Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪ್ರತ್ಯುತ್ತರವಾಗಿ ಅವನು ಹೀಗೆಂದನು: “ಭ್ರಾತೃಗಳೇ, ಪಿತೃಗಳೇ, ಕಿವಿಗೊಡಿ. ನಮ್ಮ ಪಿತಾಮಹ ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪಟೋಮಿಯದಲ್ಲಿ ಇದ್ದನು. ಆಗ ಮಹಿಮಾ ಸ್ವರೂಪರಾದ ದೇವರು ಅವನಿಗೆ ದರ್ಶನವಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಪ್ರಭಾವ ಸ್ವರೂಪನಾದ ದೇವರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಪ್ರತ್ಯುತ್ತರವಾಗಿ ಅವನು ಹೀಗೆಂದನು: “ನನ್ನ ಯೆಹೂದ್ಯತಂದೆಗಳೇ, ಸಹೋದರರೇ, ನನಗೆ ಕಿವಿಗೊಡಿರಿ. ನಮ್ಮ ಪಿತೃವಾದ ಅಬ್ರಹಾಮನಿಗೆ ನಮ್ಮ ಪ್ರಭಾವಸ್ವರೂಪನಾದ ದೇವರು ಕಾಣಸಿಕೊಂಡನು. ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪೊಟೇಮಿಯದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅದಕ್ಕೆ ಸ್ತೆಫನನು, “ಸಹೋದರರೇ, ತಂದೆಗಳೇ, ನನ್ನ ಮಾತಿಗೆ ಕಿವಿಗೊಡಿರಿ! ನಮ್ಮ ಪಿತೃ ಅಬ್ರಹಾಮನು ಹಾರಾನಿನಲ್ಲಿ ವಾಸಿಸುವುದಕ್ಕಿಂತ ಮೊದಲು ಮೆಸೊಪೊಟೇಮಿಯಾದಲ್ಲಿ ಇದ್ದನು. ಆಗ ಮಹಿಮೆಯ ದೇವರು ಅವನಿಗೆ ದರ್ಶನ ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ಸ್ತಪೆನಾಕ್ ಮಾಜ್ಯಾ ಭಾವಾನು ಅನಿ ಬಾಬಾನು, ಮಿಯಾ ಸಾಂಗ್ತಲೆ ಆಯ್ಕಾ, ಅಮ್ಚೊ ಪುರ್ವಜ್ಯಾಂಚೊ ಬಾಬಾ ಅಬ್ರಾಹಾಮ್ ಹಾರಾನಿತ್ ರ್‍ಹಾವ್ಚ್ಯಾ ಅದ್ದಿ ಮೆಸೆಪೊತಾಮ್ಯಾತ್ ಹೊತ್ತೊ, ದೆವಾನ್ ತೆಕಾ ಅಪ್ಲ್ಯಾ ಮಹಿಮಾನ್ ದಾಕ್ವುನ್ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:2
29 ತಿಳಿವುಗಳ ಹೋಲಿಕೆ  

ತೆರಹನು ತನ್ನ ಮಗನಾದ ಅಬ್ರಾಮನನ್ನೂ, ತನಗೆ ಮೊಮ್ಮಗನೂ, ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ, ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟು ಅವರು ಹಾರಾನ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು.


“ಸಹೋದರರೇ, ತಂದೆಗಳೇ, ಈಗ ನಾನು ನೀಡುವ ಸಮರ್ಥನೆಯ ಮಾತನ್ನು ಕೇಳಿರಿ” ಎಂದು ಹೇಳಿದನು.


ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ.


ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.


ಯೆಹೋವನೇ, ಅಬ್ರಾಮನನ್ನು ಆರಿಸಿಕೊಂಡು ಕಸ್ದೀಯರ ಊರ್ ಎಂಬ ಪಟ್ಟಣದಿಂದ ಬರಮಾಡಿ, ಅವನಿಗೆ ಅಬ್ರಹಾಮನೆಂಬ ಹೆಸರನ್ನು ಕೊಟ್ಟ ದೇವರು ನೀನೇ.


ನಂತರ ಆತನು ಅಬ್ರಾಮನಿಗೆ, “ಈ ದೇಶವನ್ನು ನಿನಗೆ ಬಾಧ್ಯಸ್ಥವಾಗಿ ಕೊಡುವುದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನು ನಾನೇ” ಎಂದು ಹೇಳಿದನು.


ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.


ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿತಿರಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ;


ಇದನ್ನು ಅವನು ಹೇಳಿದಾಗ ಫರಿಸಾಯರಿಗೂ, ಸದ್ದುಕಾಯರಿಗೂ ಜಗಳ ಹುಟ್ಟಿತು; ಸಭೆಯಲ್ಲಿ ಒಡಕುಂಟಾಯಿತು.


ಯೆಶಾಯನು ಯೇಸುವಿನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಈ ಮಾತನ್ನು ಹೇಳಿದನು.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು


ನಿಮ್ಮ ಪಿತೃವಾದ ಅಬ್ರಹಾಮನನ್ನೂ, ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು, ಆಶೀರ್ವದಿಸಿ ಅವನ ಸಂತಾನವನ್ನು ಹೆಚ್ಚಿಸಿದೆನು.


ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು.


ಮಹಾಮಹಿಮೆಯುಳ್ಳ ಈ ಅರಸನು ಯಾರು? ಸೇನಾಧೀಶ್ವರನಾದ ಯೆಹೋವನೇ, ಮಹಾಮಹಿಮೆಯುಳ್ಳ ಅರಸನು ಈತನೇ. ಸೆಲಾ.


ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ.


ಯೆಹೋಶುವನು ಅವರಿಗೆ, “ನಿಮ್ಮ ದೇವರಾದ ಯೆಹೋವನು ಹೇಳುವುದೇನೆಂದರೆ, ಅಬ್ರಹಾಮ, ನಾಹೋರ ಎಂಬುವವರ ತಂದೆಯಾದ ತೆರಹ, ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.


ಯಾಕೋಬನು ಅವರಿಗೆ, “ಅಣ್ಣಂದಿರೇ, ನೀವು ಎಲ್ಲಿಯವರು?” ಎಂದು ಕೇಳಲು ಅವರು, “ನಾವು ಖಾರಾನ್ ಊರಿನವರು” ಎಂದರು.


ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ತಮ್ಮನ ಮಗನಾದ ಲೋಟನನ್ನೂ, ತಾನೂ ಲೋಟನೂ ಹಾರಾನಿನಲ್ಲಿ ಸಂಪಾದಿಸಿದ್ದ ಎಲ್ಲಾ ಸೊತ್ತನ್ನೂ, ದಾಸ ದಾಸಿಯರನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ಬಂದನು.


ಯೆಹೋವನು ಅಬ್ರಾಮನಿಗೆ, “ನೀನು, ನಿನ್ನ ಸ್ವದೇಶವನ್ನೂ, ಬಂಧುಬಳಗವನ್ನೂ, ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟು ಹೋಗು.


ನನ್ನ ತಂದೆತಾತಂದಿರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?


ಆಗ ಮಹಾಯಾಜಕನು, “ಈ ಸಂಗತಿಗಳು ಸತ್ಯವೋ?” ಎಂದು ಸ್ತೆಫನನನ್ನು ಕೇಳಿದ್ದಕ್ಕೆ ಅವನು, “ಸಹೋದರರೇ, ತಂದೆಗಳೇ, ಕೇಳಿರಿ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.


ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.


ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು