Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಐಗುಪ್ತ ದೇಶದಲ್ಲಿ ನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜ, ಈರುಳ್ಳಿ ಹಾಗೂ ಬೆಳ್ಳುಳ್ಳಿ ಇವು ನೆನಪಿಗೆ ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಈಜಿಪ್ಟ್ ದೇಶದಲ್ಲಿ ನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜ, ಉಳ್ಳಿಗಡ್ಡೆ, ನೀರುಳ್ಳಿ, ಬೆಳ್ಳುಳ್ಳಿ ಇವೆಲ್ಲಾ ನೆನಪಿಗೆ ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಐಗುಪ್ತದೇಶದಲ್ಲಿ ನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸವತೆಕಾಯಿ, ಕರ್ಬೂಜು, ಉಳ್ಳಿಗಡ್ಡೆ, ನೀರುಳ್ಳಿ, ಬೆಳ್ಳುಳ್ಳಿ ಇವು ನೆನಪಿಗೆ ಬರುತ್ತವಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾವು ಈಜಿಪ್ಟಿನಲ್ಲಿ ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜು, ಈರುಳ್ಳಿಸೊಪ್ಪು, ಈರುಳ್ಳಿ, ಬೆಳ್ಳುಳ್ಳಿ ಇವುಗಳನ್ನು ನಾವು ಜ್ಞಾಪಿಸಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾವು ಈಜಿಪ್ಟ್ ದೇಶದಲ್ಲಿ ಉಚಿತವಾಗಿ ತಿಂದ ಮೀನನ್ನೂ ಸವತೆ ಕಾಯಿಯನ್ನೂ ಕರ್ಬೂಜಗಳನ್ನೂ ನೀರುಳ್ಳಿ ಈರುಳ್ಳಿ ಬೆಳ್ಳುಳ್ಳಿಗಳನ್ನೂ ಜ್ಞಾಪಿಸಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:5
7 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, “ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಈ ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಐಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು” ಎಂದರು.


ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.


ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ.


ಇಸ್ರಾಯೇಲರೆಲ್ಲರೂ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಗುಣುಗುಟ್ಟಿ, “ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ ದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು


ಯೆರೂಸಲೇಮಿನ ನಗರವೊಂದೇ ಉಳಿದು, ದ್ರಾಕ್ಷಿತೋಟದ ಮನೆಯಂತೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಲ್ಪಟ್ಟ ಪಟ್ಟಣದ ಹಾಗೆಯೂ ಇದೆ.


ಆದರೆ ನಾವು ಗಗನದ ಒಡತಿಗೆ ಧೂಪಹಾಕುವುದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವುದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ಕೊರತೆಗೂ ಗುರಿಯಾಗಿ ಖಡ್ಗ, ಕ್ಷಾಮಗಳಿಂದ ನಾಶವಾಗುತ್ತಿದ್ದೇವೆ.


ಬೇಡವೇ ಬೇಡ; ನಾವು ಯುದ್ಧ ಕಾಣದೆ, ತುತ್ತೂರಿಯ ಶಬ್ದ ಕೇಳದೆ, ಅನ್ನದ ಕೊರತೆಯಿಂದ ಹಸಿವಾಗದೆ ಇರುವ ಐಗುಪ್ತ ದೇಶಕ್ಕೆ ಹೋಗಿ ಅಲ್ಲೇ ವಾಸಿಸುವೆವು’ ಎಂದುಕೊಂಡರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು