Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 1:50 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವುದಕ್ಕಾಗಿ ಲೇವಿಯರನ್ನು ನೇಮಿಸಬೇಕು. ಅವರು ಆ ಗುಡಾರವನ್ನೂ ಮತ್ತು ಅದರ ಸಾಮಾನುಗಳನ್ನೂ ಹೊರುವುದಕ್ಕಾಗಿ ಇರಬೇಕು. ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಆಜ್ಞಾಶಾಸನಗಳಿರುವ ಗುಡಾರವನ್ನು ಹಾಗು ಅವರ ಸಾಮಾನು ಸರಂಜಾಮುಗಳನ್ನು ನೋಡಿಕೊಳ್ಳುವುದಕ್ಕೆ ಅವರನ್ನು ನೇಮಿಸಬೇಕು. ಅವರು ಆ ಗುಡಾರವನ್ನು ಅದರ ಉಪಕರಣಗಳನ್ನು ಹೊರುವವರಾಗಿರಬೇಕು. ಅದರ ಸೇವೆ ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವದಕ್ಕೆ ಅವರನ್ನು ನೇವಿುಸಬೇಕು. ಅವರು ಆ ಗುಡಾರವನ್ನೂ ಅದರ ಸಾಮಾನನ್ನೂ ಹೊರುವದಕ್ಕಾಗಿ ಇರಬೇಕು. ಮತ್ತು ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಒಡಂಬಡಿಕೆಯ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಜವಾಬ್ದಾರಿಯು ಲೇವಿಯರಿಗೆ ಸೇರಿರುವುದರಿಂದ ಅವರಿಗೆ ಅದನ್ನು ತಿಳಿಸು. ಅವರು ಅದನ್ನೂ ಅದರ ಉಪಕರಣಗಳನ್ನೂ ಮತ್ತು ಅದಕ್ಕೆ ಸಂಬಂಧಿಸಿದ ಪ್ರತಿಯೊಂದನ್ನೂ ನೋಡಿಕೊಳ್ಳಬೇಕು. ಅವರು ಪವಿತ್ರ ಗುಡಾರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಹೊತ್ತುಕೊಂಡು ಹೋಗಬೇಕು. ಅವರು ಅದರ ಸುತ್ತಲೂ ಪಾಳೆಯಮಾಡಿಕೊಂಡು ಅದನ್ನು ನೋಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಆದರೆ ನೀನು ಸಾಕ್ಷಿಯ ಗುಡಾರವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಅದಕ್ಕೆ ಬೇಕಾದ ಎಲ್ಲವನ್ನೂ ನೋಡಿಕೊಳ್ಳಲು ಲೇವಿಯರನ್ನು ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಹೊತ್ತುಕೊಳ್ಳುವರು. ಅದರ ಸೇವೆಮಾಡಿ, ಗುಡಾರದ ಸುತ್ತುಮುತ್ತಲೂ ಇಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 1:50
30 ತಿಳಿವುಗಳ ಹೋಲಿಕೆ  

ದೇವದರ್ಶನದ ಗುಡಾರವನ್ನು ಅಂದರೆ ಒಡಂಬಡಿಕೆಯ ನಿಯಮದ ಗುಡಾರವನ್ನು ಮಾಡುವುದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕಾಚಾರ: ಮೋಶೆಯ ಅಪ್ಪಣೆಯ ಪ್ರಕಾರ ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಲೇವಿಯರ ಕೈಯಿಂದ ಲೆಕ್ಕಮಾಡಿಸಿದ ದೇವದರ್ಶನದ ಗುಡಾರದ ಖರ್ಚು ವೆಚ್ಚಗಳು.


ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.


ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡುವುದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಬರೆಯಲ್ಪಟ್ಟ ಶಿಲಾಶಾಸನಗಳಾಗಿವೆ.


ಆ ಮೇಲೆ ನಾನು ಲೇವಿಯರಿಗೆ, “ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ಬಂದು ಬಾಗಿಲುಗಳನ್ನು ಕಾಯಬೇಕು” ಎಂದು ಆಜ್ಞಾಪಿಸಿದೆನು. ನನ್ನ ದೇವರೇ, ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು, ನಿನ್ನ ಮಹಾಕೃಪೆಗೆ ಅನುಸಾರವಾಗಿ ನನ್ನನ್ನು ಕನಿಕರಿಸು.


ಆಗ ಮೋಶೆ ತನ್ನ ಕೈಯನ್ನು ಮೇಲಕ್ಕೆ ಎತ್ತಿ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ನೀರು ಪ್ರವಾಹವಾಗಿ ಹೊರಟಿತು. ಸಮೂಹದವರೂ ಮತ್ತು ಅವರ ಪಶುಗಳೂ ನೀರು ಕುಡಿದರು.


ಕುಲಗಳು ಅಂದರೆ ಯೆಹೋವನ ಕುಲದವರು, ಯೆಹೋವನ ನಾಮದ ಕೀರ್ತನೆಗೋಸ್ಕರ, ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು. ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ.


ನೈವೇದ್ಯದ್ರವ್ಯ, ಧೂಪ, ಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ದಶಮಾಂಶವನ್ನೂ, ಲೇವಿಯರಿಗೆ, ಗಾಯಕರಿಗೆ, ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ, ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಟೋಬೀಯನಿಗೋಸ್ಕರ ಸಿದ್ಧಮಾಡಿಸಿ ಕೊಟ್ಟಿದ್ದನು.


ಜೆರುಬ್ಬಾಬೆಲ್ ಮತ್ತು ನೆಹೆಮೀಯ ಇವರ ಕಾಲಗಳಲ್ಲಿ ಎಲ್ಲಾ ಇಸ್ರಾಯೇಲರು ಗಾಯಕರಿಗೂ ದ್ವಾರಪಾಲಕರಿಗೂ ಪ್ರತಿದಿನ ಜೀವನಾಂಶವನ್ನು ಕೊಡುತ್ತಿದ್ದರು. ಇವರು ಅವುಗಳಲ್ಲಿ ದಶಮಾಂಶವನ್ನು ಲೇವಿಯರಿಗೂ ಮತ್ತು ಲೇವಿಯರು ತಮ್ಮದರಲ್ಲಿಯ ದಶಮಾಂಶವನ್ನು ಆರೋನನ ಮಕ್ಕಳಿಗೂ ಕೊಡುತ್ತಿದ್ದರು.


ಎಲ್ಯಾಷೀಬ್, ಯೋಯಾದ, ಯೋಹಾನಾನ್, ಯದ್ದೂವ ಇವರ ಕಾಲಗಳಲ್ಲಿದ್ದ ಲೇವಿಯರ ಗೋತ್ರ ಪ್ರಧಾನರ ಪಟ್ಟಿಯೂ ಪಾರಸಿಯನಾದ ದಾರ್ಯಾವೆಷ ರಾಜನ ಆಳ್ವಿಕೆಯವರೆಗಿದ್ದ ಯಾಜಕರ ಪಟ್ಟಿಯೂ ಇದ್ದವು.


ಲೇವಿಯರಲ್ಲಿ: ಯೇಷೂವ, ಬಿನ್ನೂಯ್, ಕದ್ಮೀಯೇಲ್, ಶೇರೇಬ್ಯ, ಯೆಹೂದ ಮತ್ತು ಮತ್ತನ್ಯ ಇವರು. ಮತ್ತನ್ಯನೂ ಅವನ ಸಹೋದರರೂ ಕೃತಜ್ಞತಾಸ್ತುತಿಯ ನಾಯಕರಾಗಿದ್ದರು.


ಅವರ ಹಿಂದೆ ಕೆಹಾತ್ಯರು ದೇವಾಲಯದ ಸಾಮಾನುಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಉಳಿದ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ಅನಂತರ ಸೈನ್ಯಗಳ ಮಧ್ಯದಲ್ಲಿ ದೇವದರ್ಶನದ ಗುಡಾರವು ಲೇವಿಯರ ಪಾಳೆಯದಿಂದ ಹೊರಡಬೇಕು. ಅವರು ಇಳಿದುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಧ್ವಜಗಳನ್ನು ಹಿಡಿದುಕೊಂಡು ತಮಗೆ ಗೊತ್ತಾದ ಸ್ಥಾನದಲ್ಲಿ ಹೊರಡಬೇಕು.


ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”


ಇದಾದ ನಂತರ ನಾನು ನೋಡಿದಾಗ ಪರಲೋಕದಲ್ಲಿರುವ ದೇವದರ್ಶನ ಗುಡಾರದ ಪವಿತ್ರ ಸ್ಥಾನವು ತೆರೆಯಲ್ಪಟ್ಟಿತು.


ಮೋಶೆ ಆ ಕೋಲುಗಳನ್ನು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇಟ್ಟನು.


ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ ಅವನಿಗೆ, “ಯೆಹೋವನ ಸೇವಕನಾದ ಮೋಶೆಯ ವಿಧಿಗನುಸಾರವಾಗಿ ಇಸ್ರಾಯೇಲ್ ಸಮೂಹದವರೆಲ್ಲರು ದೇವದರ್ಶನದ ಗುಡಾರಕ್ಕೋಸ್ಕರ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಯೆರೂಸಲೇಮಿನ ಜನರಿಂದಲೂ ಕೂಡಿಸುವ ಹಾಗೆ ನೀನೇಕೆ ನೋಡಿಕೊಳ್ಳಲಿಲ್ಲ?


ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರನ್ನು ಎಣಿಕೆಮಾಡು, ಅವರು ದೇವದರ್ಶನದ ಗುಡಾರದ ಸೇವೆ ಮಾಡಬೇಕು.


ಇಸ್ರಾಯೇಲರಿಗಾಗಿ ದೇವದರ್ಶನ ಗುಡಾರದ ಸೇವಾಕಾರ್ಯವನ್ನು ನಡಿಸುವುದಕ್ಕೂ ದೋಷಪರಿಹಾರವನ್ನು ಮಾಡುವುದಕ್ಕೂ ಲೇವಿಯರನ್ನು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಹೀಗಿರುವುದರಿಂದ ಇಸ್ರಾಯೇಲರು ದೇವಾಲಯದ ಹತ್ತಿರಕ್ಕೆ ಬಂದಾಗ ಅವರಿಗೆ ಅಪಾಯವು ಸಂಭವಿಸುವುದಿಲ್ಲ.”


ಯೆಹೋವನು ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆಯೇ ಮೋಶೆ, ಆರೋನರೂ ಮತ್ತು ಇಸ್ರಾಯೇಲರ ಸಮೂಹದವರೆಲ್ಲರೂ ಮಾಡಿದರು.


ಆ ಮೇಲೆ ಲೇವಿಯರು ತಮಗೆ ನೇಮಕವಾದ ಕೆಲಸವನ್ನು ದೇವದರ್ಶನ ಗುಡಾರದಲ್ಲಿ ಆರೋನನ ಮತ್ತು ಅವನ ಮಕ್ಕಳ ಕೈಕೆಳಗೆ ಆರಂಭಿಸಿದರು. ಅವರ ವಿಷಯದಲ್ಲಿ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.


ಇನ್ನು ಮುಂದೆ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾಗದಂತೆ, ನೀವೇ ದೇವಸ್ಥಾನದ ವಸ್ತುಗಳನ್ನೂ, ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು