Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಈ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ, ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇಮಿಗೆ ತರುವಂತೆ, ದಮಸ್ಕದಲ್ಲಿರುವ ಸಭಾಮಂದಿರದವರಿಗೆ ನೀನು, ಪತ್ರವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಈ ಹೊಸ ಮಾರ್ಗವನ್ನು ಅವಲಂಬಿಸುವವರು ಹೆಂಗಸರೇ ಆಗಿರಲಿ, ಗಂಡಸರೇ ಆಗಿರಲಿ, ದಮಸ್ಕಸಿನಲ್ಲಿದ್ದರೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದು ತರಬೇಕೆಂದಿದ್ದನು. ಇದಕ್ಕೆ ಬೇಕಾದ ಪತ್ರಗಳನ್ನು ಕೇಳುವುದಕ್ಕಾಗಿ ಪ್ರಧಾನಯಾಜಕನ ಬಳಿಗೆ ಹೋದನು. ದಮಸ್ಕಸಿನಲ್ಲಿರುವ ಪ್ರಾರ್ಥನಾಮಂದಿರದ ಅಧಿಕಾರಿಗಳಿಗೆ ತೋರಿಸಲು ಆ ಪತ್ರಗಳನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇವಿುಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರದವರಿಗೆ ನೀನು ಕಾಗದವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದಮಸ್ಕದಲ್ಲಿ ಕ್ರಿಸ್ತನ ಮಾರ್ಗವನ್ನು ಅನುಸರಿಸುವವರನ್ನು ಕಂಡುಹಿಡಿದು, ಸ್ತ್ರೀಯರು, ಪುರುಷರು ಎನ್ನದೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದುಕೊಂಡು ಬರಲು ತನಗೆ ಅಧಿಕಾರ ಕೊಟ್ಟಿರುವುದಾಗಿ ದಮಸ್ಕ ಪಟ್ಟಣದ ಸಭಾಮಂದಿರಗಳಿಗೆ ಪತ್ರಬರೆಯಬೇಕೆಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಈ ಮಾರ್ಗಕ್ಕೆ ಸಂಬಂಧಪಟ್ಟ ಪುರುಷರಾಗಲಿ ಸ್ತ್ರೀಯರಾಗಲಿ ದಮಸ್ಕದಲ್ಲಿದ್ದರೆ ಅವರನ್ನು ತಾನು ಬಂಧಿಸಿ ಯೆರೂಸಲೇಮಿಗೆ ತರಲಿಕ್ಕಾಗುವಂತೆ ದಮಸ್ಕದಲ್ಲಿಯ ಸಭಾಮಂದಿರಗಳಿಗೆ ಕೊಡಲು ಮಹಾಯಾಜಕನಿಂದ ಪತ್ರ ಪಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ದಮಸ್ಕಾ ಮನ್ತಲ್ಯಾ ಶಾರಾತ್ ಕ್ರಿಸ್ತಾಚ್ಯಾ ವಾಟೆನ್ ಚಲ್ತಲ್ಯಾ ಲೊಕಾಕ್ನಿ ವಳ್ಕುನ್ ಬಾಯ್ಕಾಮಾನ್ಸಾ, ಘವ್ಮಾನ್ಸಾ ಮನುನ್ ಬಗಿನಸ್ತಾನಾ ಧರುನ್ ತೆಂಕಾ ಬಾಂದುನ್ ಜೆರುಜಲೆಮಾಕ್ ತೆಂಕಾ ಭಂದಿ ಕರುನ್ ಹಾನುಕ್ ಅಪ್ನಾಕ್ ಅಧಿಕಾರ್ ದಿಲ್ಲೊ ಹಾಯ್, ಮನುನ್ ಧಮಸ್ಕ್ ಶಾರಾತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಚಿಟ್ ಲಿವ್ಚೆ ಮನುನ್ ಮಾಗುನ್ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:2
23 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಈ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.


ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನ ಎಂಬುವನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.


ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ, ಅದೇನೆಂದರೆ; ಇವರು ನನ್ನನ್ನು ಧರ್ಮವಿರೋಧಿ ಎಂದೂ ಹೇಳುವ, ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪೂರ್ವಿಕರ ದೇವರನ್ನು ಆರಾಧಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.


ಫೇಲಿಕ್ಸನು ಈ ಮಾರ್ಗವನ್ನು, ತಕ್ಕ ಮಟ್ಟಿಗೆ ತಿಳಿದವನಾಗಿದ್ದರೂ ಅವರಿಗೆ; “ಸಹಸ್ರಾಧಿಪತಿಯಾದ ಲೂಸ್ಯನು ಬಂದ ಮೇಲೆ ನಿನ್ನ ಪ್ರಕರಣವನ್ನು ತೀರ್ಮಾನಿಸುತ್ತೇನೆಂದು” ಹೇಳಿ, ವಿಚಾರಣೆಯನ್ನು ತಡೆಮಾಡಿದನು.


ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದರೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು.


ಮತ್ತು ಇಲ್ಲಿಯೂ ನಿನ್ನ ಹೆಸರನ್ನು ಸ್ಮರಿಸುವವರೆಲ್ಲರಿಗೆ ಬೇಡಿಹಾಕಿಸುವ ಅಧಿಕಾರವನ್ನು ಮುಖ್ಯಯಾಜಕರಿಂದ ಹೊಂದಿದ್ದಾನೆ” ಅಂದನು.


ಈ ಉದ್ದೇಶದಿಂದ ನಾನು ಮುಖ್ಯಯಾಜಕರಿಂದ ಅಧಿಕಾರವನ್ನೂ, ಆದೇಶವನ್ನೂ ಹೊಂದಿ ದಮಸ್ಕಕ್ಕೆ ಹೋಗುವ ದಾರಿಯಲ್ಲಿ ರಾಜನೇ,


ಈ ಅರಸನು ನಮ್ಮ ಪೂರ್ವಿಕರ ವಿರುದ್ಧವಾಗಿ ಕುಯುಕ್ತಿಯನ್ನು ಯೋಚಿಸಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ, ನಮ್ಮ ಪೂರ್ವಿಕರನ್ನು ಕ್ರೂರವಾಗಿ ಹಿಂಸಿಸಿಸನು.


ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು.


ಅವನು ರಾತ್ರಿ ವೇಳೆಯಲ್ಲಿ ತನ್ನ ದಂಡನ್ನು ಎರಡು ಭಾಗಮಾಡಿ ತನ್ನ ಭಟರೊಡನೆ ಅವರ ಮೇಲೆ ಬಿದ್ದು, ಹೊಡೆದು, ದಮಸ್ಕ ಪಟ್ಟಣದ ಉತ್ತರಕಡೆಯಲ್ಲಿರುವ ಹೋಬಾ ಊರಿನ ತನಕ ಅವರನ್ನು ಹಿಂದಟ್ಟಿದ್ದನು.


ದಮಸ್ಕದ ವಿಷಯವಾದ ದೈವೋಕ್ತಿ. “ಆಹಾ, ದಮಸ್ಕವು ಇನ್ನು ಪಟ್ಟಣವಾಗಿರದೇ ಹಾಳು ದಿಬ್ಬವಾಗಿರುವುದು.


ದಮಸ್ಕವನ್ನು ಕುರಿತದ್ದು, “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು.


ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು.


ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.


ಕೇಳಿದವರೆಲ್ಲರು ಬೆರಗಾಗಿ; “ಯೇಸುಕ್ರಿಸ್ತನ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ನಾಶಮಾಡುತ್ತಿದ್ದವನು ಇವನಲ್ಲವೇ. ಅಂಥವರನ್ನು ಬೇಡಿಹಾಕಿಸಿ ಮುಖ್ಯಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂದು ಇಲ್ಲಿಗೆ ಬಂದಿರುವನಲ್ಲವೇ” ಎಂದು ಮಾತನಾಡಿಕೊಂಡರು.


ಯೆರೂಸಲೇಮಿನಲ್ಲಿ ಹಾಗೆಯೇ ಮಾಡಿದ್ದೆನು. ಮುಖ್ಯಯಾಜಕರಿಂದ, ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇರಿಸಿ, ಅವರಿಗೆ ಮರಣದ ತೀರ್ಪಾದಾಗ, ನಾನು ಅದಕ್ಕೆ ಸಮ್ಮತಿಯನ್ನು ಸೂಚಿಸಿದೆನು.


ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಕಾಯುತ್ತಿರಲು


ಯೆರೂಸಲೇಮಿಗೆ ನನಗಿಂತ ಮೊದಲು ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರುಗಿ ದಮಸ್ಕಕ್ಕೆ ಬಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು