Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೆ ನನ್ನ ಜೀವದಾಣೆ, ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆದರೂ ನನ್ನ ಜೀವದಾಣೆ ಸರ್ವೇಶ್ವರನ ಮಹಿಮೆ ಅಖಿಲ ವಿಶ್ವವನ್ನು ತುಂಬಿದೆಯೆಂಬ ಸತ್ಯವಾಕ್ಯದ ಆಣೆ. ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ವಾಗ್ದತ್ತ ನಾಡನ್ನು ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದಾಗ್ಯೂ ನನ್ನ ಜೀವದಾಣೆ, ಮತ್ತು ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರಬೇಕೆಂಬುವ ನಿಶ್ಚಯ ವಾಕ್ಯದ ಆಣೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದಾಗ್ಯೂ ನನ್ನ ಜೀವದಾಣೆ ಮತ್ತು ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರಬೇಕೆಂಬುವ ನಿಶ್ಚಯ ವಾಕ್ಯದ ಆಣೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ನನ್ನ ಜೀವದಾಣೆ, ಭೂಮಿಯೆಲ್ಲಾ ಯೆಹೋವ ದೇವರ ಮಹಿಮೆಯಿಂದ ತುಂಬಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:21
16 ತಿಳಿವುಗಳ ಹೋಲಿಕೆ  

ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’


ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್.


ಕಣ್ಣೆತ್ತಿ ಸುತ್ತಲು ನೋಡು! ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ನೀನು ಇವರನ್ನೆಲ್ಲಾ ಆಭರಣವನ್ನಾಗಿ ಧರಿಸಿಕೊಳ್ಳುವಿ, ವಧುವು ಒಡ್ಯಾಣವನ್ನು ಕಟ್ಟಿಕೊಳ್ಳುವ ಹಾಗೆ ನೀನು ಇವರನ್ನು ನಿನ್ನ ಎದೆಗೆ ಒರಗಿ ಕಟ್ಟಿಕೊಳ್ಳುವಿ.


ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು.


ನಾನು ಆಕಾಶದ ಕಡೆಗೆ ಕೈಯೆತ್ತಿ ನಾನು ಸದಾಕಾಲ ಜೀವಿಸುವವನೆಂಬುದು ಎಷ್ಟು ನಿಶ್ಚಯ ಎಂದು ಖಂಡಿತವಾಗಿ ಪ್ರಮಾಣಮಾಡುವೆನು,


“ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.


ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಎತ್ತಬೇಕಾಗುವುದಿಲ್ಲ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ, ಅಸಹ್ಯ ವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ನಿನ್ನನ್ನು ಕುಂದಿಸುವೆನು, ನಾನು ನಿನಗೆ ಕರುಣೆ ತೋರಿಸೆನು, ಕಟಾಕ್ಷಿಸೆನು.


ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿರುವವರನ್ನು ನಾನು ಮೃಗಗಳಿಗೆ ತುತ್ತುಮಾಡುವೆನು; ಗುಹೆ ದುರ್ಗಗಳಲ್ಲಿರುವವರನ್ನು ವ್ಯಾಧಿಯು ಸಾಯಿಸುವುದು.


ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆನು!


ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನು ಹೇಳುವುದೇನೆಂದರೆ, ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಅಂದುಕೊಂಡ ಪ್ರಕಾರವೇ ನಾನು ಮಾಡುತ್ತೇನೆ; ನಿಮ್ಮ ಶವಗಳು ಈ ಅರಣ್ಯದಲ್ಲಿಯೇ ಬೀಳುವವು.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು.


ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; ನನ್ನ ಪ್ರಾಣವು ಕುಂದಿಹೋಯಿತು. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು; ತಾವೇ ಅದರಲ್ಲಿ ಬಿದ್ದುಹೋದರು. ಸೆಲಾ


ನಾನು ಐಗುಪ್ತದ ಅರಣ್ಯದಲ್ಲಿ ನಿಮ್ಮ ಪೂರ್ವಿಕರ ಸಂಗಡ ವಾದಿಸಿದಂತೆ, ನಿಮ್ಮ ಸಂಗಡಲೂ ವಾದಿಸುವೆನು” ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು