Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 1:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇವರು ಸರ್ವಸಮೂಹದೊಳಗಿಂದ ಆಯ್ದುಕೊಂಡು ನೇಮಕವಾದವರು. ಇವರು ತಮ್ಮ ಕುಲಗಳಲ್ಲಿ ಪ್ರಧಾನಪುರುಷರು ಹಾಗೂ ಇಸ್ರಾಯೇಲಿನ ಕುಲಗಳ ಪ್ರಮುಖರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇವರು ಸಮಾಜದಲ್ಲಿ ಹೆಸರು ಪಡೆದವರು. ತಮ್ಮ ತಮ್ಮ ಕುಲಗಳಲ್ಲಿ ಪ್ರಧಾನ ಪುರುಷರು, ಇಸ್ರಯೇಲರಲ್ಲಿ ಸಹಸ್ರಾಧಿಪತಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇವರು ಸರ್ವಸಮೂಹದವರೊಳಗಿಂದ ಕರಸಿಕೊಂಡವರು, ತಮ್ಮ ತಮ್ಮ ಕುಲಗಳಲ್ಲಿ ಪ್ರಧಾನಪುರುಷರು, ಇಸ್ರಾಯೇಲ್ಯರಲ್ಲಿ ಸಹಸ್ರಾಧಿಪತಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಸರ್ವಸಮೂಹದವರೊಳಗಿಂದ ಆರಿಸಲ್ಪಟ್ಟಿದ್ದ ಇವರು ತಮ್ಮ ಪೂರ್ವಿಕರ ಕುಲಗಳಿಗೆ ನಾಯಕರು ಮತ್ತು ಇಸ್ರೇಲರಿಗೆ ಸಹಸ್ರಾಧಿಪತಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇವರು ಸರ್ವಸಮೂಹದೊಳಗಿಂದ ಆಯ್ದುಕೊಂಡು ನೇಮಕವಾದವರು. ಇವರು ತಮ್ಮ ಪುರಾತನ ಗೋತ್ರಗಳ ನಾಯಕರು. ಇವರು ಇಸ್ರಾಯೇಲಿನ ಗೋತ್ರಗಳ ಪ್ರಮುಖರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 1:16
20 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಇಸ್ರಾಯೇಲರ ಪ್ರಧಾನ ಪುರುಷರು ಅಂದರೆ ಗೋತ್ರದ ಪ್ರಮುಖರು, ಕುಲಾಧಿಪತಿಗಳು, ಜನಗಣತಿಯ ನೇತೃತ್ವವನ್ನು ವಹಿಸಿಕೊಂಡಿದ್ದವರು ಕಾಣಿಕೆಗಳನ್ನು ತಂದು ಸಮರ್ಪಿಸಿದರು.


ಮೋಶೆಯು ಇಸ್ರಾಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.


ಆದರೆ ನೀನು ಸಮಸ್ತ ಜನರೊಳಗೆ ಸಮರ್ಥರೂ, ಭಕ್ತರೂ, ನಂಬಿಗಸ್ತರೂ, ಲಂಚಮುಟ್ಟದವರೂ ಆಗಿರುವ ಪುರುಷರನ್ನು ಆರಿಸಿಕೊಂಡು ಅವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.


ಎಲೀಯಾಬನ ಮಕ್ಕಳು: ನೆಮೂವೇಲ್, ದಾತಾನ್, ಅಬೀರಾಮ್ ಎಂಬುವವರೇ. ಕೋರಹನ ಗುಂಪಿನವರು ಯೆಹೋವನಿಗೆ ವಿರುದ್ಧವಾಗಿ ವಿವಾದಿಸಿದ ಕಾಲದಲ್ಲಿ ಅವರೊಳಗೆ ಸೇರಿಕೊಂಡು ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ವಿವಾದಿಸಿದ ಆಲೋಚನಾಕರ್ತರಾದ ದಾತಾನ್ ಮತ್ತು ಅಬೀರಾಮರು ಇವರೇ.


ಇಸ್ರಾಯೇಲರ ಸಮೂಹದವರಲ್ಲಿದ್ದ ಮುಖ್ಯಸ್ಥರೂ, ಪ್ರಸಿದ್ಧರಾಗಿ ಹೆಸರು ಹೊಂದಿದ ಇನ್ನೂರೈವತ್ತು ಜನರು ಮೋಶೆಗೆ ವಿರುದ್ಧವಾಗಿ ಪ್ರತಿಭಟಿಸಿ ತಿರುಗಿಬಿದ್ದರು.


ಈ ಕೆಲಸಕ್ಕಾಗಿ ಕುಲದಲ್ಲಿ ಆಯಾ ಕುಲದ ಒಂದೊಂದು ಮುಖ್ಯಸ್ಥನಾಗಿರುವ ಒಬ್ಬೊಬ್ಬ ಸಹಾಯಕನಿರಬೇಕು ಹಾಗೂ ತನ್ನ ಕುಲಕ್ಕಾಗಿ ಹೋರಾಡುವ ಜನರನ್ನು ಮುಖ್ಯಸ್ಥನು ಮುನ್ನಡೆಸಬೇಕು.


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.


ಆದುದರಿಂದ ಅವನು ಅಡಗಿಕೊಳ್ಳತಕ್ಕ ಎಲ್ಲಾ ಗುಪ್ತಸ್ಥಳಗಳನ್ನು ಗೊತ್ತುಮಾಡಿಕೊಂಡು ಸರಿಯಾದ ವರ್ತಮಾನವನ್ನು ನನಗೆ ತಲುಪಿಸಿರಿ. ನಾನು ನಿಮ್ಮ ಸಂಗಡ ಬರುವೆನು. ಅವನು ದೇಶದಲ್ಲಿರುವುದಾದರೆ ಎಲ್ಲಾ ಯೆಹೂದ ಪ್ರಜೆಗಳ ಮಧ್ಯದಲ್ಲಾಗಲಿ ಹುಡುಕಿ ಅವನನ್ನು ಕಂಡುಹಿಡಿಯುವೆನು” ಅಂದನು.


ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ, “ಬೆನ್ಯಾಮೀನನ ಮಕ್ಕಳೇ ಕೇಳಿರಿ. ನೀವೆಲ್ಲರೂ ನನಗೆ ಒಳಸಂಚು ಮಾಡುವುದೇಕೆ? ಇಷಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಡುವನೋ? ಎಲ್ಲರನ್ನು ಸಹಸ್ರಾಧಿಪತಿಗಳನ್ನಾಗಲಿ, ಶತಾಧಿಪತಿಗಳನ್ನಾಗಲಿ ಮಾಡುವನೋ?


ಆಗ ಗಿದ್ಯೋನನು ಆತನಿಗೆ, “ಕರ್ತನೇ, ನಾನು ಇಸ್ರಾಯೇಲ್ಯರನ್ನು ರಕ್ಷಿಸುವುದು ಹೇಗೆ? ಮನಸ್ಸೆ ಕುಲದಲ್ಲಿ ನನ್ನ ಮನೆಯು ಕನಿಷ್ಠವಾದದ್ದು; ಮತ್ತು ನಾನು ನಮ್ಮ ಕುಟುಂಬದಲ್ಲಿ ಅಲ್ಪನು” ಅಂದನು.


ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ, ಬುದ್ಧಿವಂತರನ್ನು ಆರಿಸಿಕೊಂಡು ಒಂದೊಂದು ಕುಲದಲ್ಲಿ ಸಾವಿರ ಜನರಿಗೆ ಒಬ್ಬರಂತೆ, ನೂರು ಜನರಿಗೆ ಒಬ್ಬರಂತೆ, ಐವತ್ತು ಜನರಿಗೆ ಒಬ್ಬರಂತೆ ಮತ್ತು ಹತ್ತು ಜನರಿಗೆ ಒಬ್ಬರಂತೆ ಅಧಿಕಾರಿಗಳನ್ನಾಗಿಯೂ ಮತ್ತು ಉಪ ಅಧಿಕಾರಿಗಳನ್ನಾಗಿಯೂ ನೇಮಿಸಿದೆನು.


ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.”


ನಫ್ತಾಲಿ ಕುಲದಿಂದ ಏನಾನನ ಮಗನಾದ ಅಹೀರ.”


ಹೆಸರಿನಿಂದ ಸೂಚಿತರಾದ ಈ ಪುರುಷರನ್ನು ಮೋಶೆಯು ಮತ್ತು ಆರೋನನು ಆರಿಸಿಕೊಂಡರು.


ನೀನು ಒಂದನ್ನು ಮಾತ್ರ ಊದಿಸುವಾಗ ಇಸ್ರಾಯೇಲರ ಕುಲಾಧಿಪತಿಗಳಾದ ಪ್ರಧಾನರು ನಿನ್ನ ಬಳಿಗೆ ಕೂಡಿಬರಬೇಕು.


ಮೋಶೆಯು ಇಸ್ರಾಯೇಲರ ಕುಲಾಧಿಪತಿಗಳಿಗೆ ಹೇಳಿದ್ದೇನೆಂದರೆ, “ಯೆಹೋವನು ಹೀಗೆ ಆಜ್ಞಾಪಿಸಿದ್ದಾನೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು