Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 “ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 “ ‘ನಮ್ಮ ನ್ಯಾಯತೀರಿಸುವ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?’ ಎಂದು ಇಸ್ರಯೇಲರಿಂದ ತಿರಸ್ಕೃತನಾದವನೇ ಆ ಮೋಶೆ. ಉರಿಯುವ ಪೊದೆಯಲ್ಲಿ ಕಾಣಿಸಿಕೊಂಡ ತಮ್ಮ ದೂತನ ಮೂಲಕ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ನೇಮಿಸಿದ್ದು ಇವನನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅವರು ಯಾವ ಮೋಶೆಯನ್ನು - ನಿನ್ನನ್ನು ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರೆಂದು ಹೇಳಿ ಬೇಡವೆಂದರೋ ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ ಬಿಡುಗಡೆಮಾಡುವವನನ್ನಾಗಿಯೂ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 “ಆ ಯೆಹೂದ್ಯರಿಂದ ತಿರಸ್ಕೃತನಾದವನೇ ಈ ಮೋಶೆ. ಅವರು ಅವನಿಗೆ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ನಿನಗೆ ಯಾರಾದರೂ ಹೇಳಿದರೇ?’ ಎಂದು ಪ್ರಶ್ನಿಸಿದ್ದರು. ಆದರೆ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ಕಳುಹಿಸಿದ್ದು ಆ ಮೋಶೆಯನ್ನೇ. ದೇವರು ತನ್ನ ದೂತನ ಮೂಲಕವಾಗಿ ಮೋಶೆಯನ್ನು ಕಳುಹಿಸಿದನು. ಉರಿಯುವ ಪೊದೆಯಲ್ಲಿ ಮೋಶೆಯು ಕಂಡದ್ದು ಈ ದೇವದೂತನನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ ‘ನಿನ್ನನ್ನು ಅಧಿಕಾರಿಯನ್ನಾಗಿಯೂ ನ್ಯಾಯಾಧೀಶನನ್ನಾಗಿಯೂ ನೇಮಿಸಿದವರು ಯಾರು?’ ಎಂಬ ಮಾತುಗಳಿಂದ ಇಸ್ರಾಯೇಲರು ತಿರಸ್ಕರಿಸಿದಂಥ ಆ ಮೋಶೆಯೇ ಇವನು. ಉರಿಯುವ ಪೊದೆಯಲ್ಲಿ ದರ್ಶನ ಕೊಟ್ಟು ದೇವದೂತನ ಮುಖಾಂತರವಾಗಿ ದೇವರೇ ಇವನನ್ನು ಅವರ ಅಧಿಕಾರಿಯನ್ನಾಗಿಯೂ ವಿಮೋಚಕನ್ನಾಗಿಯೂ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಆಗಿನ್ ಜಳುಕ್ಲಾಗಲ್ಯಾ ಝಿಳಿತ್ ಮೊಯ್ಜೆನ್ ದೆವ್ ದುತಾಕ್ ಬಗಲ್ಯಾನ್, ದೆವಾನ್ ತ್ಯಾ ದುತಾಕ್ನಾಚ್ ಮೊಯ್ಜೆಕ್ ಇಸ್ರಾಯೆಲ್ ಲೊಕಾಕ್ನಿ ಸುಟ್ಕಾ ಕರ್‍ತಲೊ ಅನಿ ಅದಿಪತಿ ಕರುನ್ ಧಾಡಲೆ, ಖರೆ ತ್ಯಾ ಲೊಕಾನಿ ತೆಕಾ ಅಮ್ಚೊ ಮುಖಂಡ್ ಅನಿ ಝಡ್ತಿ ಕರ್‍ತಲೊ ಮನುನ್ ತುಕಾ ಕೊನಿತರಿ ಸಾಂಗ್ಲಾತ್ ಕಾಯ್? ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:35
32 ತಿಳಿವುಗಳ ಹೋಲಿಕೆ  

ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ‘ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ’ ಎಂದು ಹೇಳಿಸಿದರು.


ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು, ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ.


ನಾವು ಯೆಹೋವನಿಗೆ ಮೊರೆಯಿಡಲಾಗಿ, ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ, ನಮ್ಮನ್ನು ಐಗುಪ್ತ ದೇಶದಿಂದ ಬಿಡುಗಡೆಮಾಡಿದನು. ಈಗ ನಾವು ನಮ್ಮ ರಾಜ್ಯದ ಗಡಿಯಲ್ಲಿರುವ ಕಾದೇಶ್ ಎಂಬ ಊರಿನಲ್ಲಿದ್ದೇವೆ.


ಆಗ ಇಸ್ರಾಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಅವರ ಮುಂದಾಗಿ ಹೋಗುತ್ತಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.


ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.


ಯಾಕೆಂದರೆ, ದೇವದೂತರ ಮೂಲಕ ಹೇಳಲ್ಪಟ್ಟ ಸಂದೇಶವು ಸ್ಥಿರವಾಗಿರಲು, ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಮತ್ತು ಅವಿಧೇಯತ್ವಕ್ಕೂ ಶಿಕ್ಷಾರ್ಹವಾದ ಪ್ರತಿಫಲ ಹೊಂದಿದ್ದರು.


ಕ್ರಿಸ್ತನು ಅದೃಶ್ಯನಾದ ದೇವರ ಪ್ರತಿರೂಪನೂ, ಸೃಷ್ಟಿಗೆಲ್ಲಾ ಜೇಷ್ಠಪುತ್ರನೂ ಆಗಿದ್ದಾನೆ.


“ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.


“ನಲವತ್ತು ವರ್ಷ ತುಂಬಿದ ಮೇಲೆ ದೇವದೂತನು ಸೀನಾಯಿಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು.


ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.


ಮೋಶೆಯು ಹೇಳಿದ್ದೇನಂದರೆ, ‘ದೇವರಾಗಿರುವ ಕರ್ತನು ನನ್ನ ಹಾಗೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಎಬ್ಬಿಸುವನು; ಆತನು ಹೇಳುವ ಎಲ್ಲಾ ಮಾತುಗಳಿಗೆ ನೀವು ಕಿವಿಗೊಡಬೇಕು.


“ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು.


ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು.


ಅದಕ್ಕೆ ಅವರೆಲ್ಲರೂ, “ಆತನನ್ನು ಬೇಡ ನಮಗೆ ಬರಬ್ಬನನ್ನು ಬಿಟ್ಟುಕೊಡಬೇಕು” ಎಂದು ಪುನಃ ಕೂಗಿಕೊಂಡರು. ಈ ಬರಬ್ಬನು ದರೋಡೆಗಾರನಾಗಿದ್ದನು.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಕುರುಬನು ಕುರಿಹಿಂಡನ್ನು ಹೇಗೋ, ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ, ನಿನ್ನ ಪ್ರಜೆಯನ್ನು ಮುನ್ನಡೆಸಿದಿ.


ಐಗುಪ್ತಕ್ಕೆ ಬಂದ ಯಾಕೋಬನ ವಂಶದವರಾದ ನಿಮ್ಮ ಹಿರಿಯರು ಯೆಹೋವನಿಗೆ ಮೊರೆಯಿಟ್ಟಾಗ, ಆತನು ಮೋಶೆ ಆರೋನರ ಮುಖಾಂತರ ಅವರನ್ನು ಐಗುಪ್ತದಿಂದ ಬಿಡಿಸಿ ಈ ದೇಶದಲ್ಲಿ ನೆಲೆಗೊಳಿಸಿದನು.


ಕೆಲವು ಮಂದಿ ಅಯೋಗ್ಯರು, “ಇವನು ನಮ್ಮನ್ನು ರಕ್ಷಿಸುವನೋ?” ಎಂದು ತಿರಸ್ಕರಿಸಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.


ನಾನು, ನಿನಗಿಂತ ಮುಂದಾಗಿ ಒಬ್ಬ ದೂತನನ್ನು ಕಳುಹಿಸಿ ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ಹೊರದೂಡುವೆನು.


ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡೆಸಿಕೊಂಡು ಹೋಗು. ನೋಡು, ನನ್ನ ದೂತನು ನಿನ್ನ ಮುಂದೆ ನಡೆದು ಮುನ್ನಡೆಸುವನು, ಆದರೂ ನನ್ನ ನ್ಯಾಯತೀರ್ಪಿನ ದಿನದಲ್ಲಿ ನಾನು ಅವರ ಪಾಪಕ್ಕೆ ತಕ್ಕಂತೆ ಅವರನ್ನು ದಂಡಿಸುವೆನು.”


ಬೆಳಗಿನ ಜಾವದಲ್ಲಿ ಯೆಹೋವನು ಆ ಅಗ್ನಿ ಸ್ತಂಭ ಮತ್ತು ಮೇಘ ಸ್ತಂಭದೊಳಗಿನಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅವರಲ್ಲಿ ಗಲಿಬಿಲಿಯನ್ನು ಉಂಟುಮಾಡಿದನು.


ಆ ಮನುಷ್ಯನು ಅವನಿಗೆ, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ, ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದು ಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದಿಯೋ?” ಅಂದನು. ಈ ಮಾತನ್ನು ಕೇಳಿ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ಬಯಲಿಗೆ ಬಂತಲ್ಲಾ” ಅಂದುಕೊಂಡನು.


ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು