Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅದಕ್ಕೆ ಅವನು, “ಯಾರಾದರೂ ನನಗೆ ಅರ್ಥ ತಿಳಿಸಿಕೊಡದ ಹೊರತು ಅದು ನನಗೆ ಹೇಗೆ ತಿಳಿದೀತು?” ಎಂದು ಹೇಳಿ, ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕುಳಿತುಕೋ ಎಂಬುದಾಗಿ ಫಿಲಿಪ್ಪನನ್ನು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆ ಅಧಿಕಾರಿ ಪ್ರತ್ಯುತ್ತರವಾಗಿ, “ಯಾರಾದರೂ ವಿವರಿಸಿದ ಹೊರತು ಇದು ನನಗೆ ಅರ್ಥವಾಗುವುದಾದರೂ ಹೇಗೆ?” ಎಂದನು. ರಥವನ್ನು ಹತ್ತಿ ಕುಳಿತುಕೊಳ್ಳುವಂತೆ ಫಿಲಿಪ್ಪನನ್ನು ಆಹ್ವಾನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅವನು - ಯಾರಾದರೂ ನನಗೆ ಅರ್ಥ ತಿಳಿಸಿಕೊಟ್ಟ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ - ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕೂತುಕೋ ಎಂಬದಾಗಿ ಫಿಲಿಪ್ಪನನ್ನು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆ ಅಧಿಕಾರಿಯು “ನಾನು ಹೇಗೆ ಅರ್ಥಮಾಡಿಕೊಳ್ಳಲಿ? ಬೇರೆ ಯಾರಾದರೂ ನನಗೆ ಅದನ್ನು ವಿವರಿಸಬೇಕು!” ಎಂದು ಉತ್ತರಕೊಟ್ಟನು. ಬಳಿಕ, ರಥವನ್ನು ಹತ್ತಿ ತನ್ನೊಂದಿಗೆ ಕುಳಿತುಕೊಳ್ಳುವಂತೆ ಅವನು ಫಿಲಿಪ್ಪನನ್ನು ಆಹ್ವಾನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವನು, “ಯಾರಾದರೊಬ್ಬರು ಅದನ್ನು ವಿವರಿಸದಿದ್ದರೆ ನನಗೆ ಅರ್ಥವಾಗುವುದು ಹೇಗೆ?” ಎಂದು ಹೇಳಿ, ರಥವನ್ನು ಹತ್ತಿ ತನ್ನೊಂದಿಗೆ ಕುಳಿತುಕೊಳ್ಳುವಂತೆ ಫಿಲಿಪ್ಪನನ್ನು ಆಮಂತ್ರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತನ್ನಾ ತ್ಯಾ ಅಧಿಕಾರಿನ್ ಮಿಯಾ ಕಶೆ ಅರ್ಥ್ ಕರುನ್ ಘೆವ್ಕ್ ಹೊತಾ? ಕೊನ್ ತರಿಬಿ ದುಸ್ರ್ಯಾನಿ ಹೆ ಮಾಕಾ ಕಳ್ವುಚೆ! ಮನುನ್ ಜವಾಬ್ ದಿಲ್ಯಾನ್, ಅನಿ ಅಪ್ನಾಚ್ಯಾ ವಾಂಗ್ಡಾ ರಥಾತ್ ಚಡುನ್ ಬಸ್ ಮನುನ್ ಫಿಲಿಪಾಕ್ ಬಲ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:31
20 ತಿಳಿವುಗಳ ಹೋಲಿಕೆ  

ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ?


ಒಬ್ಬನು ತಾನು ಏನಾದರೂ ತಿಳಿದುಕೊಂಡಿದ್ದೇನೆಂದು ಭಾವಿಸುವುದಾದರೆ ಅವನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳಿದುಕೊಂಡಿರುವುದಿಲ್ಲ.


ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ.


ಐಶ್ವರ್ಯವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಏಕೆಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.


ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ”


ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಎಂದು ಹೇಳಿದನು.


ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.


ನಾನು ವಿವೇಕಹೀನ ತಿಳಿವಳಿಕೆ ಇಲ್ಲದವನಂತೆ, ನಿನ್ನ ದೃಷ್ಟಿಯಲ್ಲಿ ಕೇವಲ ಪಶುವೇ ಆಗಿದ್ದೆನು.


ಆಗ ಎಲೀಷನು ಗೇಹಜಿಗೆ, “ಒಬ್ಬನು ರಥದಿಂದ ಇಳಿದು ಬಂದು, ನಿನ್ನನ್ನು ಎದುರುಗೊಂಡದ್ದು ನನ್ನ ಜ್ಞಾನದೃಷ್ಟಿಗೆ ಕಾಣಲಿಲ್ಲವೆಂದು ತಿಳಿದಿರುವೆಯಾ? ದ್ರವ್ಯ, ಬಟ್ಟೆಗಳು, ಎಣ್ಣೇ ಮರದ ತೋಪುಗಳು, ದ್ರಾಕ್ಷಿತೋಟಗಳು, ಕುರಿದನಗಳು, ದಾಸದಾಸಿಯರು, ಜನರೂ ಇವುಗಳನ್ನು ಸಂಪಾದಿಸುವುದಕ್ಕೆ ಇದು ಸಮಯವೋ?


ನಾಮಾನನು ರಥಾಶ್ವಗಳೊಡನೆ ಎಲೀಷನ ಮನೆಗೆ ಹೋಗಿ ಬಾಗಿಲಿನ ಮುಂದೆ ನಿಂತನು.


ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಪ್ರವಾದಿಯಾದ ಯೆಶಾಯನ ಗ್ರಂಥವನ್ನು ಓದುತ್ತಿರುವುದನ್ನು ಕೇಳಿ, “ಎಲೈ, ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು.


ಅವನು ಓದುತ್ತಿದ್ದ ಶಾಸ್ತ್ರವಚನವು ಯಾವುದೆಂದರೆ, “ವಧಿಸುವಸ್ಥಾನಕ್ಕೆ ಒಯ್ಯಲ್ಪಡುವ ಕುರಿಮರಿಯಂತೆ ಆತನು ಒಯ್ಯಲ್ಪಟ್ಟನು; ಮತ್ತು ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ ಆತನು ಬಾಯಿ ತೆರೆಯದೆ ಮೌನವಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು