಹೇಳಿದ ದಾಸಿಯರಾದರೋ ಹೇಗೂ ನನ್ನನ್ನು ಸನ್ಮಾನಿಸುವರು” ಎಂದನು.


“ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಮರಣದಿಂದ ಎಬ್ಬಿಸಿದ್ದರಲ್ಲಿ;


ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು