Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅದಲ್ಲದೆ ಇವರು ತಾವು ಸಂಚರಿಸಿ ನೋಡಿದ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, “ನಾವು ಸಂಚರಿಸಿ ನೋಡಿದ ದೇಶವು ತನ್ನಲ್ಲಿ ವಾಸಿಸುವವರನ್ನು ನುಂಗಿಬಿಡುತ್ತದೆ. ಅದಲ್ಲದೆ ನಾವು ಅದರಲ್ಲಿ ನೋಡಿದ ಜನರೆಲ್ಲರೂ ಬಹಳ ಎತ್ತರವಾದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅದಲ್ಲದೆ ತಾವು ಸಂಚರಿಸಿ ನೋಡಿ ಬಂದ ನಾಡಿನ ವಿಷಯವಾಗಿ ಇಸ್ರಯೇಲರಿಗೆ ಅಶುಭ ಸಮಾಚಾರವನ್ನೇ ಹೇಳುವವರಾದರು. “ನಾವು ಸಂಚಾರಮಾಡಿ ನೋಡಿ ಬಂದ ನಾಡು ತನ್ನಲ್ಲಿ ವಾಸಿಸುವವರನ್ನೇ ಕಬಳಿಸುವಂತಿದೆ. ನಾವು ಅಲ್ಲಿ ನೋಡಿದ ಜನರೆಲ್ಲರು ಬಹು ಎತ್ತರವಾದ ವ್ಯಕ್ತಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅದಲ್ಲದೆ ಇವರು ತಾವು ಸಂಚರಿಸಿ ನೋಡಿದ ದೇಶದ ವಿಷಯವಾಗಿ ಇಸ್ರಾಯೇಲ್ಯರಿಗೆ ಅಶುಭಸಮಾಚಾರವನ್ನು ಹೇಳುವವರಾಗಿ - ನಾವು ಸಂಚರಿಸಿ ನೋಡಿದ ದೇಶವು ತನ್ನಲ್ಲಿ ವಾಸಿಸುವವರನ್ನು ನುಂಗಿಬಿಡುತ್ತದೆ; ಅದಲ್ಲದೆ ನಾವು ಅದರಲ್ಲಿ ನೋಡಿದ ಜನರೆಲ್ಲರೂ ಬಹಳ ಎತ್ತರವಾದವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ನಾವು ಸಂಚರಿಸಿ ವಿಷಯ ಸಂಗ್ರಹಿಸಿಕೊಂಡು ಬಂದ ದೇಶವು ಅಲ್ಲಿ ವಾಸಿಸುವವರನ್ನು ನಾಶಪಡಿಸುವ ದೇಶವಾಗಿದೆ. ನಾವು ಅಲ್ಲಿ ನೋಡಿದ ಎಲ್ಲಾ ಜನರು ರಾಕ್ಷಸರಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವರು ಸಂಚರಿಸಿ ನೋಡಿದಂಥ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, “ನಾವು ಸಂಚರಿಸಿ ನೋಡಿ ಬಂದ ದೇಶವು ತನ್ನಲ್ಲಿ ವಾಸವಾಗಿರುವವರನ್ನೇ ತಿಂದುಬಿಡುವ ದೇಶವಾಗಿದೆ. ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾ ಶರೀರದ ಮನುಷ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:32
11 ತಿಳಿವುಗಳ ಹೋಲಿಕೆ  

ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು, ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ, ಅಲ್ಲೋನ್ ಮರದ ಹಾಗೆ ಬಲಿಷ್ಠವಾಗಿಯೂ ಇದ್ದರು. ಆದರೂ ಮರದ ಮೇಲಿನ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.


ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು ಅವನ ಕೈಕಾಲುಗಳಿಗೆ ಆರಾರು ಬೆರಳುಗಳಿದ್ದವು. ಅವನೂ ರೆಫಾಯನು.


ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು ಅವನು ರೆಫಾಯನಿಗೆ ಹುಟ್ಟಿದವನಾಗಿದ್ದನು.


ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ.


ಆದರೆ ಆ ದೇಶದ ನಿವಾಸಿಗಳು ಬಲಿಷ್ಠರು: ಅವರಿರುವ ಪಟ್ಟಣಗಳು ದೊಡ್ಡದಾಗಿಯೂ, ಕೋಟೆ ಕೊತ್ತಲುಗಳುಳ್ಳದ್ದಾಗಿಯೂ ಇದೆ. ಅದಲ್ಲದೆ ಅಲ್ಲಿ ಉನ್ನತ ಪುರುಷರನ್ನು ನೋಡಿದೆವು.


ಅವರು ಆ ರಮಣೀಯ ದೇಶವನ್ನು ತಿರಸ್ಕರಿಸಿದರು, ಆತನ ಮಾತನ್ನು ನಂಬಲಿಲ್ಲ.


ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನ ಸಂಚಾರವನ್ನು ಉಂಟುಮಾಡುವೆನು; ನನ್ನ ಜನರಾದ ಇಸ್ರಾಯೇಲರೇ, ನಿನ್ನಲ್ಲಿ ಸಂಚರಿಸುತ್ತಾ ನಿನ್ನನ್ನು ಸ್ವತ್ತಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರ ಶೋಕವನ್ನು ಕೊಡುವುದಿಲ್ಲ.’”


ಇಸ್ರಾಯೇಲ್ಯರೇ, ನೀವು ಅಮ್ಮೋನಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು, ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡಿ, ನಲ್ವತ್ತು ವರ್ಷ ಅರಣ್ಯದಲ್ಲಿ ನಿಮ್ಮನ್ನು ನಡೆಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು