Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಸ್ರಾಯೇಲರೆಲ್ಲರೂ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಗುಣುಗುಟ್ಟಿ, “ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ ದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇಸ್ರಯೇಲರೆಲ್ಲರು ಮೋಶೆ ಮತ್ತು ಆರೋನರ ವಿರುದ್ಧ ಗುಣಗುಟ್ಟಿದರು. “ಈಜಿಪ್ಟಿನಲ್ಲೇ ನಾವು ಸತ್ತಿದ್ದರೆ ಚೆನ್ನಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ಯರೆಲ್ಲರೂ ಮೋಶೆ ಆರೋನರಿಗೆ ವಿರೋಧವಾಗಿ ಗುಣುಗುಟ್ಟಿ - ನಾವು ಐಗುಪ್ತದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಮೇಲಾಗಿತ್ತು; ಈ ಅರಣ್ಯದಲ್ಲಿಯಾದರೂ ಸತ್ತಿದ್ದರೆ ಮೇಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇಸ್ರೇಲರು ಮೋಶೆ ಆರೋನರ ವಿರುದ್ಧ ಗೊಣಗುಟ್ಟಿದರು. ಜನರೆಲ್ಲರೂ ಒಟ್ಟಾಗಿ ಮೋಶೆ ಆರೋನರ ಬಳಿಗೆ ಬಂದು, “ನಾವು ಈಜಿಪ್ಟಿನಲ್ಲಿಯಾಗಲೀ ಅಥವಾ ಈ ಮರುಭೂಮಿಯಲ್ಲಾಗಲಿ ಸತ್ತಿದ್ದರೆ ಒಳ್ಳೆಯದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇಸ್ರಾಯೇಲರೆಲ್ಲರು ಮೋಶೆಗೂ ಆರೋನನಿಗೂ ವಿರೋಧವಾಗಿ ಗೊಣಗುಟ್ಟಿದರು. ಅವರು, “ನಾವು ಈಜಿಪ್ಟ್ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಮರುಭೂಮಿಯಲ್ಲಾದರೂ ಸತ್ತಿದ್ದರೆ ಚೆನ್ನಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:2
31 ತಿಳಿವುಗಳ ಹೋಲಿಕೆ  

ಜನರು ಮೋಶೆಗೆ, “ನಾವೇನು ಕುಡಿಯಬೇಕು?” ಎಂದು ಅವನಿಗೆ ವಿರುದ್ಧವಾಗಿ ಗುಣಗುಟ್ಟಿದರು.


ಮರುದಿನ ಇಸ್ರಾಯೇಲರ ಸರ್ವಸಮೂಹದವರು ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟಿ, “ನೀವೇ ಯೆಹೋವನ ಜನರನ್ನು ಸಾಯಿಸಿದಿರಿ” ಎಂದು ಹೇಳುವವರಾದರು.


ಅಲ್ಲಿ ಜನರು ಬಾಯಾರಿಕೆಯಿಂದ, ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿ, “ನೀನು ನಮ್ಮನ್ನೂ, ನಮ್ಮ ಮಕ್ಕಳನ್ನೂ, ದನಗಳನ್ನೂ ಐಗುಪ್ತ ದೇಶದಿಂದ ಇಲ್ಲಿಗೆ ಕರೆದುತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ?” ಎಂದರು.


ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.


ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ.


ಸೂರ್ಯನು ಉದಯಿಸಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆಹೋಗುವವನಾಗಿ “ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ಸಾಯಲು ಬಯಸಿದನು.


ಆದುದರಿಂದ ಯೆಹೋವನೇ, ನನ್ನ ಪ್ರಾಣವನ್ನು ತೆಗೆದುಕೋ; ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ವಿಜ್ಞಾಪಿಸಿಕೊಂಡನು.


ಅವರು ಆ ರಮಣೀಯ ದೇಶವನ್ನು ತಿರಸ್ಕರಿಸಿದರು, ಆತನ ಮಾತನ್ನು ನಂಬಲಿಲ್ಲ.


ನೀವು ನಿಮ್ಮ ಡೇರೆಗಳಲ್ಲಿ ಗುಣುಗುಟ್ಟುತ್ತಾ, “ಯೆಹೋವನು ನಮ್ಮನ್ನು ಐಗುಪ್ತದೇಶದಿಂದ ಬರಮಾಡಿದ್ದು ಹಗೆತನದಿಂದಲೇ; ಆತನು ನಮ್ಮನ್ನು ಸಂಹರಿಸಬೇಕೆಂದು ಅಮೋರಿಯರ ಕೈಗೆ ಒಪ್ಪಿಸುತ್ತಾನೆ.


ನೀನು ಹೀಗೆ ಮಾಡುವುದಕ್ಕಿಂತ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರವಾಗುತ್ತದೆ; ನನಗಾಗುತ್ತಿರುವ ದುರಾವಸ್ಥೆಯನ್ನು ನಾನು ಸಹಿಸಲಾರೆ” ಎಂದನು.


ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.


ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.


ನಾನು ಹುಟ್ಟುವಾಗಲೇ ಏಕೆ ಸಾಯಲಿಲ್ಲ. ಗರ್ಭದಿಂದ ಬಂದಾಗಲೇ ಏಕೆ ಪ್ರಾಣಬಿಡಲಿಲ್ಲ?


ತರುವಾಯ ತಾನೊಬ್ಬನೇ ಅರಣ್ಯದೊಳಗೆ ಒಂದು ದಿನದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀ ಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು, “ಯೆಹೋವನೇ ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಬಿಡು. ನಾನು ನನ್ನ ಪೂರ್ವಿಕರಿಗಿಂತ ಉತ್ತಮನಲ್ಲ” ಎಂದು ದೇವರನ್ನು ಪ್ರಾರ್ಥಿಸಿ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆ ಮಾಡಿದನು.


ಆತನು ನುಡಿದದ್ದನ್ನು ಕೇಳಿ ವಿರೋಧಿಸಿದವರು ಯಾರು? ಮೋಶೆಯ ಮೂಲಕ ಐಗುಪ್ತದೊಳಗಿಂದ ಹೊರಗೆ ಕರೆತರಲ್ಪಟ್ಟವರೆಲ್ಲರೂ ಅಲ್ಲವೇ?


ಐಗುಪ್ತ ದೇಶದಲ್ಲಿ ನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜ, ಈರುಳ್ಳಿ ಹಾಗೂ ಬೆಳ್ಳುಳ್ಳಿ ಇವು ನೆನಪಿಗೆ ಬರುತ್ತವೆ.


ಆಗ ಜನಸಮೂಹದವರೆಲ್ಲರೂ ತಮ್ಮ ಸ್ವರ ಎತ್ತಿ ಆ ರಾತ್ರಿಯೆಲ್ಲಾ ಗೋಳಾಡಿದರು.


ಈ ಮನುಷ್ಯರೆಲ್ಲರು ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ


ನೀನು ಹಾಲೂ ಮತ್ತು ಜೇನೂ ಹರಿಯುವ ದೇಶದಿಂದ ಕರೆದುಕೊಂಡು ಬಂದು ನಮ್ಮನ್ನು ಮರುಭೂಮಿಯಲ್ಲಿ ಸಾಯಿಸುವುದು ನಿನಗೆ ಸಾಕಾಗಲಿಲ್ಲವೋ? ನೀನು ನಮ್ಮ ಮೇಲೆ ದೊರೆತನ ಮಾಡಬೇಕು ಎಂದು ಕೋರುತ್ತಿಯೋ?


ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ, “ನಮ್ಮ ಜನರು ಯೆಹೋವನ ಸನ್ನಿಧಿಯಲ್ಲಿ ಸತ್ತುಹೋದಾಗಲೇ ನಾವೂ ಸಹ ಸತ್ತುಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.


ನೀವು ಯೆಹೋವನ ಸಮೂಹದವರಾದ ನಮ್ಮನ್ನೂ, ನಮ್ಮ ಪಶುಗಳನ್ನೂ ಈ ಮರಳುಗಾಡಿಗೆ ಕರೆದುಕೊಂಡು ಬಂದು ಯಾಕೆ ಸಾಯಿಸುತ್ತೀರಿ?


ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.


ತಮ್ಮ ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ, ಯೆಹೋವನ ಮಾತಿಗೆ ಕಿವಿಗೊಡಲಿಲ್ಲ.


ಅವರು ಮೋಶೆಗೆ, “ಐಗುಪ್ತ ದೇಶದಲ್ಲಿ ಸಮಾಧಿಗಳಿರಲಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿ ಎಂದು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯೋ? ಯಾಕೆ ನೀನು ನಮಗೆ ಈ ರೀತಿಮಾಡಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದೆ?


ಅದಕ್ಕೆ ಮೋಶೆಯು ಇಸ್ರಾಯೇಲರ ಸಂಗಡ ಮಾತನಾಡಿದನು. ಅವರ ಕುಲಾಧಿಪತಿಗಳೆಲ್ಲರೂ ಕುಲಕ್ಕೆ ಒಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಅವನ ಕೈಗೆ ಕೊಟ್ಟರು. ಅವುಗಳೊಡನೆ ಆರೋನನ ಕೋಲೂ ಇತ್ತು.


ಸಮೂಹದವರಿಗೆ ನೀರು ಇಲ್ಲದ ಕಾರಣ ಅವರು ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಕೂಡಿಕೊಂಡರು.


ಅದಲ್ಲದೆ ಕಾದೇಶ್ ಬರ್ನೇಯದಲ್ಲಿ ಯೆಹೋವನು ನಿಮಗೆ, “ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ” ಎಂದು ಅಪ್ಪಣೆಕೊಟ್ಟಾಗಲೂ ನೀವು ನಿಮ್ಮ ದೇವರಾದ ಯೆಹೋವನ ಆ ಆಜ್ಞೆಯನ್ನು ಧಿಕ್ಕರಿಸಿ, ಆತನನ್ನು ನಂಬದೆ, ಆತನ ಮಾತನ್ನು ಅಲಕ್ಷ್ಯ ಮಾಡಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು