Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡುವುದಕ್ಕಾಗಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿನಗಳು ಅವರ ಮುಂದಾಗಿ ಹೋಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅವರು ಸರ್ವೇಶ್ವರನ ಬೆಟ್ಟವನ್ನು ಬಿಟ್ಟು ಮೂರುದಿನದ ಪ್ರಯಾಣದಷ್ಟು ದೂರಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡಲು ಸರ್ವೇಶ್ವರನ ಒಡಂಬಡಿಕೆಯ ಮಂಜೂಷವು ಆ ಮೂರು ದಿವಸ ಅವರಿಗೆ ಮುಂದಾಗಿ ಹೋಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳುಕೊಳ್ಳತಕ್ಕ ಸ್ಥಳವನ್ನು ನೋಡುವದಕ್ಕೋಸ್ಕರ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿವಸ ಅವರ ಮುಂದಾಗಿ ಹೋಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಅವರು ಯೆಹೋವನ ಬೆಟ್ಟದಿಂದ ಹೊರಟು ಮೂರು ದಿನ ಪ್ರಯಾಣ ಮಾಡಿದರು. ಲೇವಿಯರು ಹೊತ್ತುಕೊಂಡಿದ್ದ ಯೆಹೋವನ ಒಡಂಬಡಿಕೆ ಪೆಟ್ಟಿಗೆಯು ಮತ್ತೆ ಪಾಳೆಯ ಹಾಕಲು ಯೋಗ್ಯವಾದ ಸ್ಥಳವನ್ನು ಎದುರು ನೋಡುತ್ತಾ ಜನರ ಮುಂದೆ ಮೂರು ದಿನಗಳವರೆಗೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವರು ಯೆಹೋವ ದೇವರ ಪರ್ವತದ ಬಳಿಯಿಂದ ಮೂರು ದಿವಸಗಳವರೆಗೆ ಪ್ರಯಾಣಮಾಡಿದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅವರಿಗೆ ಇಳಿದುಕೊಳ್ಳುವ ಸ್ಥಳವನ್ನು ಹುಡುಕುವುದಕ್ಕೆ ಅವರ ಮೂರು ದಿವಸಗಳ ಪ್ರಯಾಣದಲ್ಲಿ ಅವರ ಮುಂದಾಗಿ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:33
25 ತಿಳಿವುಗಳ ಹೋಲಿಕೆ  

ನೀವು ಹೋಗಬೇಕಾದ ದಾರಿಯನ್ನು ತೋರಿಸುವುದಕ್ಕೂ, ದಂಡು ಇಳಿಯಬೇಕಾದ ಸ್ಥಳಗಳನ್ನು ಗೊತ್ತುಮಾಡುವುದಕ್ಕೂ ರಾತ್ರಿಯಲ್ಲಿ ಬೆಂಕಿಯೋಪಾದಿಯಲ್ಲಿಯೂ ಮತ್ತು ಹಗಲಿನಲ್ಲಿ ಮೇಘದೋಪಾದಿಯಲ್ಲಿಯೂ ನಿಮ್ಮ ಮಾರ್ಗದಲ್ಲಿ ನಿಮ್ಮನ್ನು ಮುನ್ನಡೆಸಿದ ದೇವರನ್ನು ನೀವು ನಂಬಲಿಲ್ಲ.


ಮೋಶೆಯು ತನ್ನ ಮಾವನಾದ, ಮಿದ್ಯಾನ್ಯರ ಯಾಜಕನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರಲಾಗಿ ಆ ಮಂದೆಯನ್ನು ಅಡವಿಯ ಮತ್ತೊಂದುಭಾಗಕ್ಕೆ ನಡಿಸಿಕೊಂಡು ಹೋಗುತ್ತಾ, “ಹೋರೇಬ್” ಎಂಬ ದೇವರ ಬೆಟ್ಟಕ್ಕೆ ಬಂದನು.


ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.


ಆ ದಿನದಲ್ಲಿ ನಾನು ಅವರಿಗೆ, ‘ಸಕಲ ದೇಶ ಶಿರೋಮಣಿಯಾದ ದೇಶವನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿ ಹಾಲೂ ಮತ್ತು ಜೇನೂ ಹರಿಯುವ ಆ ದೇಶಕ್ಕೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆನು.


ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.


ನೀವು ದೇಶದಲ್ಲಿ ಹೆಚ್ಚಿ ಅಭಿವೃದ್ಧಿಗೆ ಬಂದ ಕಾಲದಲ್ಲಿ, ‘ಯೆಹೋವನ ನಿಬಂಧನ ಮಂಜೂಷ’ ಇದರ ಪ್ರಸ್ತಾವವಿರದು. ಅದು ಜ್ಞಾಪಕಕ್ಕೆ ಬಾರದು, ಯಾರೂ ಸ್ಮರಿಸರು, ಅದು ಇಲ್ಲವಲ್ಲಾ ಎಂದು ದುಃಖಿಸರು, ಹೊಸದಾಗಿ ಕಲ್ಪಿಸಿಕೊಳ್ಳರು” ಇದು ಯೆಹೋವನ ನುಡಿ.


ಯೆಹೋವನು ಹೀಗೆನ್ನುತ್ತಾನೆ: “ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?


ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರಿಗೆ ವಿಶ್ರಾಂತಿ ನೀಡಿ, ನಿಮಗೆ ಅನುಕೂಲವಾದ ಉಪಶಮನವು ಇದೇ” ಎಂದು ಹೇಳುವಾಗ ಇವರು ಕೇಳದೆ ಹೋದರು.


ಆದುದರಿಂದ ಇವರು, “ನನ್ನ ವಿಶ್ರಾಂತಿಯಲ್ಲಿ ಸೇರಬಾರದು” ಎಂದು ಕೋಪಗೊಂಡು ಪ್ರಮಾಣಮಾಡಿದೆನು.


ಇಸ್ರಾಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರ ಹಿರಿಯರು ಅವರಿಗೆ, “ಯೆಹೋವನು ಈ ಹೊತ್ತು ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶೀಲೋವಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸೋಣ; ಆತನು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ತಪ್ಪಿಸಲಿ” ಎಂದು ಆಲೋಚನೆ ಹೇಳಿದ್ದರಿಂದ ಅವರು ಜನರನ್ನು ಕಳುಹಿಸಿ


ಆ ಕಾಲದಲ್ಲಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಊರೊಳಗಿತ್ತು;


ನೀವು ಅವರಿಗೆ ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿ ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತು ಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲಕ್ಕೂ ಸಾಕ್ಷಿಗಳಾಗಿರುವವು” ಅಂದನು.


“ನೀವು ಈ ಧರ್ಮಶಾಸ್ತ್ರ ಪುಸ್ತಕವನ್ನು ನಿಮ್ಮ ವಶಕ್ಕೆ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಆಜ್ಞಾಶಾಸನಗಳ ಮಂಜೂಷದ ಬಳಿಯಲ್ಲಿ ಇಡಿರಿ. ಇಸ್ರಾಯೇಲರೇ, ಅಲ್ಲಿ ಇದು ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುವುದಾಗಿರಲಿ.


ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನ ಪಾನಗಳನ್ನು ಬಿಟ್ಟು ಹಗಲಿರುಳು ನಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು.


ಆದುದರಿಂದ ಇಸ್ರಾಯೇಲರು ಸೀನಾಯಿ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಆ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು.


ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಹೋದನು. ಆಗ ಯೆಹೋವನು ಬೆಟ್ಟದ ಮೇಲಿಂದ ಮೋಶೆಯನ್ನು ಕರೆದು ಅವನಿಗೆ, “ನೀನು ಯಾಕೋಬನ ಮನೆತನದವರಾದ ಇಸ್ರಾಯೇಲರಿಗೆ ಈ ಮಾತುಗಳನ್ನು ತಿಳಿಸಿ ಹೇಳಬೇಕು.


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.


ಕರ್ತನಾದ ಯೆಹೋವನು, “ಖಡ್ಗಕ್ಕೆ ಹತರಾಗದೆ ಉಳಿದ ಜನಕ್ಕೆ ಅರಣ್ಯದಲ್ಲಿ ದಯೆ ದೊರೆಯುವುದು; ಇಸ್ರಾಯೇಲ್ ವಿಶ್ರಾಂತಿಯನ್ನು ಹುಡುಕುವುದಕ್ಕೆ ಹೋಗುವಾಗ ಯೆಹೋವನು ದೂರದಿಂದ ಬಂದು ಅದಕ್ಕೆ ದರ್ಶನಕೊಟ್ಟು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು