Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:60 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

60 ಮೊಣಕಾಲೂರಿ, “ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು” ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿ ನಿದ್ರೆಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

60 ಅನಂತರ ಮೊಣಕಾಲೂರಿ, “ಪ್ರಭೂ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡಿ,” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು. ಸೌಲನು ಸ್ತೇಫನನ ಕೊಲೆಗೆ ಸಮ್ಮತಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

60 ಯೇಸುಸ್ವಾವಿುಯೇ, ನನ್ನಾತ್ಮವನ್ನು ಸೇರಿಸಿಕೋ ಎಂದು ಪ್ರಾರ್ಥಿಸಿ ಮೊಣಕಾಲೂರಿ - ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

60 ಅವನು ಮೊಣಕಾಲೂರಿ, “ಪ್ರಭುವೇ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡ!” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

60 ಅನಂತರ ಮೊಣಕಾಲೂರಿ, “ಕರ್ತ ಯೇಸುವೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡ,” ಎಂದು ಗಟ್ಟಿಯಾಗಿ ಕೂಗಿದನು. ಇದನ್ನು ಹೇಳಿದ ಮೇಲೆ, ಪ್ರಾಣಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

60 ತೆನಿ ಡಿಂಬಿಯಾರ್ನಿ ಇಬೆ ರ್‍ಹಾವ್ನ್, “ಧನಿಯಾ, ಹ್ಯೊ ಪಾಪ್ ಹೆಂಚ್ಯಾ ವೈರ್ ಘಾಲು ನಕ್ಕೊ!” ಮನುನ್ ಮೊಟ್ಯಾ ಧನಾನ್ ಸಾಂಗುನ್ಗೆತ್ ಜಿಂವ್ ಸೊಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:60
23 ತಿಳಿವುಗಳ ಹೋಲಿಕೆ  

ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.


ಆಗ ಯೇಸು, “ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು” ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು.


ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ ಪ್ರಥಮಫಲವಾದನು.


ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆಮಾಡಿದನು.


ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು; “ತಬಿಥಾ, ಎದ್ದೇಳು” ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತುಕೊಂಡಳು.


ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ.


ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆಹೋದವರು ನಾಶವಾದರು ಎಂದರ್ಥ.


ಆ ದಿನಗಳನ್ನು ಮುಗಿಸಿಕೊಂಡು ನಾವು ಹೊರಡುವಾಗ ಅವರೆಲ್ಲರೂ ತಮ್ಮ ಮಡದಿ ಮಕ್ಕಳು ಸಹಿತವಾಗಿ ಬಂದು ನಮ್ಮನ್ನು ಊರ ಹೊರಕ್ಕೆ ಬೀಳ್ಕೊಟ್ಟರು. ನಾವು ಸಮುದ್ರತೀರದಲ್ಲಿ ಮೊಣಕಾಲೂರಿಕೊಂಡು ಪ್ರಾರ್ಥನೆ ಮಾಡಿ,


“ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.


ಆ ಮೇಲೆ ಆತನು ಅವರನ್ನು ಬಿಟ್ಟು ಕಲ್ಲೆಸೆತದಷ್ಟು ದೂರ ಹೋಗಿ, ಮೊಣಕಾಲೂರಿ,


ನಾವು ಎಚ್ಚರವಾಗಿದ್ದರೂ ಸರಿಯೇ ಅಥವಾ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಯೇಸು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟನು.


ತರುವಾಯ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಕಾಣಿಸಿಕೊಂಡನು. ಇವರಲ್ಲಿ ಹೆಚ್ಚು ಜನರು ಇಂದಿನವರೆಗೂ ಜೀವಿಸುತ್ತಿದ್ದಾರೆ, ಆದರೆ ಕೆಲವರು ನಿದ್ರೆ ಹೋಗಿದ್ದಾರೆ.


ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದ ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು;


ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು


ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರು ಮತ್ತು ರೋಗಿಗಳು ಆಗುತ್ತಾರೆ ಮತ್ತು ಅನೇಕರು ಸಾಯುತ್ತಾರೆ.


ನಾನು ಸಂಧ್ಯಾ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಸ್ತಬ್ಧನಾಗಿ ಕುಳಿತುಕೊಂಡಿದ್ದೆನು. ಆ ಮೇಲೆ ದೇಹದಂಡನೆಮಾಡುವುದನ್ನು ಬಿಟ್ಟು ಹರಿದ ಬಟ್ಟೆಮೇಲಂಗಿಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ ನನ್ನ ದೇವರಾದ ಯೆಹೋವನ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದ್ದೇನೆಂದರೆ:


ನೋಡಿರಿ! ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಾನು ನಿಮಗೆ ತಿಳಿಸುತ್ತೇನೆ, ನಾವೆಲ್ಲರೂ ಸಾಯುವುದಿಲ್ಲ, ಮಾರ್ಪಡುವೆವು.


ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.


ಇದನ್ನು ಹೇಳಿದ ಮೇಲೆ ಆತನು ಅವರಿಗೆ, “ನಮ್ಮ ಮಿತ್ರನಾದ ಲಾಜರನು ನಿದ್ರೆ ಮಾಡುತ್ತಿದ್ದಾನೆ, ಆದುದರಿಂದ ನಾನು ಹೋಗಿ ಅವನನ್ನು ನಿದ್ರೆಯಿಂದ ಎಬ್ಬಿಸಬೇಕಾಗಿದೆ” ಎಂದು ಹೇಳಿದನು.


ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.


“ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ನಮ್ಮ ಪೂರ್ವಿಕರು ನಿದ್ರೆಹೊಂದಿದ ನಂತರದಿಂದ; ಸಮಸ್ತವೂ ಸೃಷ್ಟಿಯ ಆರಂಭದಲ್ಲಿ ಇದ್ದ ಹಾಗೆಯೇ ಇದೆಯಲ್ಲಾ?” ಎಂದು ಪರಿಹಾಸ್ಯಮಾಡುತ್ತಾ ಕೇಳುವರೆಂಬುದಾಗಿ ನೀವು ಮೊದಲು ತಿಳಿದುಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು