Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ, ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸಮಾರಿಯದ ಜನರು ದೇವರ ವಾಕ್ಯವನ್ನು ಸ್ವೀಕರಿಸಿದ ಸಮಾಚಾರ ಪ್ರೇಷಿತರಿಗೆ ಮುಟ್ಟಿತು. ಅವರು ಪೇತ್ರ ಮತ್ತು ಯೊವಾನ್ನರನ್ನು ಅಲ್ಲಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇವಿುನಲ್ಲಿದ್ದ ಅಪೊಸ್ತಲರು ಕೇಳಿ ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅಪೊಸ್ತಲರು ಇನ್ನೂ ಜೆರುಸಲೇಮಿನಲ್ಲಿದ್ದರು. ಸಮಾರ್ಯದ ಜನರು ದೇವರ ವಾಕ್ಯವನ್ನು ಸ್ವೀಕರಿಸಿಕೊಂಡರೆಂಬುದು ಅವರಿಗೆ ತಿಳಿಯಿತು. ಆದ್ದರಿಂದ ಅಪೊಸ್ತಲರು ಪೇತ್ರ ಮತ್ತು ಯೋಹಾನರನ್ನು ಸಮಾರ್ಯದ ಜನರ ಬಳಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದರು ಎಂಬ ಸಮಾಚಾರ ಯೆರೂಸಲೇಮಿನಲ್ಲಿದ್ದ ಅಪೊಸ್ತಲರಿಗೆ ತಲುಪಿದ್ದರಿಂದ, ಅವರ ಬಳಿಗೆ ಪೇತ್ರ ಮತ್ತು ಯೋಹಾನರನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಪೊಸ್ತಲಾ ಅಜುನ್ ಜೆರುಜಲೆಮಾತ್ ರಾತಾನಾ ಸರ್ಮಾಯಾ ಮನ್ತಲ್ಯಾ ಗಾಂವಾತ್ಲ್ಯಾ ಲೊಕಾನಿ ದೆವಾಚಿ ಗೊಸ್ಟಿಯಾ ಸ್ವಿಕಾರ್ ಕರುನ್ ಘೆಟ್ಲ್ಯಾನಿ ಮನ್ತಲೆ ಆಯ್ಕಲ್ಯಾ ತನ್ನಾ ತೆನಿ ಪೆದ್ರುಕ್, ಅನಿ ಜುವಾಂವಾಕ್ ತ್ಯಾ ಲೊಕಾಂಚ್ಯಾ ಜಗ್ಗೊಳ್ ಧಾಡುನ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:14
15 ತಿಳಿವುಗಳ ಹೋಲಿಕೆ  

ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ಉತ್ತೇಜನಪಡಿಸುವುದಕ್ಕೂ ನಮ್ಮ ಸಹೋದರನೂ, ಕ್ರಿಸ್ತನ ಸುವಾರ್ತೆಯ ಕಾರ್ಯದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.


ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.


ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.


ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.


ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.


ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.


ಅವರು ಯೆರೂಸಲೇಮಿಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.


ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬ ಸಮಾಚಾರವನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.


ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು.


ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದ್ದು ಒಂದು ಇದೆ. ಅದು ನಾನು ಆಡುವ ಮಾತೇ, ಕಡೆಯ ದಿನದಲ್ಲಿ ಅದೇ ಅವನಿಗೆ ತೀರ್ಪುಮಾಡುವುದು.


ಯೇಸು ಪೇತ್ರನಿಗೂ ಯೋಹಾನನಿಗೂ, “ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿದನು.


ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುವವನೇ” ಎಂದು ಹೇಳಿದನು.


ಅವನು ಯೆಹೋವನ ಅಪ್ಪಣೆಯಿಂದ ಬೇತೇಲಿನ ಯಜ್ಞವೇದಿಗೆ ವಿರುದ್ಧವಾಗಿಯೂ ಸಮಾರ್ಯದ ಪಟ್ಟಣಗಳಲ್ಲಿರುವ ಎಲ್ಲಾ ಪೂಜಾಸ್ಥಳಗಳ ವಿರುದ್ಧವಾಗಿಯೂ, ಹೇಳಿದ ಮಾತುಗಳು ಸಂದೇಹವಿಲ್ಲದೆ ನೆರವೇರುವವು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು