Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕಾನಾನ್ ದೇಶದಲ್ಲಿ ಸಂಚರಿಸಿ ನೋಡುವುದಕ್ಕೆ ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದ ಮಾರ್ಗವಾಗಿ ಬೆಟ್ಟದ ಸೀಮೆಗೆ ಹತ್ತಿಹೋಗಿ ಆ ದೇಶದ ಸಂಗತಿಯನ್ನೆಲ್ಲಾ ನೋಡಿ ತಿಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕಾನಾನ್ ನಾಡನ್ನು ಸಂಚರಿಸಿ ನೋಡಿ ಬರುವುದಕ್ಕೆ ಅವರನ್ನು ಕಳಿಸುವಾಗ ಮೋಶೆ ಹೀಗೆಂದು ಸಂಬೋಧಿಸಿದನು: “ನೀವು ನೆಗೆಬಾ ಮಾರ್ಗವಾಗಿ ಮಲೆನಾಡಿಗೆ ಹತ್ತಿಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕಾನಾನ್ ದೇಶವನ್ನು ಸಂಚರಿಸಿ ನೋಡುವದಕ್ಕೆ ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ - ನೀವು ಕಾನಾನ್ ದೇಶದ ದಕ್ಷಿಣಪ್ರಾಂತ್ಯದ ಮಾರ್ಗವಾಗಿ ಬೆಟ್ಟದ ಸೀಮೆಗೆ ಹತ್ತಿಹೋಗಿ ಆ ದೇಶದ ಸಂಗತಿಯನ್ನೆಲ್ಲಾ ನೋಡಿ ತಿಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಕಾನಾನ್ ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ಬೆಟ್ಟದ ಸೀಮೆಗೆ ನೆಗೆವ್ ಮೂಲಕ ಹತ್ತಿ ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಮೋಶೆ ಕಾನಾನ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ನೆಗೆವ ಮಾರ್ಗವಾಗಿ ಮಲೆನಾಡಿಗೆ ಹತ್ತಿಹೋಗಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:17
16 ತಿಳಿವುಗಳ ಹೋಲಿಕೆ  

ತರುವಾಯ ಯೆಹೂದ್ಯರು ಹೋಗಿ ಪರ್ವತಪ್ರದೇಶ, ದಕ್ಷಿಣಸೀಮೆ ಹಾಗೂ ಕಣಿವೆ ಪ್ರದೇಶಗಳಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು.


ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಕಾನಾನ್ ದೇಶದ ದಕ್ಷಿಣ ಸೀಮೆಗೆ ಪ್ರಯಾಣ ಮಾಡುತ್ತಾ ಹೋದನು.


ಯೆಹೋವನು ಯೆಹೂದ್ಯರ ಸಂಗಡ ಇದ್ದುದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದುದರಿಂದ ಅವರನ್ನು ಹೊರಡಿಸುವುದಕ್ಕೆ ಆಗಲಿಲ್ಲ.


ಆಕೆಯು, “ನನಗೊಂದು ದಾನಕೊಡಬೇಕು; ನೀನು ನನ್ನನ್ನು ದಕ್ಷಿಣ ಪ್ರಾಂತ್ಯಕ್ಕೆ ಕೊಟ್ಟುಬಿಟ್ಟಿಯಲ್ಲಾ, ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಅಂದಳು. ಆಗ ಅವನು ಆಕೆಗೆ ಮೇಲಣ ಬುಗ್ಗೆ ಮತ್ತು ಕೆಳಗಣ ಪ್ರದೇಶದ ಬುಗ್ಗೆಗಳನ್ನು ಕೊಟ್ಟನು.


ಅಕ್ರಬ್ಬೀಮ್ ಕಣಿವೆಯ ದಕ್ಷಿಣ ಮಾರ್ಗವಾಗಿ ಚಿನಿಗೆ ಹೋಗುತ್ತದೆ. ಅಲ್ಲಿಂದ ಕಾದೇಶ್ ಬರ್ನೇಯದ ದಕ್ಷಿಣ ಮಾರ್ಗವಾಗಿ ಹೆಚ್ರೋನಿಗೂ ಅಲ್ಲಿಂದ ಏರುತ್ತಾ ಅದ್ದಾರಿಗೂ ಹೋಗಿ ಕರ್ಕದ ಕಡೆಗೆ ತಿರುಗಿಕೊಳ್ಳುತ್ತದೆ ಅಚ್ಮೋನಿನ ಮೇಲೆ,


ಹೀಗೆ ಅಬ್ರಾಮನು ತನ್ನದನ್ನೆಲ್ಲಾ ತೆಗೆದುಕೊಂಡು ಹೆಂಡತಿಯನ್ನೂ, ಲೋಟನನ್ನೂ ಸಂಗಡ ಕರೆದುಕೊಂಡು ಐಗುಪ್ತದೇಶವನ್ನು ಬಿಟ್ಟು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯಕ್ಕೆ ಬಂದನು.


ಆಗ ಬೆಟ್ಟದಲ್ಲಿದ್ದ ಅಮೋರಿಯರು ನಿಮಗೆ ವಿರುದ್ಧವಾಗಿ ಹೊರಟು ಜೇನುಹುಳಗಳಂತೆ ನಿಮ್ಮನ್ನು ಮುತ್ತಿ ಸೇಯೀರಿನಲ್ಲಿ ಹೊರ್ಮದ ವರೆಗೂ ಬೆನ್ನಟ್ಟಿ ಸಂಹರಿಸಿದರು.


ಮರುದಿನ ಬೆಳಿಗ್ಗೆ ಜನರು ಎದ್ದು, “ನಾವು ಪಾಪ ಮಾಡಿರುವುದು ನಿಜ; ಯೆಹೋವನು ವಾಗ್ದಾನ ಮಾಡಿದ ಸ್ಥಳಕ್ಕೆ ಹತ್ತೋಣ ಬನ್ನಿ” ಎಂದು ಹೇಳಿಕೊಳ್ಳುತ್ತಾ ಆ ಬೆಟ್ಟದ ಮೇಲಕ್ಕೆ ಹತ್ತಿಹೋದರು.


ದಕ್ಷಿಣ ಸೀಮೆಯಲ್ಲಿ ಅಮಾಲೇಕ್ಯರು, ಬೆಟ್ಟದ ಸೀಮೆಯಲ್ಲಿ ಹಿತ್ತಿಯರು, ಯೆಬೂಸಿಯರು, ಅಮೋರಿಯರು ಸಮುದ್ರತೀರದಲ್ಲಿ ಮತ್ತು ಯೊರ್ದನ್ ಹೊಳೆಯ ಬಳಿಯಲ್ಲಿ ಕಾನಾನ್ಯರೂ ವಾಸವಾಗಿದ್ದಾರೆ” ಎಂದು ತಿಳಿಸಿದರು.


ಆದರೆ ಸಿದ್ದೀಮ್ ತಗ್ಗು ಪ್ರದೇಶ ಕಲ್ಲರಗಿನ ಕೆಸರುಗುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.


ಅವನು ದಕ್ಷಿಣ ದೇಶವನ್ನು ಬಿಟ್ಟು ಮುಂದೆ ಪ್ರಯಾಣ ಮಾಡುತ್ತಾ ಬೇತೇಲಿನವರೆಗೆ ಅಂದರೆ ಬೇತೇಲಿಗೂ ಆಯಿ ಎಂಬ ಊರಿಗೂ


ನೀನೆದ್ದು, ಈ ದೇಶದ ಎಲ್ಲಾ ಕಡೆಯಲ್ಲಿಯೂ ತಿರುಗಾಡು; ಇದನ್ನು ನಿನಗೆ ಕೊಡುವೆನು” ಎಂದು ಹೇಳಿದನು.


ಅಲ್ಲಿನ ನಿವಾಸಿಗಳು ಬಲಿಷ್ಠರೋ ಅಥವಾ ಬಲಹೀನರೋ, ಬಹಳ ಜನರೋ ಅಥವಾ ಸ್ವಲ್ಪ ಜನರೋ,


ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಗುಪ್ತವಾಗಿ ಯೆರಿಕೋ ಪಟ್ಟಣವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಕಳುಹಿಸಿದನು. ಅವರಿಗೆ “ನೀವು ಹೊರಟು ಹೋಗಿ ಕಾನಾನ್ ದೇಶದ ಯೆರಿಕೋ ಪಟ್ಟಣವನ್ನು ನೋಡಿರಿ” ಎಂದನು. ಆಗ ಅವರು ಹೊರಟು ಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು.


ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳುಕಲ್ಲಿನ ಪ್ರದೇಶ, ಬೆಟ್ಟಗಳ ತಗ್ಗು ಪ್ರದೇಶ ಇವುಗಳನ್ನು ಸ್ವಾಧೀನಪಡಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್‍ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಸಂಹರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು