Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಪೂರ್ವಿಕರು ಹೊಟ್ಟೆಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಚರು. ಅಲ್ಲಿ ದೇವರು ಅವನ ಸಂಗಡ ಇದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಈ ಪಿತಾಮಹರು ಜೋಸೆಫನ ಮೇಲೆ ಮತ್ಸರ ತಾಳಿ ಅವನನ್ನು ಈಜಿಪ್ಟಿನವರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಅವನೊಂದಿಗೆ ಇದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಈ ಪಿತೃಗಳು ಯೋಸೇಫನ (ಅವರು ತಮ್ಮ) ಮೇಲೆ ಹೊಟ್ಟೆಕಿಚ್ಚುಪಟ್ಟರು. ಅವರು ಯೋಸೇಫನನ್ನು ಈಜಿಪ್ಟಿನ ಜನರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಯೋಸೇಫನೊಂದಿಗೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಈ ಪಿತೃಗಳು ಯೋಸೇಫನ ಮೇಲೆ ಮತ್ಸರ ತಾಳಿ ಅವನನ್ನು ಈಜಿಪ್ಟಿನವರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಅವನೊಂದಿಗಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಜಾಕೊಬಾಚ್ಯಾ ಲೆಕಾನಿ ಅಪ್ಲೊ ಧಾಕ್ಲೊ ಭಾವ್ ಜುಜೆಕ್ ಕುಸ್ಡೆಪಾನಾನ್ ಇಜಿಪ್ತ್ ದೆಶಾಕ್ ಇಕುನ್ ಸೊಡ್ಲ್ಯಾನಿ, ಖರೆ ಥೈ ದೆವ್ ತೆಚ್ಯಾ ವಾಂಗ್ಡಾ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:9
14 ತಿಳಿವುಗಳ ಹೋಲಿಕೆ  

ಯೆಹೋವನು ಯೋಸೇಫನ ಸಂಗಡ ಇದ್ದುದರಿಂದ ಅವನು ಕೃತಾರ್ಥನಾದನು. ಐಗುಪ್ತನಾದ ತನ್ನ ದಣಿಯ ಮನೆಯೊಳಗೆ ಯೋಸೇಫನು ಸೇವಕನಾದನು.


ಆತನು ಅವರ ಮುಂದಾಗಿ ಒಬ್ಬನನ್ನು ಕಳುಹಿಸಿದನು; ದಾಸತ್ವಕ್ಕೆ ಮಾರಲ್ಪಟ್ಟ ಯೋಸೇಫನೇ ಅವನು.


ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.


ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಯೋಸೇಫನು, “ನನ್ನ ಹತ್ತಿರಕ್ಕೆ ದಯಮಾಡಿ ಬನ್ನಿರಿ” ಎಂದು ಅಣ್ಣಂದಿರಿಗೆ ಹೇಳಲು ಅವರು ಹತ್ತಿರಕ್ಕೆ ಬಂದರು. ಅವನು ಅವರಿಗೆ “ಐಗುಪ್ತ ದೇಶಕ್ಕೆ ಮಾರಿಬಿಟ್ಟ ನಿಮ್ಮ ತಮ್ಮನಾದ ಯೋಸೇಫನು ನಾನೇ.


ಏಕೆಂದರೆ ಅವರು ಹೊಟ್ಟೆಕಿಚ್ಚಿನಿಂದಲೇ ಈ ರೀತಿಯಾಗಿ ಮಾಡಿದ್ದಾರೆಂದು ಅವನಿಗೆ ತಿಳಿದಿತ್ತು.


ಅವನು ಯೋಸೇಫನನ್ನು ತನ್ನ ಮನೆಯ ಮೇಲೆಯೂ, ಆಸ್ತಿಯ ಮೇಲೆಯೂ ಮೇಲ್ವಿಚಾರಕನನ್ನಾಗಿ ಇಟ್ಟಿದ್ದರಿಂದ ಯೆಹೋವನು ಯೋಸೇಫನ ನಿಮಿತ್ತವಾಗಿ ಆ ಐಗುಪ್ತನ ಮನೆಯನ್ನು ಅಭಿವೃದ್ಧಿಗೆ ತಂದನು. ಮನೆಯಲ್ಲಾಗಲಿ, ಹೊಲದಲ್ಲಾಗಲಿ ಅವನಿಗಿದ್ದ ಎಲ್ಲಾದರ ಮೇಲೆ ಯೆಹೋವನ ಆಶೀರ್ವಾದವುಂಟಾಯಿತು.


ಯೆಹೋವನು ಇಂತೆನ್ನುತ್ತಾನೆ, ‘ಜೆರುಬ್ಬಾಬೆಲನೇ ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ’ ಇದು ಯೆಹೋವನ ನುಡಿ; ‘ನಾನು ನಿಮ್ಮೊಂದಿಗೆ ಇದ್ದೇನೆ’ ಎಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.


ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು