Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:58 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

58 ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

58 ಪಟ್ಟಣದಿಂದ ಹೊರಕ್ಕೆ ದಬ್ಬಿ ಅವನ ಮೇಲೆ ಕಲ್ಲು ತೂರಿದರು. ಸಾಕ್ಷಿಕೊಟ್ಟವರು ತಮ್ಮ ಬಟ್ಟೆಬರೆಗಳನ್ನು ತರುಣ ಸೌಲನ ವಶದಲ್ಲಿ ಇಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

58 ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

58 ಅವನನ್ನು ಪಟ್ಟಣದಿಂದ ಹೊರಗೆ ಎಳೆದೊಯ್ದು, ಅವನು ಸಾಯುವವರೆಗೂ ಅವನ ಮೇಲೆ ಕಲ್ಲುಗಳನ್ನು ಎಸೆದರು. ಸ್ತೆಫನನ ವಿರುದ್ಧವಾಗಿ ಸುಳ್ಳು ಹೇಳಿದ ಜನರು ತಮ್ಮ ಮೇಲಂಗಿಗಳನ್ನು ಬಿಚ್ಚಿ ಸೌಲನೆಂಬ ಯುವಕನಿಗೆ ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

58 ಅವನನ್ನು ಪಟ್ಟಣದ ಹೊರಗೆ ಎಳೆದುಕೊಂಡು ಹೋಗಿ ಅವನ ಮೇಲೆ ಕಲ್ಲೆಸೆಯಲು ಪ್ರಾರಂಭಿಸಿದರು. ಆ ಸಮಯದಲ್ಲಿ ಸಾಕ್ಷಿಗಳು ತಮ್ಮ ಬಟ್ಟೆಗಳನ್ನು ಸೌಲ ಎಂಬ ಹೆಸರಿನ ಒಬ್ಬ ಯುವಕನ ಪಾದಗಳ ಬಳಿಯಲ್ಲಿಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

58 ತೆಕಾ ಶಾರಾತ್ನಾ ಭಾಯ್ರ್ ವಡುನ್ ನೆವ್ನ್, ತೊ ಮರಿ ಪತರ್ ಬಿ ತೆಚ್ಯಾ ವೈರ್ ಗುಂಡೆ ಟಾಕ್ಲ್ಯಾನಿ ಸ್ತೆಪನಾಕ್ ವಿರೊಧ್ ಹೊವ್ನ್ ಸಾಕ್ಷಿ ಸಾಂಗಲ್ಲ್ಯಾ ಲೊಕಾನಿ, ಅಪ್ಲಿ ವೈಲಿ ಅಂಗಿಯಾ ಕಾಡುನ್ ಸಾವ್ಲು ಮನ್ತಲ್ಯಾ ದಾಂಡ್ಗ್ಯಾ ಮಾನ್ಸಾಚ್ಯಾ ಪಾಂಯಾತ್ನಿ ಥವ್ಲ್ಯಾನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:58
17 ತಿಳಿವುಗಳ ಹೋಲಿಕೆ  

ಮತ್ತು ನಿನ್ನ ಸಾಕ್ಷಿಯಾದ ಸ್ತೆಫನನ ರಕ್ತವು ಚೆಲ್ಲಿಸಲ್ಪಟ್ಟಾಗ, ನಾನೂ ಹತ್ತಿರ ನಿಂತು ಅದನ್ನು ಸಮ್ಮತಿಸಿ, ಅವನನ್ನು ಕೊಂದವರ ವಸ್ತ್ರಗಳನ್ನು ಕಾಯುತ್ತಿದ್ದೆನಲ್ಲಾ’ ಎಂಬುದು ಅವರೇ ಬಲ್ಲವರಾಗಿದ್ದಾರೆ.


ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.


ಆ ಸಾಕ್ಷಿಗಳು, “ಈ ಮನುಷ್ಯನು ಈ ಪರಿಶುದ್ಧವಾದ ಸ್ಥಳಕ್ಕೆ ವಿರೋಧವಾಗಿಯೂ, ಧರ್ಮಶಾಸ್ತ್ರಕ್ಕೆ ವಿರೋಧವಾಗಿಯೂ ಮಾತನಾಡುವುದನ್ನು ನಿಲ್ಲಿಸುತ್ತಿಲ್ಲ ಎಂದು ಹೇಳಿದರು.


ಈ ಮಾರ್ಗದವರನ್ನು ಹಿಂಸಿಸುವವನಾಗಿ ಗಂಡಸರಿಗೂ, ಹೆಂಗಸರಿಗೂ ಬೇಡಿಹಾಕಿಸುತ್ತಾ, ಅವರನ್ನು ಸೆರೆಮನೆಗಳಿಗೆ ಹಾಕಿಸುತ್ತಾ ಇದ್ದೆನು, ಕೊಲೆ ಮಾಡಲಿಕ್ಕೂ ಹಿಂಜರಿಯದೆ ಹಿಂಸಿಸುತ್ತಿದ್ದೆನು.


ಎದ್ದು ಆತನನ್ನು ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರು ಕಟ್ಟಲ್ಪಟ್ಟಿದ್ದ ಗುಡ್ಡದ ಅಂಚಿಗೆ ನಡಿಸಿಕೊಂಡು ಹೋಗಿ ಅಲ್ಲಿಂದ ಕೆಳಕ್ಕೆ ದೊಬ್ಬಿಬಿಡಬೇಕೆಂದಿದ್ದರು.


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ತರುವಾಯ ಯೆಹೋವನು ಮೋಶೆಗೆ, “ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು; ಸರ್ವಸಮೂಹದವರ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು” ಎಂದು ಆಜ್ಞಾಪಿಸಿದನು.


ಆಗ ಅವರು ಕೆಲವು ಜನರಿಗೆ, “ಇವನು ಮೋಶೆಗೆ ವಿರೋಧವಾಗಿಯೂ, ದೇವರಿಗೆ ವಿರೋಧವಾಗಿಯೂ ದೂಷಣೆಯ ಮಾತುಗಳನ್ನಾಡುವುದನ್ನು ಕೇಳಿದೆವೆಂದು” ಹೇಳಿರಿ ಎಂದು ಕೆಲವರನ್ನು ಮನವೊಲಿಸಿದರು.


ಆದರೆ ಅವರು ಮಹಾಶಬ್ದದಿಂದ ಕೂಗಿ, ಕಿವಿಗಳನ್ನು ಮುಚ್ಚಿಕೊಂಡು, ಒಟ್ಟಾಗಿ ಅವನ ಮೇಲೆ ಬಿದ್ದು,


ಅವರು ಕೂಗುತ್ತಾ, ತಮ್ಮ ವಸ್ತ್ರಗಳನ್ನು ಹರಿದುಕೊಳ್ಳುತ್ತಾ, ಧೂಳನ್ನು ತೂರುತ್ತಾ ಇರಲಾಗಿ,


ಯೆರೂಸಲೇಮಿನಲ್ಲಿ ಹಾಗೆಯೇ ಮಾಡಿದ್ದೆನು. ಮುಖ್ಯಯಾಜಕರಿಂದ, ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇರಿಸಿ, ಅವರಿಗೆ ಮರಣದ ತೀರ್ಪಾದಾಗ, ನಾನು ಅದಕ್ಕೆ ಸಮ್ಮತಿಯನ್ನು ಸೂಚಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು