Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅದಕ್ಕೆ ಸೀಮೋನನು, “ನೀವು ಹೇಳಿರುವ ಸಂಗತಿಗಳಲ್ಲಿ ಯಾವುದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ಕರ್ತನನ್ನು ಬೇಡಿಕೊಳ್ಳಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆಗ ಸಿಮೋನನು, “ನೀವು ಹೇಳಿದ ಯಾವ ಕೇಡೂ ನನಗೆ ತಗಲದಂತೆ ನನಗಾಗಿ ನೀವೇ ಪ್ರಭುವಿನಲ್ಲಿ ಪ್ರಾರ್ಥನೆಮಾಡಿ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅದಕ್ಕೆ ಸೀಮೋನನು - ನೀವು ಹೇಳಿರುವ ಸಂಗತಿಗಳಲ್ಲಿ ಯಾವದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ನೀವೇ ಕರ್ತನನ್ನು ಬೇಡಿಕೊಳ್ಳಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಸಿಮೋನನು, “ನೀವಿಬ್ಬರೂ ನನಗೋಸ್ಕರ ಪ್ರಭುವಿನಲ್ಲಿ ಪ್ರಾರ್ಥಿಸಿ. ನೀವು ಹೇಳಿದ ಸಂಗತಿಗಳು ನನಗಾಗದಂತೆ ಪ್ರಾರ್ಥಿಸಿ!” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಸೀಮೋನನು, “ನೀವು ಹೇಳಿದ ಯಾವುದೂ ನನಗೆ ಸಂಭವಿಸದಂತೆ ನನಗೋಸ್ಕರ ಕರ್ತ ಯೇಸುವಿನಲ್ಲಿ ಪ್ರಾರ್ಥಿಸಿರಿ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತನ್ನಾ ಸಿಮಾವಾನ್ ಮಾಜ್ಯಾ ಸಾಟ್ನಿ ತುಮಿ ದೊಗೆಬಿ ಧನಿಯಾಕ್ಡೆ ತುಮಿ ಸಾಂಗಲ್ಲ್ಯಾ ಸಂಗ್ತಿಯಾತ್ನಿ ಎಕ್ಬಿ ಮಾಕಾ ಹೊವ್ಕ್ ನ್ಹಯ್ ಸಾರ್ಕೆ ಮಾಗ್ನಿ ಕರಾ! ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:24
15 ತಿಳಿವುಗಳ ಹೋಲಿಕೆ  

ಆದುದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಮತ್ತು ಯೆಹೋವನಿಗೂ ವಿರುದ್ಧವಾಗಿ ಮಾತನಾಡಿ ದ್ರೋಹಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕು” ಎಂದು ಬೇಡಿಕೊಂಡರು.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಯೆಹೋವನನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ, ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು, ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು” ಎಂದನು.


ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.


ಈಗ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ. ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು. ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವುದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ” ಎಂದು ಹೇಳಿದನು.


ಅರಸನು ಆ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ಪ್ರಸನನ್ನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು” ಎಂದು ಕೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡಿದ್ದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.


ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.


ನೀವು ಕೇಳಿಕೊಂಡಂತೆ ನಿಮ್ಮ ಕುರಿದನಗಳ ಹಿಂಡುಗಳನ್ನು ತೆಗೆದುಕೊಂಡು ಹೋಗಿರಿ. ಅದಲ್ಲದೆ ನನ್ನನ್ನೂ ಸಹ ಆಶೀರ್ವದಿಸಿರಿ” ಎಂದನು.


ಆದರೂ ಈ ಒಂದೇ ಸಾರಿ ನನ್ನ ಪಾಪಗಳನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಯೆಹೋವನು ಈ ಮರಣಕರವಾದ ವಿಪತ್ತನ್ನು ನನ್ನ ಬಳಿಯಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು” ಎಂದನು.


ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ಅವನಿಗೆ ಒಪ್ಪಿಸಿಬಿಡು. ಅವನು ಪ್ರವಾದಿ, ನಿನಗೋಸ್ಕರ ಅವನು ನನಗೆ ವಿಜ್ಞಾಪಿಸುವನು ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸದಿದ್ದರೆ ನೀನೂ ನಿನ್ನವರೆಲ್ಲರೂ ಮರಣಹೊಂದುವಿರಿ ಇದು ಖಂಡಿತ ಎಂದು ತಿಳಿದುಕೋ” ಎಂದು ಕನಸಿನಲ್ಲಿ ಹೇಳಿದನು.


ಆದುದರಿಂದ ನಾವು ಉಪವಾಸಮಾಡಿ ದೇವರನ್ನು ಪ್ರಾರ್ಥಿಸಲು ಆತನು ನಮಗೆ ಪ್ರಸನ್ನನಾದನು.


ಅವರಾದರೋ ಪರಲೋಕದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯಷ್ಯಕ್ಕಾಗಿ ಪ್ರಾರ್ಥನೆಮಾಡಲಿ.


ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಸೇರಿಕೊಂಡಿತು; ಆದ್ದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ” ಎಂದು ವಿಜ್ಞಾಪಿಸಲು


ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೆಲೆಕನನ್ನೂ, ಅವನ ಪತ್ನಿಯನ್ನೂ ಮತ್ತು ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು.


ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲ, ಯಾಜಕ ಮಾಸೇಯನ ಮಗನಾದ ಚೆಫನ್ಯ ಇವರ ಮೂಲಕ, “ದಯಮಾಡಿ ನಮಗಾಗಿ ನಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸು” ಎಂದು ಪ್ರವಾದಿಯಾದ ಯೆರೆಮೀಯನಿಗೆ ಹೇಳಿಕಳುಹಿಸಿದನು.


ಅವರು ಅವನಿಗೆ, “ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು