Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನನ್ನ ದಾಸನಾದ ಕಾಲೇಬನಿಗೆ ಅವರಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದುದ್ದರಿಂದ ಅವನು ಸಂಚರಿಸಿದ ಆ ದೇಶದಲ್ಲಿ ಅವನನ್ನು ಸೇರಿಸುವೆನು, ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನನ್ನ ದಾಸನಾದ ಕಾಲೇಬನಾದರೋ ಅವರಂಥ ಮನಸ್ಸುಳ್ಳವನಾಗಿರದೆ ಮನಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದಿದ್ದಾನೆ. ಆದ್ದರಿಂದ ಅವನು ಸಂಚರಿಸಿ ಬಂದ ಆ ನಾಡಿಗೆ ಅವನನ್ನು ಸೇರಿಸುವೆನು. ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನನ್ನ ದಾಸನಾದ ಕಾಲೇಬನು ಅಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದದ್ದರಿಂದ ಅವನನ್ನೇ ಅವನು ಸಂಚರಿಸಿದ ಆ ದೇಶದಲ್ಲಿ ಸೇರಿಸುವೆನು; ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದರೆ ನನ್ನ ಸೇವಕನಾದ ಕಾಲೇಬನು ಅವರ ಹಾಗಲ್ಲ, ಅವನು ನನ್ನನ್ನು ಮನಃಪೂರ್ವಕವಾಗಿ ಹಿಂಬಾಲಿಸಿದ್ದಾನೆ. ಆದ್ದರಿಂದ ಅವನು ಸಂಚರಿಸಿ ನೋಡಿದ ದೇಶಕ್ಕೆ ಅವನನ್ನು ಬರಮಾಡುವೆನು ಮತ್ತು ಅವನ ಸಂತತಿಯವರು ಆ ದೇಶವನ್ನು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ಬೇರೆ ಆತ್ಮವಿದ್ದುದರಿಂದಲೂ, ಅವನು ಹೃದಯಪೂರ್ವಕವಾಗಿ ನನ್ನನ್ನು ಹಿಂಬಾಲಿಸಿದ್ದುದರಿಂದಲೂ ಅವನು ಸಂಚರಿಸಿ ಬಂದ ಆ ದೇಶಕ್ಕೆ ಅವನನ್ನು ಸೇರಿಸುವೆನು. ಅವನ ಸಂತಾನವು ಅದನ್ನು ಸ್ವಾಧೀನಪಡಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:24
17 ತಿಳಿವುಗಳ ಹೋಲಿಕೆ  

ಮನುಷ್ಯರನ್ನು ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ, ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ.


ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.


ಮತ್ತು ಯೆಹೋವನು “ಯೆಫುನ್ನೆಯ ಮಗನಾದ ಕಾಲೇಬನೊಬ್ಬನೇ ಯೆಹೋವನನ್ನು ಮನಃಪೂರ್ವಕವಾಗಿ ಅನುಸರಿಸಿದ್ದರಿಂದ, ಅವನೇ ಅದನ್ನು ನೋಡುವನು. ಅವನು ಸಂಚರಿಸಿದ ಪ್ರದೇಶವನ್ನು ಅವನಿಗೂ ಮತ್ತು ಅವನ ಸಂತತಿಯವರಿಗೂ ಕೊಡುವೆನು” ಎಂದು ಹೇಳಿದನು.


ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನು. ಆದುದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.


ಇಸ್ರಾಯೇಲರು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿದರು. ಕಾಲೇಬನು ಅವರನ್ನು ಸುಮ್ಮನಿರಿಸಿ, “ನಾವು ನಿರ್ಭಯವಾಗಿ ಆ ಬೆಟ್ಟದ ಸೀಮೆಗೆ ಹತ್ತಿಹೋಗಿ ಅದನ್ನು ಸ್ವಾಧೀನಪಡಿಸಿಕೊಳ್ಳೋಣ. ಅದನ್ನು ಜಯಿಸಲು ನಾವು ಶಕ್ತರಾಗಿದ್ದೇವೆ” ಎಂದು ಹೇಳಿದನು.


ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ.


ನನ್ನ ಮನಸ್ಸು ನಿನ್ನ ಕಟ್ಟಳೆಗಳಲ್ಲಿ ಆಸಕ್ತವಾಗಲಿ, ಆಗ ನನ್ನ ಆಶಾಭಂಗಕ್ಕೆ ಕಾರಣವಿರುವುದಿಲ್ಲ. ಕಾಫ್.


ಅವನು ಯೆಹೋವನ ಚಿತ್ತಾನುಸಾರವಾಗಿ ನಡೆದನು; ಆದರೆ ಯಥಾರ್ಥಚಿತ್ತನಾಗಿರಲಿಲ್ಲ.


ನಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥಾ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿ ಉಳ್ಳವರಾಗಿರುವುದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು.


ಅವರು ಪೂರ್ಣಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಯೆಹೋವನಿಗೆ ಕಾಣಿಕೆ ನೀಡಿದ್ದನ್ನು ನೋಡಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.


ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಮತ್ತು ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ಕಂದಾ, ನಿನ್ನ ಹೃದಯವನ್ನು ನನಗೆ ಕೊಡು, ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಆನಂದಿಸಲಿ.


ಯೆಹೋವನೇ, ಸಂಪೂರ್ಣಮನಸ್ಸಿನಿಂದ ಮೊರೆಯಿಟ್ಟಿದ್ದೇನೆ, ಸದುತ್ತರವನ್ನು ದಯಪಾಲಿಸು, ನಿನ್ನ ನಿಬಂಧನೆಗಳನ್ನು ಅನುಸರಿಸುವೆನು.


ಯೆಫುನ್ನೆಯ ಮಗನಾದ ಕಾಲೇಬನು ಮತ್ತು ನೂನನ ಮಗನಾದ ಯೆಹೋಶುವನು ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶವನ್ನು ಸೇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು