Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:52 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ನಿಮ್ಮ ಪೂರ್ವಜರು ಹಿಂಸೆಗೆ ಗುರಿಪಡಿಸದ ಪ್ರವಾದಿ ಯಾರಾದರೂ ಇದ್ದಾರೆಯೆ? ಸತ್ಯಸ್ವರೂಪನು ಬರಲಿದ್ದಾನೆಂದು ಮುಂತಿಳಿಸಿದವರನ್ನು ಅವರು ಕೊಂದುಹಾಕಿದರು. ನೀವಾದರೋ, ಆ ಸತ್ಯಸ್ವರೂಪನನ್ನು ಹಿಡಿದುಕೊಟ್ಟು ಕೊಲೆಮಾಡಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಪ್ರವಾದಿಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿ ಸ್ವರೂಪನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಜೀವಸಿದ್ದ ಪ್ರವಾದಿಗಳಲ್ಲಿ ಪ್ರತಿಯೊಬ್ಬರನ್ನೂ ನಿಮ್ಮ ಪಿತೃಗಳು ಹಿಂಸಿಸಿದರು. ನೀತಿವಂತನೊಬ್ಬನು (ಕ್ರಿಸ್ತನು) ಬರುತ್ತಾನೆಂದು ಬಹುಕಾಲದ ಹಿಂದೆಯೇ ಆ ಪ್ರವಾದಿಗಳು ತಿಳಿಸಿದ್ದರು. ಆದರೆ ನಿಮ್ಮ ಪಿತೃಗಳು ಆ ಪ್ರವಾದಿಗಳನ್ನು ಕೊಂದುಹಾಕಿದರು. ಈಗ ನೀವು ನೀತಿವಂತನಿಗೆ ವಿರುದ್ಧವಾಗಿ ತಿರುಗಿ ಆತನನ್ನು ಕೊಂದುಹಾಕಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ನಿಮ್ಮ ಪಿತೃಗಳು ಹಿಂಸೆಪಡಿಸದೆ ಇದ್ದ ಪ್ರವಾದಿ ಒಬ್ಬನಾದರೂ ಇರುವನೇ? ನೀತಿವಂತರಾಗಿರುವ ಒಬ್ಬರು ಬರಲಿದ್ದಾರೆಂದು ಮುಂತಿಳಿಸಿದವರನ್ನು ಸಹ ಅವರು ಕೊಂದುಹಾಕಿದರು. ಈಗ ನೀವೇ ಅವರನ್ನು ಹಿಡಿದುಕೊಟ್ಟು ಕೊಲೆಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

52 ತುಮ್ಚ್ಯಾ ಪುರ್ವಜಾನಿ ತರಾಸ್ ದಿಸ್ತಾನಾ ಸೊಡಲೊ ಪ್ರವಾದಿ ಕೊನ್ ಹಾಯ್? ಅನಿ ತೆನಿ ತ್ಯಾ ನಿತಿವಂತಾಚ್ಯಾ ಯೆನ್ಯಾಚ್ಯಾ ಅದ್ದಿಚ್ ಬರಿ ಖಬರ್ ಸಾಂಗಲ್ಲ್ಯಾಕ್ನಿ ಜಿವ್ ಕಾಡ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:52
32 ತಿಳಿವುಗಳ ಹೋಲಿಕೆ  

ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.


ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.


ಅವನು ಅದಕ್ಕೆ, “ಸೇನಾಧೀಶ್ವರನಾದ ದೇವರೇ, ಯೆಹೋವನೇ ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ. ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.


ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.


ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”


ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು.


ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.


“ಆಗ ಅವನು; ‘ನಮ್ಮ ಪೂರ್ವಿಕರ ದೇವರು, ತನ್ನ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕೂ, ಆ ನೀತಿವಂತನನ್ನು ನೋಡುವುದಕ್ಕೂ, ಆತನ ಬಾಯಿಂದ ಬಂದ ಮಾತನ್ನು ಕೇಳುವುದಕ್ಕೂ ನಿನ್ನನ್ನು ನೇಮಿಸಿದ್ದಾನೆ.


ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು.


ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು.


ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.


ಇದಲ್ಲದೆ ಸಮುವೇಲನೂ, ಅವನ ತರುವಾಯ ಬಂದು ಪ್ರವಾದಿಸಿದ ಎಲ್ಲಾ ಪ್ರವಾದಿಗಳೂ ಸಹ ಈಗಿನ ದಿನಗಳನ್ನು ಕುರಿತು ತಿಳಿಸಿರುವರು.


ಆದರೆ, ಕ್ರಿಸ್ತನು ಕಷ್ಟಗಳನ್ನನುಭವಿಸಬೇಕೆಂದು, ದೇವರು ಎಲ್ಲಾ ಪ್ರವಾದಿಗಳ ಮೂಲಕ ಮುಂಚಿತವಾಗಿ ಹೇಳಿಸಿದ ಮಾತುಗಳನ್ನು ಹೀಗೆ ನೆರವೇರಿಸಿದನು.


ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.


ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು.


ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ, ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು.


ಅದಕ್ಕೆ ಅವನು, “ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, ಪರಿಶುದ್ಧನೂ, ಸತ್ಯವಂತನೂ, ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,


ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.


ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪೂರ್ವಿಕರು ಪ್ರವಾದಿಗಳಿಗೂ ಹಾಗೆಯೇ ಮಾಡಿದರು.


ನಾನು ನನ್ನ ತಂದೆಯ ಬಳಿಗೆ ಹೋಗಿ, ಇನ್ನು ಮೇಲೆ ನಿಮಗೆ ಕಾಣಿಸದೆ ಇರುವುದರಿಂದ ನೀತಿಯ ಕುರಿತಾಗಿಯೂ,


ದ್ರೋಹಿಗಳೂ, ದುಡುಕುವವರೂ, ದುರಹಂಕಾರವುಳ್ಳವರೂ, ದೇವರನ್ನು ಪ್ರೀತಿಸುವುದಕ್ಕಿಂತ ಅಧಿಕವಾಗಿ ಭೋಗವನ್ನೇ ಪ್ರೀತಿಸುವವರೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು