Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು ಕೂಡಲೇ, ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವುದಕ್ಕೆ ಪ್ರಾರಂಭಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅನಂತರ ಸೌಲನು ತಡಮಾಡದೆ ಯೆಹೂದ್ಯರ ಪ್ರಾರ್ಥನಾಮಂದಿರಗಳಿಗೆ ಹೋಗಿ ಯೇಸುವೇ ‘ದೇವರ ಪುತ್ರ’ ಎಂದು ಬೋಧಿಸಲು ಆರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮುಂದೆ ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದು ತಡಮಾಡದೆ ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವದಕ್ಕೆ ಪ್ರಾರಂಭಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅವನು ತಡಮಾಡದೆ ಸಭಾಮಂದಿರಗಳಿಗೆ ಹೋಗಿ “ಯೇಸುವೇ ದೇವಕುಮಾರ”ನೆಂದು ಬೋಧಿಸತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ತಡಮಾಡದೆ, ಯೇಸುವೇ “ದೇವಪುತ್ರ” ಎಂದು ಸಭಾಮಂದಿರಗಳಲ್ಲಿ ಸಾರಲು ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಸಾವ್ಲಾ ಯೆಳ್ ಕರಿನಸ್ತಾನಾ ಸಿನಾಗೊ ಜಾವ್ನ್ “ಜೆಜುಚ್ ದೆವಾಚೊ ಲೆಕ್” ಮನುನ್ ಶಿಕಾಪ್ ಕರುಲಾಗಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:20
32 ತಿಳಿವುಗಳ ಹೋಲಿಕೆ  

ತೋಮನು ಆತನಿಗೆ, “ನನ್ನ ಕರ್ತನೇ, ನನ್ನ ದೇವರೇ” ಎಂದು ಹೇಳಿದನು.


ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.


ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.


ಅವನು ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’” ಎಂದು ಅಣಕಿಸಿ ಮಾತನಾಡುತ್ತಿದ್ದರು.


ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು,


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.


ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.


“ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ, ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವುದೇನಂದರೆ,


ದೇವರು ಮುಂಚಿತವಾಗಿ ಪವಿತ್ರ ಗ್ರಂಥಗಳಲ್ಲಿ ತನ್ನ ಪ್ರವಾದಿಗಳ ಮೂಲಕ ತಿಳಿಸಲ್ಪಟ್ಟ ವಾಗ್ದಾನ ಮಾಡಿದ ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ಕುರಿತಾದದ್ದು.


ಆ ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.


ಸಲಮೀಸ್ ಎಂಬ ಸ್ಥಳಕ್ಕೆ ಸೇರಿ ಅಲ್ಲಿ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಬೋಧಿಸಿದರು. ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯಕನಾಗಿ ಅವರ ಸಂಗಡ ಇದ್ದನು.


ಆದರೆ ಸೌಲನು ಇನ್ನೂ ಅಧಿಕ ಬಲವುಳ್ಳವನಾಗಿ, ಯೇಸುವೇ ಕ್ರಿಸ್ತನೆಂದು ರುಜುವಾತುಪಡಿಸುತ್ತಾ ದಮಸ್ಕದಲ್ಲಿದ್ದ ಯೆಹೂದ್ಯರನ್ನು ಉತ್ತರವಿಲ್ಲದವರ ಹಾಗೆ ಮಾಡಿದನು.


ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು.


ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.


ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು.


ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.


‘ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ’ ಎಂದು ಎರಡನೆಯ ಕೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು.


ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.


ಇಕೋನ್ಯದಲ್ಲಿ ಪೌಲ ಮತ್ತು ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಪ್ರೇರಣಾತ್ಮಕವಾದ ಬೋಧನೆ ನೀಡಿ ಮಾತನಾಡಿದ್ದರಿಂದ ಯೆಹೂದ್ಯರಲ್ಲಿಯೂ, ಗ್ರೀಕರಲ್ಲಿಯೂ ಬಹುಮಂದಿ ಕರ್ತನಾದ ಯೇಸುಕ್ರಿಸ್ತನನ್ನು ನಂಬುವವರಾದರು.


ನದೀತೀರದಲ್ಲಿ ದೇವರ ಪ್ರಾರ್ಥನೆ ನಡೆಯುವ ಸ್ಥಳ ಇರುವುದೆಂದು ತಿಳಿದು ಸಬ್ಬತ್ ದಿನದಲ್ಲಿ ಊರ ಬಾಗಿಲಿನ ಹೊರಗೆ ಹೋಗಿ ಅಲ್ಲಿ ಕೂಡಿಬಂದಿದ್ದ ಸ್ತ್ರೀಯರ ಸಂಗಡ ಕುಳಿತುಕೊಂಡು ಮಾತನಾಡಿದೆವು.


ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ದೇವರ ವಾಕ್ಯದಿಂದ ಅವರ ಸಂಗಡ ವಾದಿಸಿ,


ಆ ಸಹೋದರರು ರಾತ್ರಿಯಲ್ಲಿ ಪೌಲ ಮತ್ತು ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.


ಆದುದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಮತ್ತು ಯೆಹೂದ್ಯ ಮತಾವಲಂಬಿಗಳೊಂದಿಗೆ ಮತ್ತು ಪ್ರತಿದಿನ ಪೇಟೆಯಲ್ಲಿ ಕಂಡುಬಂದವರ ಸಂಗಡಲೂ ಚರ್ಚಿಸಿದನು.


ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.


ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.


ಆ ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ, ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು, ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.


ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ,


ಕಂಚುಕಿಯು, “ಆಗೋ, ನೀರು; ನನಗೆ ದೀಕ್ಷಾಸ್ನಾನವಾಗುವುದಕ್ಕೆ ಅಡ್ಡಿ ಏನು?” ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆ ಕೊಟ್ಟನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು