Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:48 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಆದರೂ ಪರಾತ್ಪರನಾದ ದೇವರು ಮನುಷ್ಯರ ಕೈಯಿಂದ ಕಟ್ಟಿದ ನಿವಾಸಗಳಲ್ಲಿ ವಾಸಮಾಡುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಆದರೆ ಪರಾತ್ಪರ ದೇವರು ಮಾನವ ನಿರ್ಮಿತ ಆಲಯಗಳಲ್ಲಿ ಮನೆಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಆದರೂ ಪರಾತ್ಪರನು ಕೈಯಿಂದ ಕಟ್ಟಿದ ಮನೆಗಳಲ್ಲಿ ವಾಸಮಾಡುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 “ಆದರೆ ಮನುಷ್ಯರು ತಮ್ಮ ಕೈಯಾರೆ ನಿರ್ಮಿಸಿದ ಮನೆಗಳಲ್ಲಿ ಮಹೋನ್ನತನು (ದೇವರು) ವಾಸಿಸುವುದಿಲ್ಲ. ಪ್ರವಾದಿಯು ಹೀಗೆ ಬರೆದಿದ್ದಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 “ಹೀಗಿದ್ದರೂ ಮಹೋನ್ನತ ದೇವರು ಮಾನವರು ನಿರ್ಮಿಸಿದ ಆಲಯಗಳಲ್ಲಿ ವಾಸಮಾಡುವುದಿಲ್ಲ. ಪ್ರವಾದಿಯು ಹೇಳಿದಂತೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ಖರೆ ಪ್ರವಾದಿನಿ ಸಾಂಗಲ್ಲ್ಯಾ ಸಾರ್ಕೆ ಸಗ್ಳ್ಯಾತ್ ಮೊಟೊ ದೆವ್ ಮಾನ್ಸಾನಿ ಅಪ್ಲ್ಯಾ ಹಾತಿನ್ ಬಾಂದಲ್ಯಾ ಘರಾತ್ನಿ ವಸ್ತಿ ರ್‍ಹಾಯ್ನಾ, ಮನುನ್ ಲಿವಲ್ಲೆ ಹಾಯ್:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:48
17 ತಿಳಿವುಗಳ ಹೋಲಿಕೆ  

“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲದು. ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು?


ಆದರೆ ದೇವರು ನಿಜವಾಗಿ ಮನಷ್ಯರೊಡನೆ ಭೂಲೋಕದಲ್ಲಿ ವಾಸವಾಗಿರುವನೋ? ಸ್ವರ್ಗವೂ, ಸ್ವರ್ಗಾಧಿ ಸ್ವರ್ಗವೂ ನಿನ್ನ ವಾಸಕ್ಕೆ ಸಾಲವು, ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಆಲಯವು ನಿನಗೆ ಹೇಗೆ ಸಾಕಾದೀತು?


ಯೆಹೋವನೇ ನನ್ನ ಶರಣನು! ಅತ್ಯುನ್ನತನಾದ ದೇವರನ್ನು ನಿವಾಸಸ್ಥಾನ ಮಾಡಿಕೊಂಡಿದ್ದಿಯಲ್ಲಾ.


ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.


ಅತ್ಯುನ್ನತನಾದ ದೇವರ ಮೊರೆಹೊಕ್ಕವನು, ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.


ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ.


ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ, ನಾನು ಆತನನ್ನು ಕೊಂಡಾಡುವೆನು. ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.


ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.


ಒಂದು ನದಿ ಇದೆ; ಅದರ ಕಾಲುವೆಗಳು, ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ, ದೇವರ ನಗರವನ್ನು ಸಂತೋಷಪಡಿಸುತ್ತವೆ.


ಹೇಗೆಂದರೆ, “ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇಮಿಸಿಕೊಟ್ಟಾಗ ಇಸ್ರಾಯೇಲರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದನು.


ಅತ್ತಿತ್ತ ತಿರುಗಿಕೊಳ್ಳುತ್ತಾರೆ, ದೇವರ ಕಡೆಗೆ ತಿರುಗಿಕೊಳ್ಳುವುದಿಲ್ಲ; ಮೋಸದ ಬಿಲ್ಲಿಗೆ ಸಮಾನರಾಗಿದ್ದಾರೆ. ಅವರ ಮುಖಂಡರು ತಮ್ಮ ನಾಲಿಗೆಯ ಸೊಕ್ಕಿನ ನಿಮಿತ್ತ ಖಡ್ಗದಿಂದ ಹತರಾಗಿ ಬೀಳುವರು; ಅವರ ಸೋಲು ಐಗುಪ್ತದೇಶದ ಹಾಸ್ಯಕ್ಕೆ ಆಸ್ಪದವಾಗುವುದು.


ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು.


ಭೂಮಿಯ ಮೇಲಿರುವ ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು