Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅನೇಕರನ್ನು ಹಿಡಿದಿದ್ದ ದೆವ್ವಗಳು ಅಬ್ಬರಿಸುತ್ತಾ ಅವರನ್ನು ಬಿಟ್ಟಗಲಿದವು; ಪಾರ್ಶ್ವವಾಯು ಪೀಡಿತರೂ ಕುಂಟರೂ ಸ್ವಸ್ಥರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾಕಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ಕುಂಟರೂ ಸ್ವಸ್ಥಮಾಡಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈ ಜನರಲ್ಲಿ ಅನೇಕರು ದೆವ್ವಗಳಿಂದ ಪೀಡಿತರಾಗಿದ್ದರು. ಫಿಲಿಪ್ಪನು ಆ ದೆವ್ವಗಳನ್ನು ಅವರೊಳಗಿಂದ ಹೊರಡಿಸಿದಾಗ ಅವು ಅಬ್ಬರಿಸುತ್ತಾ ಹೊರಬಂದವು. ಅಲ್ಲಿದ್ದ ಅನೇಕ ಬಲಹೀನರನ್ನು, ಕುಂಟರನ್ನು ಸಹ ಫಿಲಿಪ್ಪನು ಗುಣಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅನೇಕರಿಂದ ಅಶುದ್ಧಾತ್ಮಗಳು ಆರ್ಭಟಿಸುತ್ತಾ ಹೊರಗೋಡಿದವು. ಮಾತ್ರವಲ್ಲದೇ ಅನೇಕ ಪಾರ್ಶ್ವವಾಯು ಪೀಡಿತರು, ಅಂಗವಿಕಲರು ಸ್ವಸ್ಥರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಥೈತ್ಲ್ಯಾ ಲೈ ಲೊಕಾಕ್ನಿ ಧರಲೊ ಮಾರು ತೆಂಕಾ ಸೊಡುನ್ ಜಾತಾನಾ ಮೊಟ್ಯಾನ್ ಅವಾಜ್ ಕರುಂಗೆತ್ ಗೆಲೊ ಅನಿ ಲೈ ಸೊಟ್ಯಾಕ್ನಿ ಅನಿ ವಾರೆ ಮಾರಲ್ಯಾಕ್ನಿ ಗುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:7
16 ತಿಳಿವುಗಳ ಹೋಲಿಕೆ  

ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.


ಯೆರೂಸಲೇಮಿನ ಸುತ್ತಮುತ್ತಲಿನ ಊರುಗಳ ಜನರು ಸಹ ರೋಗಿಗಳನ್ನೂ, ದೆವ್ವ ಪೀಡಿತರನ್ನು ಹೊತ್ತುಕೊಂಡು ಗುಂಪುಗುಂಪಾಗಿ ಬರುತ್ತಿದ್ದರು; ಅವರೆಲ್ಲರೂ ಗುಣಮುಖರಾಗುತ್ತಿದ್ದರು.


ಸೂಚಕ ಕಾರ್ಯಗಳಿಂದಲೂ, ಅದ್ಭುತಕಾರ್ಯಗಳಿಂದಲೂ, ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ಮತ್ತು ತನ್ನಿಚ್ಛೆಯಂತೆ ಪವಿತ್ರಾತ್ಮವರಗಳನ್ನು ನೀಡುವುದರ ಮೂಲಕವೂ ದೇವರು ತಾನೇ ಅದನ್ನು ಸಾಕ್ಷಿಕರಿಸಿದನು.


“ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ; ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.


ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು, “ಕರ್ತನೇ, ದೆವ್ವಗಳು ಕೂಡಾ ನಿನ್ನ ಹೆಸರಿನಲ್ಲಿ ನಮಗೆ ಅಧೀನವಾಗುತ್ತವೆ” ಅಂದರು.


ಆಗ ಅದು ಅಬ್ಬರಿಸಿ ಹುಡುಗನನ್ನು ಒದ್ದಾಡಿಸಿ ಬಿಟ್ಟುಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು, “ಸತ್ತುಹೋದನು” ಎಂದು ಅಂದುಕೊಂಡರು.


ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.


ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವುದು, ಅರಣ್ಯದಲ್ಲಿ ಒರತೆಗಳು ಒಡೆಯುವವು, ಮರುಭೂಮಿಯಲ್ಲಿ ನದಿಗಳು ಹುಟ್ಟಿ ಹರಿಯುವವು.


ಗುಂಪಾಗಿ ಕೂಡಿದ ಜನಗಳು ಫಿಲಿಪ್ಪನ ಮಾತುಗಳನ್ನು ಕೇಳಿ ಅವನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅವನು ಹೇಳಿದ ಸಂಗತಿಗಳಿಗೆ ಒಮ್ಮನಸ್ಸಿನಿಂದ ಗಮನಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು